ಕನ್ನಡ ಗ್ರಾಹಕರಿಗೆ ಕನ್ನಡದಲ್ಲೇ ಜಾಹೀರಾತು


Team Udayavani, Aug 22, 2017, 12:08 PM IST

channapatna.jpg

ಚನ್ನಪಟ್ಟಣ: ಐಟಿ-ಬಿಟಿಯಲ್ಲಿ ಕನ್ನಡಿಗರಿಗೆ ಅವಕಾಶ ನೀಡಿ ಎಂದು ಬೇಡಿಕೆ ಇಟ್ಟು, ಐಟಿ-ಬಿಟಿ ಸೇರಿದ ಬಳಿಕ ಕನ್ನಡಿಗರೇ ಕನ್ನಡತನವನ್ನು ಮರೆಯುತ್ತಿರುವ ವೇಳೆ ಕನ್ನಡಿಗ ಟೆಕ್ಕಿಗಳ ತಂಡವೊಂದು ತಾವು ಸಿದ್ದಪಡಿಸಿರುವ ಆ್ಯಪ್‌ಅಚ್ಚಿ ಡಾಟ್‌ ಕಾಂ(appachhi.com)ಅನ್ನು ಕನ್ನಡದ ಮೂಲಕ ಪ್ರಚಾರ ಮಾಡಲು ಮುಂದಾಗಿ ಕನ್ನಡ ಪ್ರೇಮವನ್ನು ಮೆರೆಯುತ್ತಿದೆ.

ವಿವಿಧ ಕಂಪನಿಗಳು ತಮ್ಮ ಗ್ರಾಹಕರ ಸೇವೆಗಾಗಿ ತಮ್ಮದೇ ಆ್ಯಪ್‌ಗ್ಳನ್ನು ಸಿದ್ದಪಡಿಸಿ, ಆ್ಯಪ್‌ಗ್ಳನ್ನು ಬಳಸುವಂತೆ ಗ್ರಾಹಕರನ್ನು ಸೆಳೆಯಲು ವಿವಿಧ ಮಾರ್ಗಗಳನ್ನು ಹುಡುಕುತ್ತವೆ. ಅದರಂತೆ ತಮ್ಮ ತಂಡವೊಂದು ಅಭಿವೃದ್ಧಿಪಡಿಸಿದ ಆ್ಯಪ್‌ ಅನ್ನು ಪ್ರಚಾರ ಮಾಡಲು ಟೆಕ್ಕಿ “ಕನ್ನಡ ಮಾತನಾಡುವ ಗ್ರಾಹಕರು ಇರುವಾಗ ನಾವೇಕೆ ಕನ್ನಡದಲ್ಲಿ ಜಾಹೀರಾತು ಮಾಡಬಾರದು’ ಎಂಬ ನಾಮಫ‌ಲಕ ಹಿಡಿದು ಪಟ್ಟಣದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ರಸ್ತೆಗಳಾದ ಮಹಾತ್ಮ ಗಾಂಧಿ ರಸ್ತೆ, ಸಿಲ್ವರ್‌ ಜ್ಯುಬಿಲಿ ರಸ್ತೆ, ಬ್ರಿಗೇಡ್‌ ರಸ್ತೆ ಮುಂತಾದೆಡೆ ಹೋದಲೆಲ್ಲಾ ಈ ರೀತಿ ಬರಹವಿರುವ ನಾಮಫ‌ಲಕ ಹಿಡಿದು ಪ್ರಚಾರ ಮಾಡುವ ಮೂಲಕ ಕನ್ನಡ ಪ್ರೇಮ ಮೆರೆಯುತ್ತಿದ್ದಾನೆ.

 ಏನಿದು ಆ್ಯಪ್‌: ಜನರ ಕೈಯಲ್ಲಿ ವಿವಿಧ ಮಾದರಿಯ ಮೊಬೈಲ್‌ಗ‌ಳವೆ. ಮೊಬೈಲ್‌ಗ‌ಳಲ್ಲಿಯೇ ಸಕಲ ಮಾಹಿತಿಯನ್ನು ನೀಡುವ ಕಾಲಘಟ್ಟದಲ್ಲಿ ನಾವಿದ್ದೇವೆ. ಆದರೆ ಕೆಲವು ಮಾದರಿಯ ಮೊಬೈಲ್‌ಗ‌ಳಲ್ಲಿ ಕೆಲವು ಆ್ಯಪ್‌ಗ್ಳು ಕೆಲಸ ಮಾಡುವುದಿಲ್ಲ. ಇಂತಹ ಸಂದರ್ಭದಲ್ಲಿ ಜನರಿಗೆ ಮಾಹಿತಿ ನೀಡುವುದು ಸಾಧ್ಯವಾಗುವುದಿಲ್ಲ. ಇದಕ್ಕೆ ಆ್ಯಪ್‌ಗ್ಳನ್ನು ಸಿದ್ದಪಡಿಸಿರುವ ಕಂಪನಿಗಳನ್ನು ಕೇಳಲಾಗುವುದಿಲ್ಲ. 

ಈ ಬಗ್ಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿ ಸ್ವಂತವಾಗಿ ಏನಾದರೂ ಸಾಧಿಸುವ ಹಂಬಲ ಹೊಂದಿದ್ದ 15 ಮಂದಿಯ ತಂಡವೊಂದು ಸಂಶೋಧನೆ ನಡೆಸಿದಾಗ ಹುಟ್ಟಿಕೊಂಡಿದ್ದು ಆ್ಯಪ್‌ಅಚ್ಚಿ ಡಾಟ್‌ಕಾಂ.  ಕೇವಲ ಆ್ಯಪ್‌ಗ್ಳನ್ನು ಅಭಿವೃದ್ಧಿಪಡಿಸಿ ಆ್ಯಪ್‌ಗ್ಳಲ್ಲಿನ ದೋಷಗಳನ್ನು ಪತ್ತೆ ಮಾಡಿ ಅದಕ್ಕೆ ಸೂಕ್ತ ಪರಿಹಾರ ಕಲ್ಪಿಸಿ ಕಂಪನಿಗಳು ಮತ್ತು ಗ್ರಾಹಕರ ಬಾಂಧ‌ವ್ಯವನ್ನು ಗಟ್ಟಿಗೊಳಿಸುವುದೇ ಕೆಲಸವಾಗಬಾರದು ಎನಿಸಿದಾಗ ತಂಡಕ್ಕೆ ಕಾಣಿಸಿದ್ದು ಇಂಗ್ಲಿಷ್‌ ಸಂಸ್ಕೃತಿಗೆ ಬದಲಾಗುತ್ತಿರುವ ಯುವ ಜನತೆ. ಆಗ ಕನ್ನಡ ಪ್ರೇಮವನ್ನು ಬೆಳೆಸಲು ಪರ್ಯಾಯ ಮಾರ್ಗವನ್ನು ಹುಡುಕಿದಾಗ ಬಂದ ಐಡಿಯಾ ಕನ್ನಡ ಗ್ರಾಹಕರಿರುವಾಗ ಕನ್ನಡದಲ್ಲೇ ಪ್ರಚಾರ ಮಾಡುವುದು. 

ವಿವಿಧ ಸಂಸ್ಥೆಗಳು ಗ್ರಾಹಕರಿಗೆ ನೀಡಿರುವ ಆ್ಯಪ್‌ಗ್ಳು ಕೆಲವು ಮೊಬೈಲ್‌ಗ‌ಳಲ್ಲಿ ಸ್ಪಂದಿಸುವುದಿಲ್ಲ. ಆ್ಯಪ್‌ನಲ್ಲಿನ ದೋಷವನ್ನು ಪತ್ತೆ ಹಚ್ಚಿ ಆ್ಯಪ್‌ ಬಿಲ್ಡ್‌ಗಳಿಗೆ ವಿವರಿಸಿ ಅದನ್ನು ಪರಿಹರಿಸುತ್ತೇವೆ. ಬೇರೆಡೆ ದೋಷದ ವರದಿ ನೀಡಲು ವಾರಗಳ ಸಮಯ ಪಡೆಯುತ್ತಾರೆ. ಆದರೆ ಆ್ಯಪ್‌ಅಚ್ಚಿ ಡಾಟ್‌ ಕಾಂ.ನಲ್ಲಿ ದೇಶದಲ್ಲಿ ಇದವರೆಗೆ ಹೊರಬಂದಿರುವ ಆ್ಯಪ್‌ಗ್ಳಲ್ಲಿನ ದೋಷಗಳನ್ನು ಕಂಡು ಹಿಡಿದು ಕೇವಲ 15 ನಿಮಿಷದಲ್ಲಿ ಆ ದೋಷವನ್ನು ಪರಿಹರಿಸಲಾಗುವುದು ಎಂದು ಆ್ಯಪ್‌ ಸಿಇಒ ಪ್ರದೀಪ್‌ ವಿವರಿಸುತ್ತಾರೆ.

ಕನ್ನಡವೇ ಮುಖ್ಯ: ಇಂದು ವಿದೇಶಿ ಮತ್ತು ಸ್ವದೇಶಿ ಕಂಪನಿಗಳು ವಿವಿಧ ಆ್ಯಪ್‌ಗ್ಳನ್ನು ಸಿದ್ದಪಡಿಸಿ ಅದರ ಪ್ರಯೋಜನ ಪಡೆಯುವಂತೆ ಇಂಟರ್‌ನೆಟ್‌ ಮೂಲಕ ಪ್ರಚಾರ ಮಾಡುತ್ತಾರೆ. ಆದರೆ ಯಾವುದೇ ಕಂಪನಿಯ ಆ್ಯಪ್‌ಗ್ಳನ್ನು ಹೆಚ್ಚಿನದಾಗಿ ಬಳಸುವುದು ನಮ್ಮ ಕನ್ನಡಿಗರೇ, ಈಗಿರುವಾಗ ಕನ್ನಡಿಗರಿಗೆ ಕನ್ನಡದಲ್ಲೇ ಜಾಹೀರಾತು ಪ್ರಚಾರ ಮಾಡುವ ಅವರ ಆ್ಯಪ್‌ದೋಷಗಳ ಬಗ್ಗೆ ಮೊದಲು ಗ್ರಾಹಕರ ಮೂಲಕವೇ ಫೇಸ್‌ಬುಕ್‌ ಮತ್ತು ವ್ಯಾಟ್ಸ್‌ ಆ್ಯಪ್‌ ಮೂಲಕ ತಿಳಿಸಲಾಗುತ್ತದೆ ಎಂದು ಆ್ಯಪ್‌ ಅಚ್ಚಿ ಡಾಟ್‌ಕಂ ನ ಮಾರ್ಕೆಟಿಂಗ್‌ ಪ್ರತಿನಿಧಿ ಜನಾರ್ದನ್‌ ವಿವರಿಸುತ್ತಾರೆ.

ಇಂಗ್ಲಿಷ್‌ ಬಿಟ್ಟು ಕನ್ನಡದಲ್ಲಿ ತಮ್ಮ ಆ್ಯಪ್‌ ಪ್ರಚಾರ ಮಾಡುತ್ತಿರುವ ಪಟ್ಟಣದ ಜನಾರ್ದನ್‌ ಮೊದಮೊದಲು ಮುಜುಗರದಿಂದಲೇ ಕನ್ನಡದಲ್ಲಿ ಪ್ರಚಾರ ಮಾಡಲು ಆರಂಭಿಸಿದರು. ಇವರ ಪ್ರಯತ್ನಕ್ಕೆ ಅವರ ಸ್ನೇಹಿತರು, ಅವರ ಸ್ನೇಹಿರು, ಕನ್ನಡಾಭಿಮಾನಿಗಳು, ಕಾಲೇಜು ಯುವಕರು ಸೇರಿದಂತೆ ವಿವಿಧ ಸಂಘಟನೆಗಳು ವಿವಿಧ ಸಂಘ-ಸಂಸ್ಥೆಗಳ ಬೆಂಬಲ ದೊರೆತಿದ್ದು, ಇಂದು ಮತ್ತಷ್ಟು ಉತ್ಸುಕತೆಯಿಂದ ಪ್ರಚಾರಕ್ಕೆ ತೊಡಗಿ, ಕನ್ನಡತನವನ್ನು ಮತ್ತಷ್ಟು ಹೆಚ್ಚಿಸುತ್ತಿದ್ದು, ಎಲ್ಲರ ಪ್ರಸಂಶೆಗೆ ಪಾತ್ರವಾಗಿದೆ.

ತಮ್ಮ ಆ್ಯಪ್‌ಅಚ್ಚಿ ಡಾಟ್‌ ಕಾಂನಲ್ಲಿ ಪ್ರಚಾರಕ್ಕೆ ಆರ್ಥಿಕ ಸಮಸ್ಯೆ ಎದುರಾಗ ಕನ್ನಡ ಪ್ರಚಾರದ ಬಗ್ಗೆ ಚಿಂತನೆ ನಡೆಸಿದೆವು. ಇದಕ್ಕೆ ಸಂಪೂರ್ಣ ಬೆಂಬಲ ದೊರೆತು ಹಲವು ಆ್ಯಪ್‌ಗ್ಳ ಕಂಪನಿ ಬಿಲ್ಡ್‌ಗಳು ತಮ್ಮ ಆ್ಯಪ್‌ನ ದೋಷ ಪರಿಹರಿಸಿಕೊಂಡಿದ್ದಾರೆ.         
-ಪ್ರದೀಪ್‌, ಆ್ಯಪ್‌ಅಚ್ಚಿ ಡಾಟ್‌ ಕಾಂ.

ಇಂದು ರಾಜ್ಯದಲ್ಲಿ ಕನ್ನಡತನ ಮರೆಯಾಗಿದೆ. ಎಲ್ಲೆಲ್ಲೂ ಪರಭಾಷೆ ವ್ಯಾಮೋಹ ಹೆಚ್ಚಾಗುತ್ತಿದೆ. ಈ ನಡುವೆ ತಮ್ಮ ಸಂಸ್ಥೆಯ ಆ್ಯಪ್‌ನ ಪ್ರಚಾರವನ್ನು ಕನ್ನಡದಲ್ಲಿ ಪ್ರಚಾರ ಮಾಡಲು ಮುಂದಾಗಿರುವ ಪಟ್ಟಣದ ಯುವಕನ ಕನ್ನಡ ಪ್ರೇಮ ಶ್ಲಾಘನೀಯ. 
-ರಮೇಶ್‌ಗೌಡ, ರಾಜಾಧ್ಯಕ್ಷರು, ಕಸ್ತೂರಿ ಕರ್ನಾಟಕ ಜನಪರ ವೇದಿಕೆ.

* ಸಿ.ಎನ್‌.ವೆಂಕಟೇಶ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.