ನಮೋ 3 ವರ್ಷ: ಗಿಮಿಕ್‌ಗಳು ಇನ್ನು ಸಾಕು


Team Udayavani, May 27, 2017, 2:25 AM IST

Kumaraswamy-H-D-4-600.jpg

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಆಡಳಿತಕ್ಕೆ ಬಂದು ಇದೀಗ ಮೂರು ವರ್ಷ ತುಂಬಿದೆ. ಬಹುನಿರೀಕ್ಷೆಗಳನ್ನು ಹುಟ್ಟಿಸಿ ಅಧಿಕಾರಕ್ಕೆ ಬಂದ ಈ ಸರಕಾರ, ದೇಶಾದ್ಯಂತ ಜನರಲ್ಲಿ ಹೊಸ ಹೊಸ ಆಕಾಂಕ್ಷೆಗಳನ್ನು ಬಿತ್ತಿದ್ದಲ್ಲದೆ, ಬಹುಚರ್ಚಿತವಾಗುವಂತೆಯೂ ಮಾಡಿದೆ. ಕಳೆದ ಮೂರು ವರ್ಷಗಳಲ್ಲಿ ಸರಕಾರ ಮಾಡಿದ್ದೇನು? ಎದ್ದದ್ದೆಲ್ಲಿ? ಬಿದ್ದಿದ್ದೆಲ್ಲಿ? ಈ ಕುರಿತಾಗಿ ರಾಜಕೀಯ ನಾಯಕರ ವಸ್ತುನಿಷ್ಠ ಅಭಿಪ್ರಾಯ ಇಲ್ಲಿದೆ.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೂರು ವರ್ಷಗಳಲ್ಲಿ ಪ್ರಧಾನಿ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಘೋಷಣೆ­ಯೊಂದಿಗೆ ಮಾಡಿದ ಭಾಷಣಗಳು, ‘ಮನ್‌ಕಿ ಬಾತ್‌’ ಮೂಲಕ ಆಡಿದ ಮಾತುಗಳು ಕೇಳಲು ಹಿತವಾಗಿತ್ತು ಎನ್ನುವುದು ಬಿಟ್ಟರೆ ಬೇರೇನೂ ಆಗಿಲ್ಲ. ಚುನಾವಣೆಗೆ ಮುನ್ನ ಅವರು ದೇಶದ ಜನರ ಮುಂದಿಟ್ಟಿದ್ದ ಕನಸುಗಳು ನನಸಾಗಿಲ್ಲ. ದೇಶದ ಅಭಿವೃದ್ಧಿ ಮಾಡುವುದು ಎಂದರೆ ಕನಸುಗಳ ಮಾರ್ಕೆಟಿಂಗ್‌ ಮಾಡುವುದಲ್ಲ. ಭಯೋತ್ಪಾದನೆ ನಿಲ್ಲಲಿಲ್ಲ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ, ರೈತರ ಆತ್ಮಹತ್ಯೆ ನಿಲ್ಲಲಿಲ್ಲ, ನಿರಂತರ ಬರಕ್ಕೆ ತುತ್ತಾದ ಕರ್ನಾ­ಟಕದ ಬಗ್ಗೆ ಕೇಂದ್ರ ಸರ್ಕಾರ ಕರುಣೆ ತೋರಲಿಲ್ಲ. ಮಾತಿನ ಮೋಡಿ ಮೂಲಕ ‘ಐ ವಾಷ್‌’ ಹಾಗೂ ‘ಮೈಂಡ್‌ ವಾಷ್‌’ ಮಾಡುತ್ತಿರುವುದಷ್ಟೇ ಇವರ ಸಾಧನೆ. ಕೆಲವೇ ಆಯ್ದ ಕೈಗಾರಿಕೋದ್ಯಮಿಗಳ ಕಪಿ ಮುಷ್ಠಿಯಲ್ಲಿ ಕೇಂದ್ರ ಸರ್ಕಾರ ಸಿಲುಕಿದೆ. ಚುನಾವಣೆಗೆ ಮುಂಚೆ ಬಿಜೆಪಿ ಬಿಂಬಿಸಿಕೊಂಡಿದ್ದ ಪರಿ ನೋಡಿದರೆ ಇಡೀ ದೇಶದ ಸಮಗ್ರ ಚಿತ್ರಣ ಬದಲಾಗುತ್ತದೆ ಎಂದು ನಿರೀಕ್ಷಿಸಿದ್ದೇನೋ ಹೌದು. ಆದರೆ,  ಸರ್ಕಾರ ಸಾಗಿ ಬಂದ ಹಾದಿ ನೋಡಿದರೆ ಯಾವುದೇ ಜಾದೂ ನಡೆಯಲಿಲ್ಲ. ‘ಒನ್‌ ಮ್ಯಾನ್‌’ ಶೋ ದೇಶದ ಜನರಿಗೂ ಅರ್ಥವಾಗಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಮಂತ್ರಕ್ಕಿಂತ ಉಗುಳೇ ಹೆಚ್ಚು ಎಂಬ ನಾಣ್ಣುಡಿ ನೆನಪಾಗುತ್ತದೆ. ಮೂರು ಅಂಶಗಳನ್ನು ರಾಜ್ಯದ ಜನತೆ ಮುಂದಿಡುತ್ತೇನೆ. ಪ್ರಧಾನಮಂತ್ರಿ ಫ‌ಸಲ್‌ ಭಿಮಾ ಯೋಜನೆಯಿಂದ ರೈತರಿಗೆ ಪ್ರಯೋಜನವಾಗುತ್ತಿಲ್ಲ. 

ಕರ್ನಾಟಕದಲ್ಲಿ ಕಳೆದ ವರ್ಷ 2500 ಕೋಟಿ ರೂ. ಪ್ರೀಮಿಯಂ ರೈತರು ಪಾವತಿಸಿದ್ದಾರೆ. ಆದರೆ, ಬೆಳೆನಷ್ಟಕ್ಕೆ ರೈತರಿಗೆ ವಿಮೆಕೊಟ್ಟಿಲ್ಲ. ದೇಶಾದ್ಯಂತ 80 ಸಾವಿರ ಕೋಟಿ ರೂ. ರೈತರಿಂದ ಪ್ರೀಮಿಯಂ ಪಾವತಿ­ಯಾಗಿದೆ ಎಂಬ ಅಂದಾಜು ಇದೆ. ಹಾಗಾದರೆ, ಇಷ್ಟು ದೊಡ್ಡ ಮೊತ್ತ ಯಾರಿಗೆ ತಲುಪಿದೆ? ಕೇಂದ್ರ ಸರ್ಕಾರ ಒಪ್ಪಂದ ಮಾಡಿ­ಕೊಂಡಿರುವ ಆ ವಿಮಾ ಕಂಪನಿಗೂ ಮೋದಿ ಅಥವಾ ಬಿಜೆಪಿಗೆ  ಸಂಬಂಧ ಇದೆಯಾ ಎಂಬ ಅನುಮಾನವೂ ಇದೆ. ಸ್ಮಾರ್ಟ್‌ ಸಿಟಿ, ಅಮೃತ್‌ ಸಿಟಿ ಯೋಜನೆಗಳಡಿ ಕೇಂದ್ರ ಸರ್ಕಾರ ಕೊಡುವ ಹಣಕ್ಕಿಂತ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಭರಿಸುವ ಹಣವೇ ಹೆಚ್ಚು. ಆ ಯೋಜನೆಗೆ ಆಯ್ಕೆ­ಯಾ­ಗಬೇಕಾದರೆ ಕೊಳೆಗೇರಿ ಇರಬಾರದು, ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದೆಲ್ಲಾ ಷರತ್ತುಗಳಿವೆ. ಎಲ್ಲವೂ ಸರಿ ಇದ್ದರೆ ಯೋಜನೆ ಯಾಕೆ ಬೇಕು? 

ಸ್ವಚ್ಛ ಭಾರತ್‌ ಬಗ್ಗೆ ದೊಡ್ಡದಾಗಿ ಹೇಳಿ­ಕೊಳ್ಳುತ್ತಾರೆ. ಪ್ರಾರಂಭದಲ್ಲಿ ಗರಿ ಗರಿ ಬಟ್ಟೆ ಹಾಕಿಕೊಂಡು ಪೊರಕೆ ಹಿಡಿದು ಮಾಧ್ಯಮಗಳಿಗೆ ಪೋಸ್‌ ಕೊಟ್ಟಿದ್ದು ಬಿಟ್ಟರೆ ಏನೂ ಆಗಲಿಲ್ಲ. ಮುಂದಿನ 2 ವರ್ಷದಲ್ಲಾದರೂ ಮೋದಿ ‘ಗಿಮಿಕ್‌’­ಗಳಿಗೆ ಒತ್ತುಕೊಡು­ವುದು ಬಿಟ್ಟು ಜನಸಾಮಾನ್ಯರ ಸಮಸ್ಯೆ ನಿವಾರಿಸಲು ಮುಂದಿನ ವರ್ಷಗಳಲ್ಲಿ  ಪ್ರಯತ್ನಪಡಲಿ.

– ಎಚ್‌.ಡಿ.ಕುಮಾರಸ್ವಾಮಿ ; ಮಾಜಿ ಮುಖ್ಯಮಂತ್ರಿಗಳು

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.