ಜನರ ಒಕ್ಕಲೆಬ್ಬಿಸುವುದಕ್ಕೆ ಖಂಡನೆ


Team Udayavani, Jan 10, 2017, 1:04 PM IST

Yash-Reaction.jpg

ಶಿವಮೊಗ್ಗ: ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ವಿಧಿವಿಧಾನಗಳನ್ನು ಪಾಲಿಸದೇ ಕಂದಾಯ ಭೂಮಿಯನ್ನು ಶರಾವತಿ ಅಭಯಾರಣ್ಯವೆಂದು ಘೋಷಿಸಿ, ಜನರನ್ನು ಒಕ್ಕಲೆಬ್ಬಿಸಲು ಹೊರಟಿರುವುದನ್ನು ಖಂಡಿಸಿ ಶರಾವತಿ ಕಣಿವೆ ಜನ ಹೋರಾಟ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಯಾವುದೇ ಒಂದು ಪ್ರದೇಶ ಅಭಯಾರಣ್ಯವೆಂದು ಘೋಷಣೆಯಾಗಬೇಕಾದರೆ ಅದಕ್ಕೆ ನಿಗದಿತವಾದ ಕಾನೂನು ಪ್ರಕ್ರಿಯೆಗಳಿವೆ. ಆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಸರ್ಕಾರ ಅದನ್ನು ಅಧಿಕೃತವಾಗಿ ಆದೇಶಿಸಲಿದೆ. ಆದರೆ ಈ ಯಾವುದೇ ಪ್ರಕ್ರಿಯೆ ನಡೆಯದಿದ್ದರೂ ಕೂಡ ಅಧಿಕಾರಿಗಳು ಶರಾವತಿ ಅಭಯಾರಣ್ಯವೆಂದು ಹೇಳುತ್ತಾ ಅಲ್ಲಿನ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಯತ್ನ ನಡೆಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. 

ಅಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದಂತೆ ತಡೆ ಒಡ್ಡಲಾಗುತ್ತಿದೆ. ಜಮೀನು ಮಾರಾಟ ಮಾಡಲು ಬಿಡುತ್ತಿಲ್ಲ. ಮಾರಾಟ ಮಾಡುವುದಾದರೆ ಕಡಿಮೆ ಬೆಲೆಗೆ ಅರಣ್ಯ ಇಲಾಖೆಗೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಇದರಿಂದಾಗಿ ನಿವಾಸಿಗಳು ಜಮೀನು ಅಭಿವೃದ್ಧಿ ಮಾಡಲು ಅಥವಾ ಮಾರಾಟ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಅಭಯಾರಣ್ಯವೆಂದು ಹೇಳುತ್ತಿರುವ 432 ಚಕಿಮೀ ಪ್ರದೇಶದಲ್ಲಿ ಸುಮಾರು 12ಸಾವಿರ ಜನಸಂಖ್ಯೆ ಇದೆ. ಬಹುತೇಕ ಎಲ್ಲಾ ಕುಟುಂಬಗಳು ಶರಾವತಿ ಮುಳುಗಡೆಯಿಂದ ಪುನರ್ವಸತಿ ಪಡೆದವಾಗಿವೆ. ಆದರೂ ಕೂಡ ಈ ಕುಟುಂಬಗಳನ್ನು ಒಕ್ಕಲೆಬ್ಬಿಸುವ ರೀತಿಯಲ್ಲಿ ಕ್ರಿಮಿನಲ್‌ ಕೇಸು ಹಾಕಲಾಗುತ್ತಿದೆ. ಇದರಿಂದಾಗಿ ಇಡೀ ಪ್ರದೇಶದ ಜನರು ಆತಂಕ ಎದುರಿಸುವಂತಾಗಿದೆ. 

ಇವರನ್ನು ಒಕ್ಕಲೆಬ್ಬಿಸಿದರೆ 3ನೇ ಬಾರಿಗೆ ಸಂತ್ರಸ್ತರಾಗಲಿದ್ದಾರೆ ಎಂದರು. 1972 ರ ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ 431 ಚ. ಕಿಮೀ ಪ್ರದೇಶವನ್ನು ಶರಾವತಿ ಅಭಯಾರಣ್ಯವೆಂದು ಘೋಷಿಸಲು ಸರ್ಕಾರ ತೀರ್ಮಾನಿಸಿತ್ತು. ನಂತರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್‌ 19 ರಿಂದ 26 ಎ ವರೆಗೆ ಇರುವಂತೆ ಜಿಲ್ಲಾಧಿಕಾರಿಗಳು ಈ ಪ್ರದೇಶದಲ್ಲಿ ಜನರೊಂದಿಗೆ ಮಾತುಕತೆ ನಡೆಸಬೇಕು. 

ನಂತರ ಗಡಿಯನ್ನು ಗುರುತಿಸಬೇಕು ಎಂದು ಒತ್ತಾಯಿಸಿದರು. 1972ರ ವನ್ಯಜೀವಿ ರಕ್ಷಣಾ ಕಾಯ್ದೆ  ಪ್ರಕಾರ ಸೆಕ್ಷನ್‌ 19 ರಿಂದ 25 ರವರೆಗೆ ಕಾಯ್ದೆ ವಿಧಿವಿಧಾನಗಳನ್ನು ಈಗಲಾದರೂ ಪಾಲಿಸಿ ಹಕ್ಕುದಾರರ ಅಹವಾಲುಗಳನ್ನು ಕೂಲಂಕಷವಾಗಿ ಪರಿಶೀಲಿಸಿ 26ಎ ಪ್ರಕಾರ ಅಂತಿಮ ಆದೇಶವನ್ನು ಜನಾಭಿಪ್ರಾಯದಂತೆ ರದ್ದುಗೊಳಿಸಲು ಡಿಸಿ ಸೂಕ್ತ ಶಿಫಾರಸ್ಸನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಆಗ್ರಹಿಸಿದರು. 

ಶಾಸಕರಾದ ಮಧುಬಂಗಾರಪ್ಪ, ಕೆ.ಬಿ. ಪ್ರಸನ್ನಕುಮಾರ್‌, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಶರಾವತಿ ಕಣಿವೆ ಜನಹೋರಾಟ ಸಮಿತಿ ಅಧ್ಯಕ್ಷೆ ಪ್ರಭಾವತಿ ಚಂದ್ರಕಾಂತ ಆರೋಡಿ, ಕಾಂಗ್ರೆಸ್‌ ಅಧ್ಯಕ್ಷ ತೀ.ನಾ. ಶ್ರೀನಿವಾಸ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ ನಿರಂಜನ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ, ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಜಿ.ಪಂ. ಸದಸ್ಯರಾದ ಕಾಗೋಡು ಅಣ್ಣಪ್ಪ, ರಾಜಶೇಖರ್‌ ಸೇರಿದಂತೆ ಸಾವಿರಾರು ರೈತರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.