ಎರಡು ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಜಿಮ್‌ ನಿರ್ಮಾಣ


Team Udayavani, May 18, 2017, 9:05 AM IST

PRAMOD.jpg

– ಯುವ ಸಬಲೀಕರಣ, ಕ್ರೀಡಾ ಇಲಾಖೆ ಸಾಧನೆಗಳೇನು?
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಖನ್ನತೆ ಅಥವಾ ದುಶ್ಚಟಕ್ಕೆ ಒಳಗಾದ ಯುವಕರಿಗೆ ಯುವ ಸ್ಪಂದನಾ ಕಾರ್ಯಕ್ರಮದ ಮೂಲಕ ನಿಮ್ಹಾನ್ಸ್‌ನಲ್ಲಿ ಕೌನ್ಸೆಲಿಂಗ್‌ ನೀಡುತ್ತಿದೆ. ರಾಜ್ಯದಲ್ಲಿ 32 ಕ್ರೀಡಾ ವಸತಿ ನಿಲಯವಿದ್ದು, ಉತ್ತಮ ನಿರ್ವಹಣೆಯಾಗುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅಂದರೆ 16 ಸಿಂಥೆಟಿಕ್‌ ಟ್ರ್ಯಾಕ್‌ ರಾಜ್ಯದಲ್ಲಿದೆ. ಈಜು ಹಾಗೂ ಪರ್ವತಾರೋಹಣದಲ್ಲಿ ರಾಜ್ಯದ ಪಟುಗಳು ಕಳೆದ ಅನೇಕ ವರ್ಷದಿಂದ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುತ್ತಿದ್ದಾರೆ. ಆದರೆ, ಕ್ರೀಡಾ ಬಜೆಟ್‌ ಕೇವಲ 145 ಕೋಟಿ ರೂ. ಇತ್ತು. ನಾನು ಸಚಿವನಾದ ನಂತರ ಮುಖ್ಯಮಂತ್ರಿ ಜತೆ ಚರ್ಚಿಸಿ ಅದರ ಪ್ರಮಾಣ 285 ಕೋಟಿ ರೂ.ಗೆ ಏರಿಸಲಾಗಿದೆ. ಈಗಾಗಲೇ 22 ಕ್ರೀಡಾಂಗಣಗಳನ್ನು ಅಭಿವೃದ್ಧಪಡಿಸಿದ್ದೇವೆ. ಇನ್ನೂ 26 ಜಿಲ್ಲಾ ಹಾಗೂ ತಾಲೂಕು ಕ್ರೀಡಾಂಗಣ ಸದ್ಯವೇ ಸಿದ್ಧವಾಗಲಿವೆ. ರಾಜ್ಯಾದ್ಯಂತ 10 ಕ್ರೀಡಾ ಅಕಾಡೆಮಿಗಳನ್ನು ಸ್ಥಾಪನೆ ಮಾಡಲಿದ್ದೇವೆ.

– ಕ್ರೀಡಾ ತರಬೇತಿದಾರರಿಗೆ ವೇತನ ತಾರತಮ್ಯ ಮಾಡಲಾಗುತ್ತಿದೆ ಎಂಬ ಮಾತಿದೆಯಲ್ಲಾ ?
ಕ್ರೀಡಾ ತರಬೇತುದಾರರ ವೇತನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸದ್ಯ 90 ತರಬೇತುದಾರರಿದ್ದು, ಹೊಸದಾಗಿ 100 ತರಬೇತುದಾರರ ನೇಮಕ ಮಾಡಲಿದ್ದೇವೆ. ಹಾಗೆಯೇ ಅಕಾಡೆಮಿಯಿಂದ ಪರಿಣಿತ ತರಬೇತುದಾರರನ್ನು ಪಡೆದು ಅವರಿಗೆ ಉತ್ತಮ ಸಂಬಳ ಹಾಗೂ ಸೌಲಭ್ಯ ಒದಗಿಸಲಿದ್ದೇವೆ. ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಜಿಮ್‌ ನಿರ್ಮಾಣ ಮಾಡಲಿದ್ದೇವೆ.

– ಇಲಾಖೆಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದೀರಾ?
ಕ್ರೀಡಾ ವಿಜ್ಞಾನ ಕೇಂದ್ರವನ್ನು ಬೆಂಗ ಳೂರು ಮತ್ತು ಉಡುಪಿಯಲ್ಲಿ ಆರಂಭಿಧಿಸಲು ಮುಂದಾಗಿದ್ದೇವೆ. ಮಾನಸಿಕ ಹಾಗೂ ವೈಜ್ಞಾನಿಕ ವಾಗಿ ಕ್ರೀಡಾಪಟುಗಳನ್ನು  ಕ್ರೀಡೆಗೆ ಸಜ್ಜುಗೊಳಿಸುವುದು. ಕ್ರೀಡಾ ಪಟುಗಳಲ್ಲಿ ಭಯ, ಹಿಂಜರಿಕೆ ಆಗದಂತೆ ಆತ್ಮಸ್ಥೈರ್ಯ ಹೆಚ್ಚಿಸಲು ಬೇಕಾದ ಚಿಕಿತ್ಸೆ ಅಥವಾ ಕೌನ್ಸೆಲಿಂಗ್‌ ನೀಡಲು ಇದು ಸಹಕಾರಿ. 

– ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗೆ ಪ್ರೋತ್ಸಾಹ ಹೇಗಿದೆ?
ಯುವ ಚೈತನ್ಯ ಕಾರ್ಯಕ್ರಮದ ಮೂಲಕ ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಮಾಡುತ್ತಿದ್ದೇವೆ. 40 ಸಾವಿರ ರೂ.ಗಳ ಕ್ರೀಡಾ ಕಿಟ್‌ಅನ್ನು 5 ಸಾವಿರ ಗ್ರಾಮೀಣ ಯುವಕ ತಂಡಕ್ಕೆ ನೀಡಲಿದ್ದೇವೆ. ಇದಕ್ಕಾಗಿ 20 ಕೋಟಿ ರೂ. ಮಂಜೂರಾಗಿದೆ. 

– ಕ್ರೀಡಾಂಗಣಗಳಿಗೆ ಕಾಯಕಲ್ಪವಿದೆಯೇ?
ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಕೋರಮಂಗಲ ಕ್ರೀಡಾಂಗಣ ಹಾಗೂ ಹಾಕಿ ಕ್ರೀಡಾಂಗಣ ಅಭಿವೃದ್ಧಿಗೆ ಅಗತ್ಯ ಅನುದಾನ ಮೀಸಲಿಟ್ಟಿದ್ದೇವೆ. ಸಾವಿರ ಕ್ರೀಡಾಪಟುಗಳನ್ನು ಗುರುತಿಸಿ ಕೇಂದ್ರ, ರಾಜ್ಯ, ಖಾಸಗಿ ಸಂಸ್ಥೆಗಳ ಮೂಲಕ ದತ್ತು ಸ್ವೀಕಾರ ಕಾರ್ಯಕ್ರಮ ಮಾಡಲಿದ್ದೇವೆ. ದತ್ತು ಪಡೆದ ಕ್ರೀಡಾಪಟುಗಳ ಎಲ್ಲಾ ವೆಚ್ಚ ಅವರ ಮೂಲಕವೇ ಬರಿಸುವಂತೆ ಮಾಡಧಿಲಿದ್ದೇವೆ. ಹಾಗೆಯೇ ಒಲಂಪಿಕ್‌, ಏಷಿಯನ್‌ ಕ್ರೀಡಾಕೂಟ ಹಾಗೂ ಕಾಮನ್‌ ವೆಲ್ತ್‌ ಕ್ರೀಡೆಯಲ್ಲಿ ಗೆದ್ದವರಿಗೆ ಸರ್ಕಾರಧಿದಿಂದಲೇ ನೇರವಾಗಿ  ಎ ಅಥವಾ ಬಿ ದರ್ಜೆಯ ನೌಕರಿ ನೀಡಲಾಗುವುದು.

– ಕ್ರೀಡಾ ನೀತಿ ಅನುಷ್ಠಾನ ವಿಳಂಬ ಯಾಕೆ? 
ಕ್ರೀಡಾನೀತಿ ಅಂತಿಮ ಹಂತದಲ್ಲಿದ್ದು, ಕ್ಯಾಬಿನೆಟ್‌ಗೆ ಬರಲಿದೆ. ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್ ಹಾಗೂ ಅರಣ್ಯ, ಅಗ್ನಿಶಾಮಕ ಹಾಗೂ ಪೊಲೀಸ್‌ ಮೊದಲಾದ ಶಕ್ತಿ ಮತ್ತು ಯುಕ್ತಿಯ ಮೂಲಕ ಕೆಲಸ ಮಾಡಬೇಕಾದ ಇಲಾಖೆಯಲ್ಲಿ ಕ್ರೀಡಾ ಕೋಟ ಹೆಚ್ಚಿಸಲು ಕ್ರಮ ಈ ನೀತಿಯಲ್ಲಿದೆ.

– ಕ್ರೀಡಾಂಗಣದ ಉಸ್ತುವಾರಿಗೆ ಹೊಸ ರೂಪ ನೀಡುವಿರಾ?
ಕ್ರೀಡಾಂಗಣ ಉಸ್ತುವಾರಿ ಸಮಿತಿಯಿಂದ ಜಿಲ್ಲಾಧಿಕಾರಿಯವರನ್ನು ತೆಗೆಸಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ರಾಜ್ಯದ 14 ಈಜುಕೊಳಗಳನ್ನು ಅಭಿವೃದ್ಧಿಪಡಿಸಿದ್ದೇವೆ. ಇನ್ನೂ 10 ಸದ್ಯವೇ ಅಭಿವೃದ್ಧಿಯಾಗಲಿದೆ. ಎಲ್ಲಾ ಈಜುಕೊಳದ ನಿರ್ವಹಣೆ ಸರ್ಕಾರವೇ ಮಾಡಲಿದೆ.  

– ಕ್ರೀಡೆಗೆ ಉತ್ತೇಜನ ನೀಡಲು ಇಲಾಖೆಯ ಪರಿಣಾಮಕಾರಿ ಕಾರ್ಯಕ್ರಮಗಳೇನು?
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಕ್ಯಾಶ್‌ ಅವಾರ್ಡ್‌ ನೀಡುತ್ತಿದ್ದೇವೆ. ಅವರ ಸಾಧನೆಯ ಆಧಾರದಲ್ಲಿ 2 ಲಕ್ಷ ಮೂರು, 5 ಲಕ್ಷ ರೂ. ತನಕವೂ ನೀಡುತ್ತಿದ್ದೇವೆ. 2012 ರಿಂದ  ಈ ಹಣ ನೀಡಿಲ್ಲ. ಈಗ ಹಣಕಾಸು ಇಲಾಖೆಗೆ ಪ್ರಸ್ತಾವನೆ ಹೋಗಿದೆ. ಸದ್ಯವೇ ಸುಮಾರು 7ರಿಂದ 8 ಕೋಟಿ ರೂ.ವಿತರಣೆಯಾಗಲಿದೆ.

– ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಖಾಸಗಿ ಸಂಸ್ಥೆಗಳಿಗೆ ಸರ್ಕಾರದಿಂದ ಸಿಗುತ್ತಿರುವ ಅನುಕೂಲವೇನು? 
ಕ್ರೀಡಾ ಇಲಾಖೆಗೆ ಪ್ರೋತ್ಸಾಹ ನೀಡುವ ಖಾಸಗಿ ಸಂಘ ಸಂಸ್ಥೆಗಧಿಳಿಗೆ 10 ಸಂಘ ಸಂಸ್ಥೆಗೆ ವಾರ್ಷಿಕವಾಗಿ ತಲಾ 5 ಲಕ್ಷ ರೂ.  ನಗದು ಬಹುಮಾನ ನೀಡುವ ಯೋಜನೆ ರೂಪಿಸಲಾಧಿಗಿದೆ. ಇದಕ್ಕೆ ಕ್ರೀಡಾ ಪೋಷಕ ಪ್ರಶಸ್ತಿ ಎಂದು ನಾಮಕರಣ ಮಾಡಿದ್ದೇವೆ.

– ಮೀನುಗಾರಿಕೆ  ಇಲಾಖೆಯ ಸಾಧನೆ ಏನು?
ಮೀನುಗಾರಿಕಾ ಇಲಾಖೆಯಲ್ಲಿ ಡೀಸೆಲ್‌ ಸಬ್ಸಿಡಿ 100 ಕೋಟಿ ಯಿಂದ 145 ಕೋಟಿ ರೂ. ಹೆಚ್ಚಿಸಿ, ಮೀನುಗಾರರ ಖಾತೆಗೆ ನೇರವಾಗಿ ಜಮಾ ಮಾಡುತ್ತಿದ್ದೇವೆ. ಕರಾವಳಿ ಮೀನುಗಾರ ಮಹಿಳೆಯರಿಗೆ ಶೇ.2ಷ್ಟು ಬಡ್ಡಿದರದಲ್ಲಿ ಸಾಲ ನೀಡಿ, ಅದರ ಸಬ್ಸಿಡಿ ಹಣ 7 ಕೋಟಿಯನ್ನು ರಾಜ್ಯ ಸರ್ಕಾರ ತುಂಬಿ ಕೊಟ್ಟಿದೆ. ಸಮುದ್ರದಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದವರ ಕುಟುಂಬಕ್ಕೆ ನೀಡುವ ಪರಿಹಾರದ ಪ್ರಮಾಣವನ್ನು 2 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದ್ದೇವೆ.

– ಒಳನಾಡು ಮೀನುಗಾರಿಕೆ ಬಗ್ಗೆ  ಹೆಚ್ಚು ಗಮನ ನೀಡುತ್ತಿಲ್ಲ ಎಂಬ  ದೂರಿದೆಯಲ್ಲಾ?
ಒಳನಾಡು ಮೀನುಗಾರಿಕಾ ನೀತಿ ರಚನೆ ಮಾಡುತ್ತಿದ್ದೇವೆ, ಈ ಮೂಲಕ ಒಳನಾಡು ಮೀನು ಇಳುವರಿಯನ್ನು ಕನಿಷ್ಠ 10ಪಟ್ಟು ಹೆಚ್ಚಿಸಲು ಬೇಕಾದ ರೀತಿ- ನೀತಿ ಸಿದ್ಧವಾಗುತ್ತಿದೆ.

– ವಿವಿಧ ರಾಜ್ಯಗಳ ಮೀನುಗಾರಿಕೆ ಇಲಾಖೆ ಸಚಿವರ ಶೃಂಗ ಸಭೆ ನಡೆಯುವ ಪ್ರಸ್ತಾಪ ಏನಾಯ್ತು?
ವಿವಿಧ ರಾಜ್ಯದ ಮೀನುಗಾರಿಕಾ ಮಂತ್ರಿಗಳ ಸಮಾವೇಶ ಕರೆಯಬೇಕೆಂದಿದ್ದೆ. ಆದರೆ, ಇಲ್ಲಿ ಕಾಂಗ್ರೆಸ್‌ ಸರ್ಕಾರ ಇದೇ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ. ಕೇಂದ್ರ ಕೃಷಿ ಮಂತ್ರಿ ಒಪ್ಪಿ, ಸಿಎಂ ಅವರಿಗೆ ಪತ್ರ ಬರೆದಿದ್ದರು. ಆದರೆ, ಆ ನಂತರ ಆ ಬಗ್ಗೆ ಮುಂದಿನ ಪ್ರಕ್ರಿಯೆಗೆ ಒಪ್ಪಿಗೆ ದೊರೆತಿಲ್ಲ. ಮೀನುಗಾರಿಕ ಮಂತ್ರಿಗಳ ಶೃಂಗ ಸಭೆ ನಡೆಸಿ ಮೀನುಗಾರಿಕೆಗೆ ಉತ್ತೇಜನ ಕೊಡಲು ಬಯಸಿದ್ದೆ. 

– ಬಂದರುಗಳ ಅಭಿವೃದ್ಧಿ ಹೇಗೆ ನಡೆದಿದೆ?
ದೊಡ್ಡ ಬಂದರುಗಳ ಅಭಿವೃದ್ಧಿಗೆ ಹಿಂದೆ ಕೇಂದ್ರ ಸರ್ಕಾರದ ಶೇ.75 ಹಾಗೂ ಶೇ.25ರಷ್ಟು ಅನುದಾನ ಇತ್ತು ಈಗ ಅದನ್ನು 50:50 ಮಾಡಿದ್ದು, ಮಾತ್ರವಲ್ಲದೇ ಗಾಯದ ಮೇಲೆ ಬರೆ ಎಳೆಯುವಂತೆ ಕೇಂದ್ರ ಸರ್ಕಾರ ಒಂದು ಯೋಜನೆಗೆ ಕೇಂದ್ರದಿಂದ ಗರಿಷ್ಠ 25 ಕೋಟಿ ರೂ. ಮಾತ್ರ ನೀಡಲಾಗುವುದು ಎಂದು ಹೇಳುತ್ತಿದೆ. ಇದರಿಂದಾಗಿ ದೊಡ್ಡ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗದು. ಹೀಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯಾವುದೇ ಸಹಕಾರ ಇಲ್ಲದೆ ವಿಶ್ವಬ್ಯಾಂಕ್‌ನ ಎರವಲಿನಿಂದ ಮೂರು ಜಿಲ್ಲೆಗಳ ಬೃಹತ್‌ ಬಂದರು ಅಭಿವೃದ್ಧಿಗೆ ಮುಂದಾಗಿದ್ದೇವೆ.

ಸಂದರ್ಶನ : ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.