ಉತ್ತರಪ್ರದೇಶ: ಹಿಂದು ಯುವತಿ ಅಪಹರಣ, ಬಲವಂತದ ಮತಾಂತರ; ಆರೋಪಿ ಬಂಧನ
ಕಾನೂನು ಬಾಹಿರ ಧಾರ್ಮಿಕ ಮತಾಂತರ ಮತ್ತು ಎಸ್ ಸಿ/ಎಸ್ ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ
Team Udayavani, Dec 17, 2020, 11:00 AM IST
ಬಿಜ್ನೋರ್: ಯುವತಿಯೊಬ್ಬಳನ್ನು ಅಪಹರಿಸಿ, ಬಲವಂತವಾಗಿ ಮತಾಂತರ ಮಾಡಿದ ಹಿನ್ನೆಲೆಯಲ್ಲಿ ಮತಾಂತರ ನಿಗ್ರಹ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ಉತ್ತರಪ್ರದೇಶದ ಬಿಜ್ನೋರ್ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಾಖಿಬ್ ಎಂಬಾತ ಯುವತಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿರುವುದಾಗಿ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಕಳೆದ ಕೆಲವು ದಿನಗಳಿಂದ ಧಾಂಪುರ್ ನಿವಾಸಿ ಯುವತಿ ನಾಪತ್ತೆಯಾಗಿದ್ದಳು ಎಂದು ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಯುವತಿ ಹಾಗೂ ಆರೋಪಿಯನ್ನು ಪತ್ತೆಹಚ್ಚಿದ್ದರು. ವಿಚಾರಣೆಯಲ್ಲಿ ಆರೋಪಿ ಯುವತಿಯನ್ನು ಅಪಹರಿಸಿ, ಬಲವಂತವಾಗಿ ಮತಾಂತರ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡ ನಂತರ ಬಂಧಿಸಲಾಯಿತು ಎಂದು ಕುಮಾರ್ ಎಎನ್ ಐಗೆ ತಿಳಿಸಿದ್ದಾರೆ.
ಸಾಖಿಬ್ ತನ್ನ ನಿಜವಾದ ಗುರುತನ್ನು ಮರೆಮಾಚಿ, ತನ್ನನ್ನು ಸೋನು ಎಂಬ ಹೆಸರಿನಲ್ಲಿ ಯುವತಿ ಬಳಿ ಪರಿಚಯಿಸಿಕೊಂಡಿದ್ದ. ನಂತರ ಆಕೆಯನ್ನು ಅಪಹರಿಸಿ, ಬಲವಂತವಾಗಿ ಮತಾಂತರಿಸಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕಾನೂನು ಬಾಹಿರ ಧಾರ್ಮಿಕ ಮತಾಂತರ ಮತ್ತು ಎಸ್ ಸಿ/ಎಸ್ ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಹಿಂದು ಯುವತಿಯರ ಅಪಹರಣ ಮತ್ತು ಬಲವಂತದ ಮತಾಂತರ ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಕಳೆದ ನವೆಂಬರ್ ತಿಂಗಳಿನಲ್ಲಿ ಉತ್ತರಪ್ರದೇಶ ಸರ್ಕಾರ ಕಾನೂನು ಬಾಹಿರ ಧಾರ್ಮಿಕ ಮತಾಂತರ ನಿಗ್ರಹ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ