ಪುಣೆ ನಾಯಕತ್ವದಿಂದ ಧೋನಿ ವಜಾ


Team Udayavani, Feb 20, 2017, 3:45 AM IST

dhoni.jpg

ಕೋಲ್ಕತಾ: ಮಹೇಂದ್ರ ಸಿಂಗ್‌ ಧೋನಿ ಅವರನ್ನು ಐಪಿಎಲ್‌ ಫ್ರಾಂಚೈಸಿ ರೈಸಿಂಗ್‌ ಪುಣೆ ಸೂಪರ್‌ಜಯಂಟ್ಸ್‌ ತಂಡದ ನಾಯಕತ್ವದಿಂದ ವಜಾಗೊಳಿಸಲಾಗಿದೆ ಮತ್ತು ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ. ಇದರಿಂದಾಗಿ ಧೋನಿ ಅವರ ಅಂತಾರಾಷ್ಟ್ರೀಯ ಮತ್ತು ಫ್ರಾಂಚೈಸಿ ಕ್ರಿಕೆಟ್‌ನ ನಾಯಕ ಹುದ್ದೆಯ ಇನ್ನಿಂಗ್ಸ್‌ ಅಂತ್ಯಗೊಂಡಿದೆ. ಧೋನಿ ಅವರು ಈ ಹಿಂದಿನ 9 ಐಪಿಎಲ್‌ ಆವೃತ್ತಿಗಳಲ್ಲಿ ನಾಯಕತ್ವ ವಹಿಸಿದ ಏಕೈಕ ನಾಯಕನೆಂಬ ಹೆಗ್ಗಳಿಕೆ ಗಳಿಸಿದ್ದರು.

ಈ ವರ್ಷದ ಆರಂಭದಲ್ಲಿ ಏಕದಿನ ತಂಡದ ನಾಯಕತ್ವದಿಂದ ಹಿಂದೆ ಸರಿದಿದ್ದ ಧೋನಿ ಅವರು ಆಟಗಾರರಾಗಿ ಪುಣೆ ಫ್ರಾಂಚೈಸಿಯಲ್ಲಿ ಆಡುವುದನ್ನು ಮುಂದುವರಿಸಲಿದ್ದಾರೆ.

ಧೋನಿ ಅವರು ಕೆಳಗಿಳಿಯಲಿಲ್ಲ. ನಾವು ಮುಂಬರುವ ಋತುವಿಗೆ ಸ್ಟೀವನ್‌ ಸ್ಮಿತ್‌ ಅವರನ್ನು ನಾಯಕರಾಗಿ ನೇಮಕ ಮಾಡಿದ್ದೇವೆ. ನಿಜವಾಗಿ ಹೇಳಬೇಕೆಂದರೆ ಕಳೆದ ಋತುವಿನಲ್ಲಿ ನಮ್ಮ ನಿರ್ವಹಣೆ ಉತ್ತಮವಾಗಿರಲಿಲ್ಲ ಮತ್ತುಯುವ ಆಟಗಾರನೋರ್ವ ತಂಡವನವ್ನು ಮುನ್ನಡೆಸುವುದನ್ನು ನಾವು ಬಯಸಿದ್ದೇವೆ. ಹಾಗಾಗಿ ಮುಂಬರುವ ಋತುವಿನ ಮೊದಲು ಈ ಬದಲಾವಣೆ ಮಾಡಲಾಗಿದೆ ಎಂದು ಪುಣೆ ಫ್ರಾಂಚೈಸಿಯ ಮಾಲಕ ಸಂಜೀವ್‌ ಗೋಯೆಂಕಾ ತಿಳಿಸಿದ್ದಾರೆ.

ನಾಯಕನಾಗಿ ಮತ್ತು ವ್ಯಕ್ತಿಯಾಗಿ ಧೋನಿ ಅವರ ಮೇಲೆ ನನಗೆ ಅಪಾರ ಗೌರವವಿದೆ. ಅವರು ನಮ್ಮ ತಂಡದ ಅವಿಭಾಜ್ಯ ಸದಸ್ಯರಾಗಿ ಮುಂದುವರಿಯಲಿದ್ದಾರೆ. ಫ್ರಾಂಚೈಸಿಯ ಬೆಳವಣಿಗೆಗೆ ಅವರ ಸಲಹೆ ಸೂಚನೆಗಳನ್ನು ಇನ್ನು ಮುಂದೆಯೂ ಪಡೆಯಲಿದ್ದೇವೆ ಎಂದು ಗೋಯೆಂಕಾ ಹೇಳಿದರು.

2008ರಲ್ಲಿ ಐಪಿಎಲ್‌ ಆರಂಭವಾದ ಬಳಿಕ ಧೋನಿ ಅವರು ಈ ಕೂಟದ ಅತ್ಯಂತ ದುಬಾರಿ ಆಟಗಾರರಾಗಿ ಕಾಣಿಸಿಕೊಂಡಿದ್ದರು ಮತ್ತು ಭಾರೀ ಯಶಸ್ಸು ಸಾಧಿಸಿದ್ದರು. 2008ರಿಂದ 2015ರ ವರೆಗೆ ಧೋನಿ ಅವರು ಸದ್ಯ ಅಮಾನತುಗೊಂಡಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಫ್ರಾಂಚೈಸಿಯ ನಾಯಕರಾಗಿದ್ದರು ಮತ್ತು 2010 ಮತ್ತು 2011ರಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆಲ್ಲಲು ನೆರವಾಗಿದ್ದರು. ಇಷ್ಟು ಮಾತ್ರವಲ್ಲದೇ ಚೆನ್ನೈ ತಂಡ 2010 ಮತ್ತು 2014ರಲ್ಲಿ ಚಾಂಪಿಯನ್ಸ್‌ ಲೀಗ್‌ ಟ್ವೆಂಟಿ-20 ಟ್ರೋಫಿ ಗೆಲ್ಲಲು ನೆರವಾಗಿದ್ದರು. 

ಚೆನ್ನೈ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡಗಳನ್ನು ಎರಡು ವರ್ಷಗಳ ಅವಧಿಗೆ ಅಮಾನತುಗೊಳಿಸಿದ ಬಳಿಕ 2015ರ ಡಿಸೆಂಬರ್‌ನಲ್ಲಿ ಅವರನ್ನು ಪುಣೆ ತಂಡಕ್ಕೆ ಮೊದಲಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಧೋನಿ ಬದಲು 27ರ ಹರೆಯದ ಸ್ಮಿತ್‌ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮಿತ್‌ ಆಸ್ಟ್ರೇಲಿಯ ತಂಡದ ನಾಯಕರಾಗಿದ್ದಾರೆ.

ಧೋನಿ ಕೆಳಗಿಳಿಸಲು ಹಲವು ಕಾರಣಗಳು!
ಧೋನಿಯನ್ನು ನಾಯಕ ಸ್ಥಾನದಿಂದ ಕೆಳಗಿಳಿಸುವುದಕ್ಕೆ ಹಲವು ಕಾರಣಗಳಿವೆ. ಕಳೆದ ಬಾರಿ ತಂಡ ಪ್ರದರ್ಶನ ಉತ್ತಮ ನೀಡುವಲ್ಲಿ ವಿಫ‌ಲವಾಗಿದ್ದರೂ ಅದಕ್ಕಿಂತ ಮಹತ್ವದ ಕೆಲವು ಕಾರಣಗಳಿವೆ. 

ಕಳೆದ ಬಾರಿ ಪುಣೆ ತಂಡದಲ್ಲಿ ಖ್ಯಾತ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌ ಆಡಿದ್ದರು. ಆದರೆ ಇಡೀ ಕೂಟದಲ್ಲಿ ಧೋನಿ ಅವರಿಗೆ ಅತಿ ಕಡಿಮೆ ಓವರ್‌ಗಳ ಬೌಲಿಂಗ್‌ ಮಾತ್ರ ನೀಡಿದ್ದರು. ಅವರ ಬದಲು ಹೊಸ ಬೌಲರ್‌ ಮುರುಗನ್‌ ಅಶ್ವಿ‌ನ್‌ಗೆ ಬೇಕಾದಷ್ಟು ಓವರ್‌ಗಳನ್ನು ನೀಡಿದ್ದರು. ಇದು ಅಶ್ವಿ‌ನ್‌ ಅಸಮಾ ಧಾನಕ್ಕೆ ಕಾರಣವಾಗಿತ್ತು. ಹಾಗೆಯೇ ಅಭಿ ಮಾನಿಗಳಿಗೂ ಧೋನಿಯ ಈ ನಡೆ ಅಚ್ಚರಿ ಮೂಡಿಸಿತ್ತು. 2016ರ ಟಿ20 ವಿಶ್ವಕಪ್‌ನಲ್ಲಿ ಈ ಇಬ್ಬರ ನಡುವೆ ಉಂಟಾದ ಮನಸ್ತಾಪಕ್ಕೆ ಧೋನಿ ಸೇಡು ತೀರಿಸಿಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗಿತ್ತು. ಇಂತಹ ಹಲವು ಕಾರಣಗಳೂ ಧೋನಿಯನ್ನು ಕೆಳಗಿಳಿಸಲು ಕಾರಣವಾಗಿದೆ ಎಂದು ಊಹಿಸಲಾಗಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.