ದೇವಧರ್‌ ಟ್ರೋಫಿ ಏಕದಿನ ಕ್ರಿಕೆಟ್‌: ತಮಿಳುನಾಡು ಫೈನಲಿಗೆ


Team Udayavani, Mar 28, 2017, 3:50 AM IST

28-SPORTS-3.jpg

ವಿಶಾಖಪಟ್ಟಣ: ದಿನೇಶ್‌ ಕಾರ್ತಿಕ್‌ ಮತ್ತು ನಾರಾಯಣ್‌ ಜಗದೀಶನ್‌ ಅವರ ಅರ್ಧ ಶತಕದಿಂದಾಗಿ ತಮಿಳುನಾಡು ತಂಡವು ಹರ್ಭಜನ್‌ ಸಿಂಗ್‌ ನಾಯಕತ್ವದ ಭಾರತ “ಎ’ ತಂಡವನ್ನು 73 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿ ದೇವಧರ್‌ ಟ್ರೋಫಿ ಏಕದಿನ ಕ್ರಿಕೆಟ್‌ ಕೂಟದ ಫೈನಲ್‌ ಹಂತಕ್ಕೇರಿತು.

ಮಾ. 29ರ ಬುಧವಾರ ನಡೆ ಯುವ ಫೈನಲ್‌ ಹೋರಾಟದಲ್ಲಿ ತಮಿಳುನಾಡು ಭಾರತ “ಬಿ’ ತಂಡವನ್ನು ಎದುರಿಸಲಿದೆ. ಭಾರತ “ಬಿ’ ಆಡಿದ ಎರಡು ಪಂದ್ಯ ಗಳಲ್ಲಿ (ಭಾರತ “ಎ’ ಮತ್ತು ತಮಿಳು ನಾಡು) ಜಯಭೇರಿ ಬಾರಿಸಿ ಈಗಾ ಗಲೇ ಫೈನಲಿಗೇರಿತ್ತು. ಇದೀಗ ಸೇಡು ತೀರಿಸಿಕೊಳ್ಳುವ ಅವಕಾಶ ತಮಿಳುನಾಡಿಗೆ ಸಿಕ್ಕಿದೆ. ವಿಜಯ್‌ ಹಜಾರೆ ಏಕದಿನ ಸರಣಿಯ ಪ್ರಶಸ್ತಿ ವಿಜೇತ ತಮಿಳುನಾಡು ಫೈನಲ್‌ನಲ್ಲಿ ಯಾವ ರೀತಿಯ ನಿರ್ವಹಣೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ನಿರ್ಣಾಯಕ ಪಂದ್ಯದಲ್ಲಿ ತಮಿಳುನಾಡಿನ ಬಹುತೇಕ ಎಲ್ಲ ಆಟಗಾರರು ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದರಿಂದ ತಂಡ 6 ವಿಕೆಟಿಗೆ 303 ರನ್ನುಗಳ ಬೃಹತ್‌ ಮೊತ್ತ ಪೇರಿಸುವಂತಾಯಿತು. ಜಗದೀಶನ್‌ ಮತ್ತು ದಿನೇಶ್‌ ಕಾರ್ತಿಕ್‌ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರಲ್ಲದೇ ಮೂರನೇ ವಿಕೆಟಿಗೆ 159 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡದ ಬೃಹತ್‌ ಮೊತ್ತಕ್ಕೆ ಕಾರಣ ರಾದರು.
ಭಾರತ “ಎ’ ದಾಳಿಯನ್ನು ದಂಡಿಸಿದ ಜಗದೀಶನ್‌ 82 ಎಸೆತ ಗಳಿಂದ 71 ರನ್‌ ಗಳಿಸಿದರೆ ದಿನೇಶ್‌ ಕಾರ್ತಿಕ್‌ 98 ಎಸೆತ ಎದುರಿಸಿ 93 ರನ್‌ ಹೊಡೆದರು. 6 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ ಅವರು 7 ರನ್ನಿನಿಂದ ಶತಕ ದಾಖಲಿಸಲು ಅಸಮರ್ಥರಾದರು.

ಗೆಲ್ಲಲು ಕಠಿನ ಗುರಿ ಪಡೆದ ಭಾರತ “ಎ’ ತಂಡವು ತಮಿಳುನಾಡಿನ ನಿಖರ ದಾಳಿಯೆದುರು ರನ್‌ಗಳಿಸಲು ಒದ್ದಾಡಿತಲ್ಲದೇ ಆಗಾಗ್ಗೆ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಆರಂಭಿಕ ಮನ್‌ದೀಪ್‌ ಸಿಂಗ್‌ ಅವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಲು ವಿಫ‌ಲರಾದರು. ಅಂತಿಮವಾಗಿ ತಂಡ 44.4 ಓವರ್‌ಗಳಲ್ಲಿ 230 ರನ್ನಿಗೆ ಆಲೌಟಾಯಿತು.  

ಸಂಕ್ಷಿಪ್ತ ಸ್ಕೋರು: ತಮಿಳುನಾಡು 6 ವಿಕೆಟಿಗೆ 303 (ಕೌಶಿಕ್‌ ಗಾಂಧಿ 34, ಜಗದೀಶನ್‌ 71, ದಿನೇಶ್‌ ಕಾರ್ತಿಕ್‌ 93, ಬಾಬಾ ಇಂದ್ರಜಿತ್‌ 36 ಔಟಾಗದೆ, ಶಾದೂìಲ್‌ ಠಾಕುರ್‌ 49ಕ್ಕೆ 3); ಭಾರತ “ಎ’ 44.4 ಓವರ್‌ಗಳಲ್ಲಿ 120 ಆಲೌಟ್‌ (ಮನ್‌ದೀಪ್‌ ಸಿಂಗ್‌ 97, ಅಂಬಾಟಿ ರಾಯುಡು 21, ಕೃಣಾಲ್‌ ಪಾಂಡ್ಯ 36, ದೀಪಕ್‌ ಹೂಡ 26, ರಾಹಿಲ್‌ ಶಾ 37ಕ್ಕೆ 3, ಸಾಯಿ ಕಿಶೋರ್‌ 39ಕ್ಕೆ 3).

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.