ಕಿರಿಯರ ಫ‌ುಟ್ಬಾಲ್‌ ವಿಶ್ವಕಪ್‌: ಕೋಲ್ಕತಾದಲ್ಲಿ ಫೈನಲ್‌


Team Udayavani, Mar 28, 2017, 3:50 AM IST

28-SPORTS-4.jpg

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ 17 ವರ್ಷ ವಯೋಮಿತಿಯೊಳಗಿನ ವಿಶ್ವಕಪ್‌ ಫ‌ುಟ್ಬಾಲ್‌ ಪಂದ್ಯಾಟದ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಫ‌ುಟ್ಬಾಲ್‌ ಮಂಡಳಿ ಬಿಡುಗಡೆ ಮಾಡಿದೆ. ಅ.28ರಂದು ಕೋಲ್ಕತಾದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ. ಗುವಾಹಾಟಿ ಮತ್ತು ಮುಂಬಯಿಯಲ್ಲಿ ಸೆಮಿಫೈನಲ್‌ ಪಂದ್ಯಗಳು ನಡೆಯಲಿವೆ. ಪ್ರತಿಷ್ಠಿತ ಫಿಫಾ ಫ‌ುಟ್ಬಾಲ್‌ ಕೂಟದ ಆತಿಥ್ಯವನ್ನು ಭಾರತ ಇದೇ ಮೊದಲ ಸಲ ವಹಿಸುತ್ತಿದ್ದು ಯಶಸ್ಸಿಗಾಗಿ ಭಾರೀ ಸಿದ್ಧತೆ ನಡೆಸುತ್ತಿದೆ.

ಪಂದ್ಯಾಟದ ಮುಖ್ಯಸ್ಥ ಜೈಮಿ ಯಾರ್ಜ ನೇತೃತ್ವದ ಎಂಟು ಸದಸ್ಯರ ಫಿಫಾ ತಂಡ ತಮ್ಮ ಏಳು ದಿನಗಳ ಪ್ರವಾಸದ ವೇಳೆ ಫ‌ುಟ್ಬಾಲ್‌ ಪಂದ್ಯ ನಡೆಯುವ ವಿವಿಧ ತಾಣಗಳಿಗೆ ಭೇಟಿ ನೀಡಿದ ಬಳಿಕ ಪಂದ್ಯಾಟದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸ್ಥಳೀಯ ಸಂಘಟನಾ  ಸಮಿತಿಯ ಸದಸ್ಯರ ಜತೆ ಫಿಫಾ ತಂಡದ ಸದಸ್ಯರು ಪಂದ್ಯಾಟದ ಆತಿಥ್ಯ ವಹಿಸುವ ಎಲ್ಲ ಆರು (ಕೋಲ್ಕತಾ, ಹೊಸದಿಲ್ಲಿ, ಗುವಾಹಾಟಿ, ಮಡ್ಗಾಂವ್‌, ಕೊಚ್ಚಿ ಮತ್ತು ನವಿ ಮುಂಬಯಿ) ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಹಲವು ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ 85 ಸಾವಿರ ಪ್ರೇಕ್ಷಕ ಸಾಮರ್ಥ್ಯದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಅಂಡರ್‌-17 ಫ‌ುಟ್ಬಾಲ್‌ ಕೂಟದ ಪೈನಲ್‌ ನಡೆಯಲಿದೆ. ಮಾತ್ರವಲ್ಲದೇ ಮೂರನೇ ಸ್ಥಾನಕ್ಕಾಗಿ ನಡೆಯುವ ಪಂದ್ಯ ಸಹಿತ ಕ್ವಾರ್ಟರ್‌ಫೈನಲ್ಸ್‌ನ ಮತ್ತು ಅಂತಿಮ 16ರ ಸುತ್ತಿನ ತಲಾ ಒಂದು ಪಂದ್ಯ ಇಲ್ಲಿ ನಡೆಯಲಿದೆ. “ಎಫ್’ ಬಣದ ಆರು ಪಂದ್ಯಗಳು ಈ ಕ್ರೀಡಾಂಗಣದಲ್ಲಿ ನಡೆಯಲಿವೆ.

ನವಿ ಮುಂಬಯಿಯ ಡಿವೈ ಪಾಟೀಲ್‌ ಕ್ರೀಡಾಂಗಣ ಮತ್ತು ಗುವಾಹಾಟಿಯ ಇಂದಿರಾ ಗಾಂಧಿ ಆ್ಯತ್ಲೆಟಿಕ್ಸ್‌ ಕ್ರೀಡಾಂಗಣದಲ್ಲಿ ಎರಡು ಸೆಮಿಫೈನಲ್ಸ್‌ ನಡೆಯಲಿದೆ. ನವಿಮುಂಬಯಿಯ ಡಿವೈ ಪಾಟೀಲ್‌ ಕ್ರೀಡಾಂಗಣ ಅದ್ಭುತ ಕ್ರೀಡಾಂಗಣ ವೆಂದು ಫಿಫಾ ತಂಡ ಅಭಿಪ್ರಾಯಪಟ್ಟಿದೆ. ಈ ಕ್ರೀಡಾಂಗಣದಲ್ಲಿ “ಎ’ ಬಣದ ಮತ್ತು ಅಂತಿಮ 16ರ ಸುತ್ತಿನ ಒಂದು ಪಂದ್ಯ ನಡೆಯಲಿದೆ. 

ಹೊಸದಿಲ್ಲಿಯಲ್ಲಿ “ಬಿ’ ಬಣದ ಪಂದ್ಯಗಳ ಸಹಿತ ಎರಡು ಅಂತಿಮ 16ರ ಸುತ್ತಿನ ಪಂದ್ಯಗಳು ನಡೆಯಲಿವೆ. ವಾಯು ಮಾಲಿನ್ಯದ ಕಳವಳದಿಂದಾಗಿ ದಿಲ್ಲಿಯಲ್ಲಿ ಕೂಟದ ಪ್ರಮುಖ ಪಂದ್ಯಗಳು ನಡೆಯುವುದಿಲ್ಲ. ಮಡ್ಗಾವ್‌ನಲ್ಲಿ “ಸಿ’ ಬಣದ ಮತ್ತು ಕೊಚ್ಚಿಯಲ್ಲಿ “ಡಿ’ ಬಣದ ಪಂದ್ಯಗಳು ನಡೆಯಲಿವೆ. ಕೊಚ್ಚಿಯ ಜವಾಹರ್‌ಲಾಲ್‌ ನೆಹರೂ ಕ್ರೀಡಾಂಗಣ ಸಿದ್ಧತೆಯ ವಿಷಯದಲ್ಲಿ ಕಳಪೆ ಮಟ್ಟದಲ್ಲಿದೆ ಎಂದು ಫಿಫಾ ತಂಡ ತಿಳಿಸಿದೆ. 

ಅಕ್ಟೋಬರ್‌ ಭಾರತದಲ್ಲಿ ಹಬ್ಬಗಳ ತಿಂಗಳಾಗಿದೆ. ಹಾಗಾಗಿ ಈ ಬಾರಿ ಫ‌ುಟ್ಬಾಲ್‌ ಹಬ್ಬವೂ ಅದರ ಜತೆ ಸೇರಿಕೊಳ್ಳಲಿ ಎಂದು ಯಾರ್ಜ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.