ಕ್ರಿಕೆಟ್ ಭದ್ರತಾ ವ್ಯವಸ್ಥೆ ಪುನರ್ ಪರಿಶೀಲನೆ: ಐಸಿಸಿ
Team Udayavani, May 24, 2017, 11:48 AM IST
ಲಂಡನ್: ಮ್ಯಾಂಚೆಸ್ಟರ್ನಲ್ಲಿ ನಡೆದ ಆತ್ಮಾಹುತಿ ಬಾಂಬರ್ ದಾಳಿಯ ಬಳಿಕ ಚಾಂಪಿಯನ್ಸ್ ಟ್ರೋಫಿ ಹಾಗೂ ವನಿತಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಭದ್ರತಾ ವ್ಯವಸ್ಥೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು ಎಂದು ಐಸಿಸಿ ತಿಳಿಸಿದೆ. ಈ ದಾಳಿಯ ವೇಳೆ 22 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಜೂ. ಒಂದರಿಂದ 18ರ ತನಕ ಲಂಡನ್, ಬರ್ಮಿಂಗಂ ಮತ್ತು ಕಾರ್ಡಿಫ್ನಲ್ಲಿ ನಡೆಯಲಿದೆ. ವನಿತಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂ. 24ರಿಂದ ಜು. 23ರ ತನಕ ಇಂಗ್ಲೆಂಡ್ ಆತಿಥ್ಯದಲ್ಲೇ ಸಾಗಲಿದೆ.
“ನಾವು ಪಂದ್ಯಾವಳಿಯ ಭದ್ರತಾ ನಿರ್ದೇಶಕರ ಸಲಹೆಯನ್ನು ಸತತವಾಗಿ ಗಮನಿಸುತ್ತಿದ್ದು, ಇಸಿಬಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಎರಡೂ ಕೂಟಗಳು ಯಾವುದೇ ಆತಂಕವಿಲ್ಲದೆ ನಡೆಯುವ ನಿಟ್ಟಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು’ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಜತೆಗೆ ಸೋಮವಾರದ ದಾಳಿಯಲ್ಲಿ ಮೃತ ಪಟ್ಟವರಿಗೆ ತನ್ನ ಸಂತಾಪವನ್ನು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ