ಗಡಿಯಲ್ಲಿ ಭಯೋತ್ಪಾದನೆ ನಿಲ್ಲೋವರೆಗೂ ಇಂಡೋ, ಪಾಕ್ ಸರಣಿ ಇಲ್ಲ; ಗೋಯೆಲ್
Team Udayavani, May 29, 2017, 4:06 PM IST
ನವದೆಹಲಿ: 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾರತ, ಪಾಕಿಸ್ತಾನ ತಂಡದ ನಡುವಿನ ಹೈವೋಲ್ಟೇಜ್ ಪಂದ್ಯಾಟ ವೀಕ್ಷಿಸಲು ಜಗತ್ತಿನಾದ್ಯಂತ ಕಾತರದಿಂದ ಕಾಯುತ್ತಿದ್ದರೆ, ಮತ್ತೊಂದೆಡೆ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ಸಾಧ್ಯವಿಲ್ಲ ಎಂದು ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಸೋಮವಾರ ತಿಳಿಸಿದ್ದಾರೆ.
ಗಡಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಿಲ್ಲುವವರೆಗೂ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯಾಟ ಸಾಧ್ಯವಿಲ್ಲ. ಅಷ್ಟೇ ಅಲ್ಲ ಒಂದು ವೇಳೆ ಪಾಕಿಸ್ತಾನ ಜೊತೆ ಕ್ರಿಕೆಟ್ ಸರಣಿ ನಡೆಸುವ ಪ್ರಸ್ತಾಪವಿದ್ದರೆ ಬಿಸಿಸಿಐ ಕೇಂದ್ರ ಸರ್ಕಾರದ ಜೊತೆ ಮೊದಲು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ಬಿಸಿಸಿಐ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲೇಬೇಕು. ಕ್ರಿಕೆಟ್ ಮತ್ತು ಭಯೋತ್ಪಾದನೆ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಹಾಗಾಗಿ ಭಾರತ ಮತ್ತು ಪಾಕ್ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಪಂದ್ಯಾಟ ಸಾಧ್ಯವಿಲ್ಲ ಎಂದು ಗೋಯೆಲ್ ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡುತ್ತಿದೆ. ಜೊತೆಗೆ ಗಡಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಪಾಕ್ ಜೊತೆ ಸರಣಿ ಕ್ರಿಕೆಟ್ ಪಂದ್ಯಾಟವಾಡಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್ ರಾಯಲ್ಸ್ ಸವಾಲು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ