ಗಾಲೆಯಲ್ಲಿ  ತಿರುಗಲಿ ಗೆಲುವಿನ ಗಾಲಿ…


Team Udayavani, Jul 26, 2017, 6:35 AM IST

gali.jpg

ಗಾಲೆ: ವನಿತಾ ವಿಶ್ವಕಪ್‌ ಪಂದ್ಯಾವಳಿಯ ಬಳಿಕ ಭಾರತದ ಕ್ರಿಕೆಟ್‌ ಅಭಿಮಾನಿಗಳ ಗಮನವೆಲ್ಲ ಮತ್ತೆ ಕೊಹ್ಲಿ ಪಡೆಯತ್ತ ಕೇಂದ್ರೀಕೃತಗೊಂಡಿದೆ. ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ತಂಡ ಬುಧವಾರದಿಂದ ಗಾಲೆಯಲ್ಲಿ ಮೊದಲ ಟೆಸ್ಟ್‌ ಪಂದ್ಯವನ್ನು ಆಡಲಿದೆ. 

ನೆರೆಯ ದ್ವೀಪರಾಷ್ಟ್ರದಲ್ಲಿ ಪೂರ್ಣ ಪ್ರಮಾಣದ ಸರಣಿ ಆಡಲಿರುವ ಟೀಮ್‌ ಇಂಡಿಯಾ ಎಂಥ ಸಾಧನೆ ಮಾಡೀತು, ಇತ್ತೀಚೆಗೆ ತವರಿನಲ್ಲಿ ಅಷ್ಟೇನೂ ಮಿಂಚದ ಲಂಕಾ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸೀತೇ… ಎಂಬೆಲ್ಲ ಕುತೂಹಲಕ್ಕೆ ಇಲ್ಲಿ ಉತ್ತರ ಸಿಗಬೇಕಿದೆ.

“ಕೋಚ್‌ ರಾಜಕೀಯ’ದಿಂದ ಮುಕ್ತಿ ಪಡೆದ ಬಳಿಕ ಭಾರತ ಆಡಲಿರುವ ಮೊದಲ ಕ್ರಿಕೆಟ್‌ ಸರಣಿ ಇದೆಂಬುದು ವಿಶೇಷ. ಟೀಮ್‌ ಇಂಡಿಯಾದ ನೂತನ ಕೋಚ್‌ ಆಗಿ ನೇಮಕಗೊಂಡಿರುವ ರವಿ ಶಾಸಿŒ ಹಾಗೂ ಅವರದೇ ಅಪೇಕ್ಷೆಯ ಸಹಾ ಯಕ ಸಿಬಂದಿಗಳ ಉಸ್ತುವಾರಿಯಲ್ಲಿ ನಡೆ ಯುವ ಮೊದಲ ಪಂದ್ಯವೂ ಇದಾಗಿದೆ. ಇವರ ಕೈಕೆಳಗೆ ಕೊಹ್ಲಿ ಪಡೆ ಯಾವ ರೀತಿಯ ಪ್ರದರ್ಶನ ನೀಡೀತು ಎಂಬುದು ಕೂಡ ಸರಣಿಯ ನಿರೀಕ್ಷೆಗಳಲ್ಲಿ ಒಂದೆನಿಸಿದೆ.

ಮುರಳಿ ವಿಜಯ್‌ ಗಾಯಾಳಾಗಿ ಪ್ರವಾಸದಿಂದ ಹೊರಗುಳಿದದ್ದು, ಜ್ವರ ದಿಂದಾಗಿ ಆರಂಭಕಾರ ಕೆ.ಎಲ್‌. ರಾಹುಲ್‌ ಗಾಲೆಯಲ್ಲಿ ಆಡದಿರುವುದೆಲ್ಲ ಭಾರತದ ಪಾಳೆಯದ ಋಣಾತ್ಮಕ ಅಂಶಗಳು. ಪ್ರಧಾನ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ 50ನೇ ಟೆಸ್ಟ್‌ ಆಡುತ್ತಿರುವುದು ಖುಷಿಯ ಸಮಾಚಾರ.

ಗಾಲೆಯಿಂದ ಗಾಲೆಗೆ
ಭಾರತದ ಕ್ರಿಕೆಟ್‌ ಚಕ್ರ ಗಾಲೆಯಿಂದ ಮತ್ತೆ ಗಾಲೆಗೆ ತಿರುಗಿ ಬಂದುದು ಇಲ್ಲಿ ಗಮನಿಸಬೇಕಾದ ಪ್ರಮುಖ ಸಂಗತಿ. 2015ರಲ್ಲಿ ಕೊನೆಯ ಸಲ ಶ್ರೀಲಂಕಾ ಪ್ರವಾಸ ಕೈಗೊಂಡ ಭಾರತ ಗಾಲೆಯಲ್ಲೇ ಪ್ರಥಮ ಟೆಸ್ಟ್‌ ಆಡಿತ್ತು. ಗೆಲುವಿಗೆ ಕೇವಲ 178 ರನ್‌ ಸವಾಲು ಪಡೆದ ಕೊಹ್ಲಿ ಪಡೆ 112 ರನ್ನಿಗೆ ಕುಸಿದು 63 ರನ್ನುಗಳ ಸೋಲಿಗೆ ತುತ್ತಾಗಿತ್ತು. ಆದರೆ ಮುಂದಿನದ್ದೆಲ್ಲ ಇತಿ ಹಾಸವಾಗಿ ದಾಖಲಾಯಿತು. 

ಕೊಲಂಬೋದಲ್ಲಿ ನಡೆದ ಉಳಿದೆರಡು ಟೆಸ್ಟ್‌ಗಳನ್ನು ಕ್ರಮವಾಗಿ 278 ರನ್‌ ಹಾಗೂ 117 ರನ್‌ ಅಂತರದಿಂದ ಗೆದ್ದು ಸರಣಿ ವಶಪಡಿಸಿಕೊಂಡಿತು. ಅಷ್ಟೇ ಅಲ್ಲ, ಅನಂತರದ ಸರಣಿಗಳಲ್ಲಿ ಸಾಲು ಸಾಲು ಗೆಲುವನ್ನು ಕಾಣುತ್ತ ಹೋಯಿತು. ವೆಸ್ಟ್‌ ಇಂಡೀಸ್‌, ನ್ಯೂಜಿಲ್ಯಾಂಡ್‌, ಇಂಗ್ಲೆಂಡ್‌, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯ ವಿರುದ್ಧ ಟೆಸ್ಟ್‌ ಸರಣಿ ಗೆದ್ದ ಹಿರಿಮೆ ಟೀಮ್‌ ಇಂಡಿಯದ್ದಾಗಿತ್ತು. ಗಾಲೆ ಸೋಲಿನ ಬಳಿಕ ಆಡಿದ 23 ಟೆಸ್ಟ್‌ಗಳಲ್ಲಿ ಭಾರತ ಸೋತದ್ದು ಒಂದರಲ್ಲಿ ಮಾತ್ರ. ಅದು ಆಸ್ಟ್ರೇಲಿಯ ಎದುರಿನ ಪುಣೆ ಪಂದ್ಯವಾಗಿತ್ತು.

ಒಟ್ಟಾರೆ, ಅಂದು ಗಾಲೆಯಲ್ಲಿ ಅನುಭವಿಸಿದ ಸೋಲನ್ನೇ ಸವಾಲಾಗಿ ಸ್ವೀಕರಿಸಿದ ಭಾರತ ಟೆಸ್ಟ್‌ ಕ್ರಿಕೆಟಿನ ಅಗ್ರಮಾನ್ಯ ತಂಡವಾಗಿ ಹೊರಹೊಮ್ಮಿದ್ದೊಂದು ಸುಂದರ ಇತಿಹಾಸ. ಈಗ ಮತ್ತೆ ಭಾರತದ ಟೆಸ್ಟ್‌ ರಥದ ಗಾಲಿ ಗಾಲೆಯತ್ತ ಉರುಳಿ ಬಂದಿದೆ. ಇಲ್ಲಿ ಕೊಹ್ಲಿ ಬಳಗ ಕಳೆದ ಸೋಲಿಗೆ ಸೇಡು ತೀರಿಸಿಕೊಂಡು ಸರಣಿಯನ್ನು ಶುಭಾರಂಭ ಮಾಡೀತೇ ಎಂಬುದೊಂದು ಕುತೂಹಲ. ಅಂದಹಾಗೆ ಅಂದಿನ ಗಾಲೆ ಟೆಸ್ಟ್‌ ವೇಳೆ ರವಿಶಾಸಿŒ ಟೀಮ್‌ ಡೈರೆಕ್ಟರ್‌ ಆಗಿದ್ದರು. ಈ ಬಾರಿ ಕೋಚ್‌ ಆಗಿ ನೂತನ ಜವಾಬ್ದಾರಿ ಹೊತ್ತಿದ್ದಾರೆ.

ಭಾರತಕ್ಕೆ ಓಪನಿಂಗ್‌ ಚಿಂತೆ
ಎಲ್ಲವೂ ಕ್ಯಾಪ್ಟನ್‌ ಕೊಹ್ಲಿ ಬಯಸಿ ದಂತೆಯೇ ಆದುದರಿಂದ ಭಾರತ ಹೆಚ್ಚು ಲವಲವಿಕೆ ಹಾಗೂ ಉತ್ಸಾಹದಿಂದ ಆಡ ಬಹುದೆಂಬ ನಿರೀಕ್ಷೆ ಎಲ್ಲರದು. ಆಟಗಾರರ ಫಾರ್ಮ್ ಕೂಡ ಉತ್ತಮ ಮಟ್ಟದಲ್ಲೇ ಇದೆ. ಸದ್ಯದ ಚಿಂತೆಯೆಂದರೆ ಓಪನಿಂಗ್‌ ಮಾತ್ರ.

ಈ ಸರಣಿಯಲ್ಲಿ ಮುರಳಿ ವಿಜಯ್‌-ಕೆ.ಎಲ್‌. ರಾಹುಲ್‌ ಭಾರತದ ಇನ್ನಿಂಗ್ಸ್‌ ಆರಂಭಿಸಬೇಕಿತ್ತು. ಆದರೆ ಇವರಿಬ್ಬರ ಸೇವೆ ಯಿಂದ ತಂಡ ವಂಚಿತವಾಗಿದೆ. ಹೀಗಾಗಿ ಶಿಖರ್‌ ಧವನ್‌-ಅಭಿನವ್‌ ಮುಕುಂದ್‌ ಜೋಡಿ ಕಣಕ್ಕಿಳಿಯಲಿದೆ. ಇವರಲ್ಲಿ ಮುಕುಂದ್‌ಗೆ ಹೆಚ್ಚಿನ ಅನುಭವವಿಲ್ಲ. ಆಸ್ಟ್ರೇಲಿಯ ವಿರುದ್ಧ ಬೆಂಗಳೂರು ಟೆಸ್ಟ್‌ ಆಡಿದರೂ ಒಟ್ಟು ಗಳಿಸಿದ್ದು 16 ರನ್‌ ಮಾತ್ರ. ಅಕಸ್ಮಾತ್‌ ಓಪನಿಂಗ್‌ ವೈಫ‌ಲ್ಯವೇನಾದರೂ ಎದುರಾದಲ್ಲಿ ಭಾರತಕ್ಕೆ ಗಂಡಾಂತರ ಎದುರಾಗಲೂಬಹುದು.
ಪೂಜಾರ, ಕೊಹ್ಲಿ, ರಹಾನೆ ಬ್ಯಾಟಿಂಗ್‌ ಸರದಿಯಲ್ಲಿ ಮುಂದುವರಿಯಲಿದ್ದಾರೆ. ಸಾಹಾ ಅನಿವಾರ್ಯ. ರೋಹಿತ್‌ ಅಥವಾ ಪಾಂಡ್ಯ ಒಂದು ಸ್ಥಾನ ತುಂಬಬಹುದು.

ತವರಿನಲ್ಲೇ ಲಂಕಾ ಪರದಾಟ
ಕುಮಾರ ಸಂಗಕ್ಕರ, ಮಾಹೇಲ ಜಯವರ್ಧನ ಅವರ ನಿವೃತ್ತಿ ಬಳಿಕ ಶ್ರೀಲಂಕಾ ಒಂದು ಸಾಮಾನ್ಯ ತಂಡವಾಗಿ ಗೋಚರಿಸುತ್ತಿದೆ. ಮೊನ್ನೆ ಮೊನ್ನೆ ತವರಿನಲ್ಲೇ ಜಿಂಬಾಬ್ವೆಯಂಥ ಕೆಳ ದರ್ಜೆಯ ತಂಡದೆದುರು ಏಕದಿನ ಸರಣಿಯಲ್ಲಿ ಸೋಲಿನ ಪೆಟ್ಟು ತಿಂದಿತ್ತು. ಆದರೆ ಟೆಸ್ಟ್‌ನಲ್ಲಿ ಸೋಲಿನ ದವಡೆಯಿಂದ ಪಾರಾಗಿ ಮಾನ ಉಳಿಸಿಕೊಂಡಿತ್ತು. ಹೀಗಾಗಿ ಹೆಚ್ಚು ಬಲಿಷ್ಠ ಹಾಗೂ ನಂ.1 ತಂಡವಾದ ಭಾರತದ ವಿರುದ್ಧ ಲಂಕಾ ಪಡೆ ಅಗ್ನಿಪರೀಕ್ಷೆ ಎದುರಿಸಿದರೆ ಅಚ್ಚರಿಯೇನಿಲ್ಲ.
ಪ್ರವಾಸಿ ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಯನ್ನು ಸೋತ ಬಳಿಕ ಏಂಜೆಲೊ ಮ್ಯಾಥ್ಯೂಸ್‌ ನಾಯಕತ್ವದ ಉಸಾಬರಿಯೇ ಬೇಡ ಎಂದು ದೂರ ಸರಿದಿದ್ದಾರೆ. ನಾಯಕನಾಗಿ ನೇಮಕಗೊಂಡ ದಿನೇಶ್‌ ಚಂಡಿಮಾಲ್‌ ನ್ಯುಮೋನಿಯಾದಿಂದ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಗಾಲೆಯಲ್ಲಿ ಲಂಕಾ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹಿರಿಯ ಸ್ಪಿನ್ನರ್‌ ರಂಗನ ಹೆರಾತ್‌ ಪಾಲಾಗಿದೆ. ಕಪ್ತಾನನ ಎಡಗೈ ಸ್ಪಿನ್‌ ಆಕ್ರಮಣವನ್ನು ಯಶಸ್ವಿಯಾಗಿ ನಿಭಾಯಿಸಿದರೆ ಭಾರತ ಅರ್ಧ ಪಂದ್ಯ ಗೆದ್ದಂತೆ. ಜಿಂಬಾಬ್ವೆ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಹೆರಾತ್‌ 11 ವಿಕೆಟ್‌ ಉರುಳಿಸಿದ್ದನ್ನು ಮರೆಯುವಂತಿಲ್ಲ.

ಬೌಲಿಂಗಿಗೆ ಹೋಲಿಸಿದರೆ ಲಂಕೆಯ ಬ್ಯಾಟಿಂಗ್‌ ವಿಭಾಗದಲ್ಲಿ ಒಂದಿಷ್ಟು ವೈವಿಧ್ಯ ಇರುವುದನ್ನು ಗಮನಿಸಬಹುದು. ತರಂಗ, ಕರುಣಾರತ್ನೆ, ಗುಣರತ್ನೆ, ಡಿಕ್ವೆಲ್ಲ, ಗುಣತಿಲಕ, ಮೆಂಡಿಸ್‌, ಮ್ಯಾಥ್ಯೂಸ್‌ ಅವರೆಲ್ಲ ಉತ್ತಮ ಹೋರಾಟ ಸಂಘಟಿಸಿಯಾರೆಂಬ ನಂಬಿಕೆ ಇದೆ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.