ಡೇವಿಡ್‌ ವಾರ್ನರ್‌ಗೆ ಬೌನ್ಸರ್‌ ಏಟು


Team Udayavani, Aug 16, 2017, 11:27 AM IST

11-SPORTS-9.jpg

ಡಾರ್ವಿನ್‌: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಡೇವಿಡ್‌ ವಾರ್ನರ್‌ ಅವರಿಗೆ ಬೌನ್ಸರ್‌ ಏಟು ಬಿದ್ದಿದೆ. ಇದರಿಂದ ಅವರು ಪಂದ್ಯ ದಿಂದ ನಿವೃತ್ತರಾಗಿದ್ದಾರೆ.

ಮಂಗಳವಾರ ಡಾರ್ವಿನ್‌ನಲ್ಲಿ ನಡೆದ ದೇಶಿ ತಂಡಗಳ ಅಭ್ಯಾಸ ಪಂದ್ಯ ದಲ್ಲಿ ಈ ಘಟನೆ ಸಂಭವಿಸಿದೆ. ವೇಗಿ ಜೋಶ್‌ ಹ್ಯಾಝಲ್‌ವುಡ್‌ ಅವರ ಬೌನ್ಸರ್‌ ಒಂದನ್ನು ಹುಕ್‌ ಮಾಡುವ ಯತ್ನದಲ್ಲಿ ಚೆಂಡು ವಾರ್ನರ್‌ ಆವರ ಕುತ್ತಿಗೆಗೆ ಒಂದು ಪಾರ್ಶ್ವಕ್ಕೆ ಬಂದು ಆಪ್ಪಳಿಸಿದೆ.  ಕೂಡಲೇ ಮೈದಾನದಲ್ಲಿ ಕುಸಿದ ವಾರ್ನರ್‌, ಅಷ್ಟೇ ಬೇಗ ಚೇತರಿಸಿ ಕೊಂಡು ಎದ್ದು ನಿಂತಿದ್ದಾರೆ. ತಂಡದ ವೈದ್ಯರಾದ ರಿಚರ್ಡ್‌ ಸಾ ಮೈದಾನಕ್ಕೆ ಧಾವಿಸಿ ವಾರ್ನರ್‌ಗೆ ಪ್ರಥಮ ಚಿಕಿತ್ಸೆ ನೀಡಿದರು. ವಾರ್ನರ್‌ ಮತ್ತೆ ಬ್ಯಾಟಿಂಗ್‌ ಮುಂದುವರಿಸಲಿಲ್ಲ. ಆಗ ಅವರು 2 ರನ್‌ ಮಾಡಿದ್ದರಷ್ಟೇ. ಇದು ದ್ವಿತೀಯ ಇನ್ನಿಂಗ್ಸ್‌ ಬ್ಯಾಟಿಂಗ್‌ ಆಗಿತ್ತು. ಮೊದಲ ಸರದಿಯಲ್ಲಿ ವಾರ್ನರ್‌ ಕೇವಲ 4 ರನ್‌ ಮಾಡಿ ಔಟಾಗಿದ್ದರು.

ಬಾಂಗ್ಲಾದೇಶ ಪ್ರವಾಸ ಕೈಗೊಳ್ಳ ಲಿರುವ ಆಸ್ಟ್ರೇಲಿಯ  ಕ್ರಿಕೆಟ್‌ ತಂಡಕ್ಕೆ ಡಾರ್ವಿನ್‌ನಲ್ಲಿ ಡೇವಿಡ್‌ ವಾರ್ನರ್‌ ಇಲೆವೆನ್‌ ಮತ್ತು ಸ್ಟೀವನ್‌ ಸ್ಮಿತ್‌ ಇಲೆವೆನ್‌ ತಂಡಗಳ ನಡುವೆ ತ್ರಿದಿನಅಭ್ಯಾಸ ಪಂದ್ಯವನ್ನು ಆಯೋ ಜಿಸಲಾಗಿತ್ತು. ಪಂದ್ಯದ 2ನೇ ದಿನ ಈ ದುರ್ಘ‌ಟನೆ ಸಂಭವಿಸಿದೆ.

ಇದು ಗಂಭೀರ ಸ್ವರೂಪದ ಏಟಲ್ಲ ಎಂಬುದಾಗಿ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಕುತ್ತಿಗೆ ಭಾಗದಲ್ಲಿ ಸ್ವಲ್ಪ ನೋವು ಹಾಗೂ ಊತ ಇದೆ ಎಂದಿದ್ದಾರೆ. 
ಮತ್ತೂಬ್ಬ ವೇಗಿ ಪ್ಯಾಟ್‌ ಕಮಿನ್ಸ್‌ ಕೂಡ ವಾರ್ನರ್‌ ಆರೋಗ್ಯದಿಂದ ಇದ್ದಾರೆ ಎಂದು ತಿಳಿಸಿದ್ದಾರೆ. ವಾರ್ನರ್‌ ಅಂತಿಮ ದಿನ ಕಣಕ್ಕಿಳಿಯುವರೋ ಎಂಬುದು ಬುಧವಾರ ಬೆಳಗ್ಗೆಯಷ್ಟೇ ತಿಳಿದು ಬರಲಿದೆ.

ವೇತನ ವಿವಾದಗಳನ್ನೆಲ್ಲ ಒಂದು ಹಂತಕ್ಕೆ ಬಗೆಹರಿ ಸಿಕೊಂಡಿರುವ ಆಸ್ಟ್ರೇಲಿಯ ಕ್ರಿಕೆಟಿಗರು ಶುಕ್ರವಾರ ಬಾಂಗ್ಲಾದೇಶಕ್ಕೆ ವಿಮಾನ ಏರಲಿದ್ದಾರೆ. ಈ ಸರಣಿಯ ವೇಳೆ 2 ಟೆಸ್ಟ್‌ ಪಂದ್ಯ ಗಳನ್ನು ಆಡಲಾಗುವುದು. ಇದು 2006ರ ಬಳಿಕ ಬಾಂಗ್ಲಾ ದೇಶಕ್ಕೆ ಆಸ್ಟ್ರೇಲಿಯ ಕೈಗೊಳ್ಳುತ್ತಿರುವ ಮೊದಲ ಪ್ರವಾಸ ಎಂಬುದು ಉಲ್ಲೇಖನೀಯ.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.