ಸಿನ್ಸಿನಾಟಿ ಓಪನ್‌ ಟೆನಿಸ್‌ : ಪ್ಲಿಸ್ಕೋವಾ ಸೆಮಿಫೈನಲ್‌ಗೆ


Team Udayavani, Aug 20, 2017, 7:10 AM IST

Karolina-Pliskova–19.jpg

ಸಿನ್ಸಿನಾಟಿ: ಹಾಲಿ ಚಾಂಪಿಯನ್‌ ಕ್ಯಾರೋಲಿನಾ ಪ್ಲಿಸ್ಕೋವಾ ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಆಟವಾಡಿ ಸಿನ್ಸಿನಾಟಿ ಓಪನ್‌ ಟೆನಿಸ್‌ ಕೂಟದ ಸೆಮಿಫೈನಲ್‌ ತಲುಪಿದ್ದಾರೆ.

25ರ ಹರೆಯದ ಜೆಕ್‌ ಗಣರಾಜ್ಯದ ಪ್ಲಿಸ್ಕೋವಾ ಮೊದಲಿಗೆ ಇಟಲಿಯ ಅರ್ಹತಾ ಆಟಗಾರ್ತಿ ಜಿಯೋರ್ಗಿ ಅವರನ್ನು 6-3, 4-6, 6-0 ಸೆಟ್‌ಗಳಿಂದ ಸೋಲಿಸಿದರು. ಈ ಪಂದ್ಯ ಮಳೆಯಿಂದ ಮುಂದೂಡಲಾಗಿತ್ತು. ಎರಡು ಗಂಟೆಯ ಬಳಿಕ ಮತ್ತೆ ಅಂಗಣಕ್ಕೆ ಆಗಮಿಸಿದ ಪ್ಲಿಸ್ಕೋವಾ ಡೆನ್ಮಾರ್ಕ್‌ನ ಐದನೇ ಶ್ರೇಯಾಂಕದ ಕ್ಯಾರೋಲಿನ್‌ ವೋಜ್ನಿಯಾಕಿ ಅವರನ್ನು 6-2, 6-4 ನೇರ ಸೆಟ್‌ಗಳಿಂದ ಉರುಳಿಸಿ ಅಂತಿಮ ನಾಲ್ಕರ ಸುತ್ತಿಗೇರಿದರು.

ಸೆಮಿಫೈನಲ್‌ ಹೋರಾಟದಲ್ಲಿ ಪ್ಲಿಸ್ಕೋವಾ ಹಾಲಿ ವಿಂಬಲ್ಡನ್‌ ಚಾಂಪಿಯನ್‌ ಗಾರ್ಬಿನ್‌ ಮುಗುರುಜಾ ಅವರನ್ನು ಎದುರಿಸಲಿದ್ದಾರೆ. ಮುಗುರುಜಾ ಇನ್ನೊಂದು ಪಂದ್ಯದಲ್ಲಿ ರಶ್ಯದ ಎಂಟನೇ ಶ್ರೇಯಾಂಕದ ಸ್ವೆತ್ಲಾನಾ ಕುಜ್ನೆತ್ಸೋವಾ ಅವರನ್ನು 6-2, 5-7, 7-5 ಸೆಟ್‌ಗಳಿಂದ ಸೋಲಿಸಿದರು. ಇಬ್ಬರು ಗ್ರ್ಯಾನ್‌ ಸ್ಲಾಮ್‌ ವಿಜೇತರ ನಡುವಣ ಈ ಹೋರಾಟ ಎರಡು ತಾಸು ಮತ್ತು 45 ನಿಮಿಷಗಳವರೆಗೆ ಸಾಗಿತ್ತು.

ಇದು ಈ ವರ್ಷದ ಶ್ರೇಷ್ಠ ಪಂದ್ಯಗಳಲ್ಲಿ ಒಂದಾಗಿದೆ. ಈ ಕಾದಾಟದಲ್ಲಿ ನಾನು ಗೆಲ್ಲಲು ಕಠಿನ ಹೋರಾಟ ನಡೆಸಿದ್ದೇನೆ. ಇದೊಂದು ಅತ್ಯಂತ ಕಠಿನ ಪಂದ್ಯವಾಗಿತ್ತು. ನಾವಿಬ್ಬರು ಅತ್ಯುತ್ತಮ ಆಟ ಆಡಿದೆವು ಎಂದು ಪಂದ್ಯದ ಬಳಿಕ ಮುಗುರುಜಾ ಹೇಳಿದರು.

ನಂ. ವನ್‌ ಯಾರು ?: ವಿಶ್ವದ ನಂಬರ್‌ ವನ್‌ ಸ್ಥಾನಕ್ಕಾಗಿ ಪ್ಲಿಸ್ಕೋವಾ ಜತೆ ಈ ವಾರ ನಾಲ್ವರು ಸ್ಪರ್ಧೆಯಲ್ಲಿದ್ದರು. ಅವರಲ್ಲಿ ಕೇವಲ ಹಾಲೆಪ್‌ ಮಾತ್ರ ಕಣದಲ್ಲಿ ಉಳಿದಿದ್ದಾರೆ. ಹಾಲೆಪ್‌ ತನ್ನ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಬ್ರಿಟನ್‌ನ 7ನೇ ಶ್ರೇಯಾಂಕದ ಜೋಹಾನಾ ಕೊಂಟಾ ಅವರನ್ನು ಎದುರಿಸಲಿದ್ದಾರೆ. ಪ್ಲಿಸ್ಕೋವಾ ಸತತ ಎರಡು ಪಂದ್ಯ ಗೆದ್ದು ಸೆಮಿಫೈನಲ್‌ ತಲುಪಿದ್ದರಿಂದ ಹಾಲೆಪ್‌ ಈ ಕೂಟದಲ್ಲಿ ಪ್ರಶಸ್ತಿ ಗೆದ್ದರೆ ಮಾತ್ರ ವಿಶ್ವದ ನಂಬರ್‌ ವನ್‌ ಸ್ಥಾನ ಪಡೆಯಲಿದ್ದಾರೆ. ಒಂದು ವೇಳೆ ಅದಕ್ಕಿಂತ ಮೊದಲು ಹಾಲೆಪ್‌ ಸೋತರೆ ಪ್ಲಿಸ್ಕೋವಾ ಮುಂದಿನ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂಬರ್‌ ವನ್‌ ಅಲಂಕರಿಸಲಿದ್ದಾರೆ.

ನಡಾಲ್‌ಗೆ ಆಘಾತ
ಸಿನ್ಸಿನಾಟಿ:
ಮುಂದಿನ ವಾರ ವಿಶ್ವದ ನಂಬರ್‌ ವನ್‌ ರ್‍ಯಾಂಕ್‌ ಪಡೆಯಲಿರುವ ಸ್ಪೇನ್‌ನ ರಫೆಲ್‌ ನಡಾಲ್‌ ಅವರನ್ನು ನೇರ ಸೆಟ್‌ಗಳಿಂದ ಉರುಳಿಸಿದ ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌ ಅವರು ಸಿನ್ಸಿನಾಟಿ ಓಪನ್‌ ಟೆನಿಸ್‌ ಕೂಟದ ಸೆಮಿಫೈನಲ್‌ ಹಂತಕ್ಕೇರಿದರು. 

15 ಬಾರಿಯ ಗ್ರ್ಯಾನ್‌ ಸ್ಲಾಮ್‌ ಚಾಂಪಿಯನ್‌ ಆಗಿರುವ ನಡಾಲ್‌ ಅವರನ್ನು 6-2, 7-5 ಸೆಟ್‌ಗಳಿಂದ ಸೋಲಿಸಿದ ಕ್ಯಾನ್‌ಬೆರಾದ 22ರ ಹರೆಯದ ಕಿರ್ಗಿಯೋಸ್‌ ಅಂತಿಮ ನಾಲ್ಕರ ಸುತ್ತಿಗೇರಿದರು. ಸೆಮಿಫೈನಲ್‌ನಲ್ಲಿ ಅವರು ಸ್ಪೇನ್‌ನ ಡೇವಿಡ್‌ ಫೆರರ್‌ ಅವರ ಸವಾಲನ್ನು ಎದುರಿಸಲಿದ್ದಾರೆ. ಇನ್ನೊಂದು ಸೆಮಿಫೈನಲ್‌ ಪಂದ್ಯ ಬಲ್ಗೇರಿಯದ ಗ್ರಿಗರ್‌ ದಿಮಿತ್ರೋವ್‌ ಮತ್ತು ಅಮೆರಿಕದ ಜಾನ್‌ ಇಸ್ನರ್‌ ನಡುವೆ ನಡೆಯಲಿದೆ. 

ಈ  ಮೊದಲು ನಡೆದ ಪಂದ್ಯದಲ್ಲಿ ಕಿರ್ಗಿಯೋಸ್‌ ಕ್ರೊವೇಶಿಯದ ಇವೊ ಕಾರ್ಲೋವಿಕ್‌ ಅವರನ್ನು 5-6, 7-6 (8-6), 6-3 ಸೆಟ್‌ಗಳಿಂದ ಸೋಲಿಸಿದ್ದರೆ ನಡಾಲ್‌ ತನ್ನ ದೇಶದವರೇ ಆದ ಆಲ್ಬರ್ಟ್‌ ರಾಮೋಸ್‌ ವಿನೋಲಾಸ್‌ ಅವರನ್ನು 7-6 (7-1), 6-2 ಸೆಟ್‌ಗಳಿಂದ ಕೆಡಹಿದ್ದರು.

ಎರಡು ವರ್ಷಗಳ ಬಳಿಕ ತನ್ನ ಶ್ರೇಷ್ಠ ನಿರ್ವಹಣೆ ನೀಡಿದ ಕಿರ್ಗಿಯೋಸ್‌ ತನ್ನ ಬಾಳ್ವೆಯ ನಾಲ್ಕನೇ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. 2016ರಲ್ಲಿ ಅವರು ಮಾರ್ಸೆಲ್ಲೆ, ಅಟ್ಲಾಂಟಾ ಮತ್ತು ಟೋಕಿಯೋದಲ್ಲಿ ಪ್ರಶಸ್ತಿ ಜಯಿಸಿದ್ದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.