ಧೋನಿಗೆ ಪದ್ಮಭೂಷಣ; ಬಿಸಿಸಿಐ ಶಿಫಾರಸು


Team Udayavani, Sep 21, 2017, 10:40 AM IST

21STATE-29.jpg

ಹೊಸದಿಲ್ಲಿ: ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣಕ್ಕೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹೇಂದ್ರ ಸಿಂಗ್‌ ಧೋನಿ ಅವರ ಹೆಸರನ್ನು ಶಿಫಾರಸು ಮಾಡಿದೆ. 

ಕ್ರಿಕೆಟ್‌ಗೆ ನೀಡಿದ ಮಹಾನ್‌ ಕೊಡುಗೆಗಾಗಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕ ಧೋನಿ ಅವರ ಹೆಸರನ್ನು ಈ ವರ್ಷದ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಈ ಗೌರವಕ್ಕೆ ಧೋನಿ ಅವರ ಆಯ್ಕೆ ನಿರ್ಧಾರ ಅವಿ ರೋಧವಾಗಿತ್ತು ಮತ್ತು ಅವರೊಬ್ಬರನ್ನೇ ಪದ್ಮಪ್ರಶಸ್ತಿಗೆ ಹೆಸರಿಸಲಾಗಿದೆ ಎಂದು ಬಿಸಿಸಿಐಯ ಹಿರಿಯ ಅಧಿ ಕಾರಿಯೊಬ್ಬರು ದೃಢಪಡಿಸಿದ್ದಾರೆ.

ಧೋನಿ ಅವರ ಸಾಧನೆ ಅಸಾಮಾನ್ಯವಾದುದ್ದು. ಅವರು ಎರಡು ವಿಶ್ವಕಪ್‌ (2011ರಲ್ಲಿ 50 ಓವರ್‌ಗಳ ವಿಶ್ವಕಪ್‌  ಮತ್ತು 2007ರಲ್ಲಿ ಟ್ವೆಂಟಿ20 ವಿಶ್ವಕಪ್‌) ಗೆದ್ದ ಭಾರತದ ಏಕೈಕ ನಾಯಕರಾಗಿದ್ದಾರೆ. ಹಾಗಾಗಿ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂಧು ಪ್ರಭಾರ ಅಧ್ಯಕ್ಷ ಸಿ.ಕೆ. ಖನ್ನಾ ಹೇಳಿದ್ದಾರೆ. 

ಅವರೊಬ್ಬ ಏಕದಿನ ಕ್ರಿಕೆಟ್‌ನ ಸರ್ವಶ್ರೇಷ್ಠ ಕ್ರಿಕೆಟಿಗ. ಅವರು ಹತ್ತಿರ ಹತ್ತಿರ 10 ಸಾವಿರ ರನ್‌ ಪೇರಿಸಿದ ಆಟಗಾರರಾಗಿದ್ದಾರೆ. ಹೆಚ್ಚಿನ ಆಟಗಾರರು 90 ಟೆಸ್ಟ್‌ ಪಂದ್ಯಗಳನ್ನು ಆಡಿರಲಿಕ್ಕಿಲ್ಲ. ಪ್ರತಿಷ್ಠಿತ ಪ್ರಶಸ್ತಿಗೆ ಧೋನಿ ಅವರಿಗಿಂತ ಒಳ್ಳೆಯ ಕ್ರಿಕೆಟಿಗ ಸದ್ಯ ಇರಲಿಕ್ಕಿಲ್ಲ ಎಂದು ಖನ್ನಾ ತಿಳಿಸಿದರು. ಈ ವರ್ಷದ ಪದ್ಮ ಪ್ರಶಸ್ತಿಗೆ ಬಿಸಿಸಿಐ ಧೋನಿ ಹೊರತುಪಡಿಸಿ ಉಳಿದ ಯಾವುದೇ ಕ್ರಿಕೆಟಿಗರ ಹೆಸರನ್ನು ಶಿಫಾರಸು ಮಾಡಿಲ್ಲ.

36ರ ಹರೆಯದ ಧೋನಿ 302 ಏಕದಿನ ಪಂದ್ಯಗಳನ್ನಾಡಿದ್ದು 9737  ರನ್‌ ಬಾರಿಸಿದ್ದಾರೆ. 90 ಟೆಸ್ಟ್‌ ಆಡಿರುವ ಅವರು 4876 ರನ್‌ ಬಾರಿಸಿದ್ದಾರಲ್ಲದೇ 78 ಟ್ವೆಂಟಿ20 ಪಂದ್ಯಗಳನ್ನಾಡಿ 1212 ರನ್‌ ಹೊಡೆದಿದ್ದಾರೆ. ಟೆಸ್ಟ್‌ ಮತ್ತು ಏಕದಿನ ಪಂದ್ಯಗಳಲ್ಲಿ ಒಟ್ಟಾರೆ 16  ಶತಕ ಬಾರಿಸಿರುವ (ಟೆಸ್ಟ್‌ -6 ಮತ್ತು 11ಏಕದಿನ 10) ಧೋನಿ 100 ಅರ್ಧಶತಕ ಹೊಡೆದಿದ್ದಾರೆ. ವಿಕೆಟ್‌ಕೀಪರ್‌ ಆಗಿ ಧೋನಿ ಎಲ್ಲ ಮೂರು ಮಾದರಿಯ ಕ್ರಿಕೆಟ್‌ಗಳಲ್ಲಿ 584 ಕ್ಯಾಚ್‌ ಪಡೆದಿದ್ದಾರೆ. 163 ಸ್ಟಂಪಿಂಗ್‌ ಮಾಡಿದ್ದಾರೆ.

ಧೋನಿ ಈ ಹಿಂದೆ ಪ್ರತಿಷ್ಠಿತ ರಾಜೀವ್‌ ಗಾಂಧಿ ಖೇಲ್‌ ರತ್ನ ಮತ್ತು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಒಂದು ವೇಳೆ ಪದ್ಮಭೂಷಣ್‌ ಗೌರವಕ್ಕೆ ಪಾತ್ರರಾದರೆ ಈ ಗೌರವ ಸ್ವೀಕರಿಸಿದ ಭಾರತದ 11ನೇ ಕ್ರಿಕೆಟಿಗರಾಗಲಿದ್ದಾರೆ. ಸಚಿನ್‌ ತೆಂಡುಲ್ಕರ್‌, ಕಪಿಲ್‌ ದೇವ್‌, ಸುನೀಲ್‌ ಗಾವಸ್ಕರ್‌, ರಾಹುಲ್‌ ದ್ರಾವಿಡ್‌, ಚಂದು ಬೋರ್ಡೆ, ಪ್ರೊ| ಡಿಬಿ ದೇವಧರ್‌, ಕರ್ನಲ್‌ ಸಿಕೆ ನಾಯ್ಡು ಮತ್ತು ಲಾಲಾ ಅಮರ್‌ನಾಥ್‌ ಈ ಹಿಂದೆ ಪದ್ಮಭೂಷಣ್‌ ಪ್ರಶಸ್ತಿ  ಸ್ವೀಕರಿಸಿದ್ದರು.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.