ಮತ್ತೆ ಭಾರತ-ಪಾಕ್ ಸೆಣಸಾಟ
Team Udayavani, Oct 21, 2017, 12:13 PM IST
ಢಾಕಾ: ಹತ್ತನೇ ಏಶ್ಯ ಕಪ್ ಹಾಕಿ ಪಂದ್ಯಾವಳಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ಥಾನ ತಂಡಗಳು ಮತ್ತೂಮ್ಮೆ ಮುಖಾಮುಖಿ ಯಾಗಲಿದ್ದು, ಕ್ರೀಡಾಭಿಮಾನಿಗಳಲ್ಲಿ ವಿಪರೀತ ಕುತೂ ಹಲ ಮೂಡಿಸಿದೆ. ಇದು ಸೂಪರ್-4 ಹಂತದ ಕೊನೆಯ ಪಂದ್ಯವಾಗಿದ್ದು, ಶನಿವಾರ ಸಂಜೆ ಕಾವೇರಿಸಿಕೊಳ್ಳಲಿದೆ.
ಕೂಟದ ಅಗ್ರ ರ್ಯಾಂಕಿಂಗ್ ತಂಡವಾಗಿರುವ ಭಾರತ ಈವರೆಗೆ ತನ್ನ ಸ್ಥಾನಮಾನಕ್ಕೆ ತಕ್ಕ ಪ್ರದರ್ಶನ ನೀಡುತ್ತಲೇ ಅಜೇಯವಾಗಿ ಮುನ್ನುಗ್ಗಿ ಬಂದಿದೆ. ಲೀಗ್ ಹಂತದ ಎಲ್ಲ 3 ಪಂದ್ಯಗಳನ್ನು ಗೆದ್ದ ಮನ್ಪ್ರೀತ್ ಸಿಂಗ್ ಪಡೆ ಅಜೇಯವಾಗಿ ಸೂಪರ್-4 ಹಂತಕ್ಕೆ ನೆಗೆದಿತ್ತು. ಇಲ್ಲಿ ದಕ್ಷಿಣ ಕೊರಿಯಾ ವಿರುದ್ಧ 1-1 ಡ್ರಾ ಸಾಧಿಸಿದ ಬಳಿಕ ಮಲೇಶ್ಯವನ್ನು 6-2 ಗೋಲುಗಳ ಭಾರೀ ಅಂತರದಿಂದ ಬಗ್ಗುಬಡಿಯಿತು. ಹೀಗಾಗಿ 4 ಅಂಕಗಳೊಂದಿಗೆ ಸೂಪರ್-4 ಹಂತದಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಮಲೇಶ್ಯ (3 ಅಂಕ), ಕೊರಿಯಾ (2 ಅಂಕ) ಮತ್ತು ಪಾಕಿಸ್ಥಾನ (1 ಅಂಕ) ಅನಂತರದ ಸ್ಥಾನದಲ್ಲಿವೆ. ಪಾಕ್ ವಿರುದ್ಧ ಭಾರತ ಕನಿಷ್ಠ ಡ್ರಾ ಸಾಧಿಸಿದರೂ ರವಿವಾರದ ಪ್ರಶಸ್ತಿ ಹಣಾಹಣಿಯ ಟಿಕೆಟ್ ಸಂಪಾದಿಸಲಿದೆ.
ಆದರೆ ಭಾರತದ ಈಗಿನ ಫಾರ್ಮ್, ಪಂದ್ಯದ ಮೇಲಿನ ಪ್ರಭುತ್ವ, ಆಟಗಾರರ ಉತ್ಸಾಹವನ್ನೆಲ್ಲ ಕಂಡಾಗ ಪಾಕಿಸ್ಥಾನ ವಿರುದ್ಧ ಮತ್ತೂಮ್ಮೆ ಮೇಲುಗೈ ಸಾಧಿಸಿ ಸ್ಪಷ್ಟ ಗೆಲುವು ಸಾಧಿಸುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಲೀಗ್ ಪಂದ್ಯದಲ್ಲಿ ಭಾರತ 3-1 ಅಂತರದಿಂದ ಪಾಕಿಸ್ಥಾನವನ್ನು ಉರುಳಿಸಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವ ಗುರಿ ಪಾಕಿಸ್ಥಾನದ್ದಾದರೂ ಇದರಲ್ಲಿ ಯಶಸ್ಸು ಕಾಣುವುದು ಅಷ್ಟು ಸುಲಭವಲ್ಲ ಎಂದೇ ಅಭಿಪ್ರಾಯಪಡಲಾಗಿದೆ.
ಎಚ್ಚರಿಕೆಯ ಗಂಟೆ
ಸೂಪರ್-4 ಹಂತದ ಮೊದಲ ಪಂದ್ಯದಲ್ಲಷ್ಟೇ ಭಾರತಕ್ಕೆ ಗೆಲುವು ಮರೀಚಿಕೆಯಾಗಿತ್ತು. ಕೊರಿಯಾ ವಿರುದ್ಧದ ಈ ಪಂದ್ಯದಲ್ಲಿ ಭಾರತ 1-1 ಡ್ರಾಗೆ ಸಮಾಧಾನಪಡಬೇಕಾಯಿತು. ಇದನ್ನೊಂದು ಎಚ್ಚರಿಕೆಯ ಗಂಟೆಯೆಂದೇ ಭಾವಿಸಿದ ಮನ್ಪ್ರೀತ್ ಪಡೆ, ಮುಂದಿನ ಪಂದ್ಯದಲ್ಲೇ ಮಲೇಶ್ಯವನ್ನು 6-2 ಗೋಲುಗಳಿಂದ ಅಡ್ಡಡ್ಡ ಮಲಗಿಸಿತು. ಭಾರತದಂತೆ ಅಜೇಯವಾಗಿ ಈ ಸುತ್ತಿಗೆ ಬಂದಿದ್ದ ಮಲೇಶ್ಯಕ್ಕೆ ಎದುರಾದ ಮೊದಲ ಆಘಾತ ಇದಾಗಿತ್ತು. ಈ ಗೆಲುವಿನಲ್ಲಿ ಮೈಮರೆಯದೆ, ಪಾಕಿಸ್ಥಾನವನ್ನು ಈಗಾಗಲೇ ಒಮ್ಮೆ ಮಣಿಸಿದ್ದೇವೆ ಎಂದು ಲಘುವಾಗಿ ಪರಿಗಣಿಸದೆ ಆಡಿದರೆ ಭಾರತ ನಿರಾಳವಾಗಿ ಫೈನಲ್ಗೆ ಲಗ್ಗೆ ಇಡುವುದು ಖಚಿತ.
ಕೋಚ್ ಶೋರ್ಡ್ ಮರಿನ್ ಮಾರ್ಗದರ್ಶನದಲ್ಲಿ ಮೊದಲ ಪಂದ್ಯಾವಳಿಯಲ್ಲಿ ಆಡುತ್ತಿರುವ ಭಾರತ ಪೆನಾಲ್ಟಿ ಕಾರ್ನರ್ ಒಂದನ್ನು ಹೊರತುಪಡಿಸಿ ಉಳಿದೆಲ್ಲ ವಿಭಾಗ ಗಳಲ್ಲೂ ಅಮೋಘ ಪ್ರದರ್ಶನ ನೀಡಿದೆ. ಆಕಾಶ್ದೀಪ್ ಸಿಂಗ್, ರಮಣ್ದೀಪ್ ಸಿಂಗ್, ಎಸ್.ವಿ. ಸುನೀಲ್, ಲಲಿತ್ ಉಪಾಧ್ಯಾಯ, ಗುರ್ಜಂತ್ ಸಿಂಗ್ ಅತ್ಯಾಕರ್ಷಕ ಫೀಲ್ಡ್ ಗೋಲುಗಳ ಮೂಲಕ ಮಿಂಚು ಹರಿಸಿದ್ದಾರೆ.
ಪಾಕ್ ಸ್ಥಿತಿ ತದ್ವಿರುದ್ಧ
ಆದರೆ ಪಾಕಿಸ್ಥಾನದ ಸ್ಥಿತಿ ಇದಕ್ಕೆ ತದ್ವಿರುದ್ಧ. ಕೇವಲ ಒಂದು ಅಂಕವನ್ನು ಕೈಲಿರಿಸಿಕೊಂಡಿರುವ ಪಾಕಿಸ್ಥಾನ ಕೂಟದಿಂದ ಬಹುತೇಕ ಹೊರಬಿದ್ದಿದೆ. ಭಾರೀ ಅಂತರದ ಗೆಲುವು, ದಕ್ಷಿಣ ಕೊರಿಯಾ-ಮಲೇಶ್ಯ ನಡುವಿನ ದಿನದ ಇನ್ನೊಂದು ಪಂದ್ಯದ ಫಲಿತಾಂಶ ಕೂಡ ಪಾಕ್ ಹಾದಿಯನ್ನು ಸುಗಮಗೊಳಿಸೀತೆಂದು ಹೇಳಲಾಗದು. ಅಕಸ್ಮಾತ್ ಪಾಕ್ ಜಯ ಸಾಧಿಸಿ, ಕೊರಿಯಾ-ಮಲೇಶ್ಯ ಪಂದ್ಯ ಡ್ರಾಗೊಂಡರೆ ಆಗ ಫೈನಲ್ ಲೆಕ್ಕಾಚಾರ ತಲೆ ಕೆಳಗಾಗಲಿದೆ. ಯಾವುದಕ್ಕೂ ಭಾರತ ಸೋಲದೇ ಉಳಿಯುವುದು ಕ್ಷೇಮ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್