ಪತ್ನಿಗೆ ಚುಡಾಯಿಸಿದವನ ಥಳಿಸಿದ ಪೊಲೀಸ್‌ ಸಸ್ಪೆಂಡ್‌ ;ಸಚಿವರ ಒತ್ತಡ ?


Team Udayavani, Apr 9, 2017, 8:48 AM IST

pramod.jpg

ಉಡುಪಿ: ತನ್ನ ಪತ್ನಿಯನ್ನು ಚುಡಾಯಿಸಿದ ವ್ಯಕ್ತಿಗೆ ಹಲ್ಲೆ ಮಾಡಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಓರ್ವರನ್ನು ಅಮಾನತು ಮಾಡಿದ ಘಟನೆ ಸಂಭವಿಸಿದೆ.

ಹಲ್ಲೆಗೊಳಗಾದ ವ್ಯಕ್ತಿ ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಪ್ರಕಾಶ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್‌ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ. ಆದರೆ ಇಡೀ ಘಟನೆ ರಾಜಕೀಯ ಪ್ರೇರಿತ. ಜಿಲ್ಲಾ ಉಸ್ತುವಾರಿ ಸಚಿವರು ಒತ್ತಡ ತಂದು ನನ್ನನ್ನು ಅಮಾನತು ಮಾಡಿಸಿದ್ದಾರೆ ಎಂದು ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರಕಾಶ್‌ ತಿಳಿಸಿದ್ದಾರೆ. ಸಚಿವರ ಫಿಶ್‌ಮೀಲ್‌ ಕಂಪೆನಿಯಲ್ಲಿರುವ ಕಾರ್ಮಿಕರಿಬ್ಬರು ತನ್ನ ಪತ್ನಿಯನ್ನು ಚುಡಾಯಿಸಿದ್ದು, ಅವರನ್ನು ರಕ್ಷಿಸಿ ತನ್ನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ವೈರಲ್‌ ಆದ ಆಡಿಯೋ: ಪೊಲೀಸ್‌ ಪ್ರಕಾಶ್‌ ಅವರು ಇಡೀ ಘಟನೆಯ ಕುರಿತಂತೆ ಸಮಗ್ರವಾಗಿ ವಿವರಿಸಿದ ಆಡಿಯೋ ಒಂದು ಶನಿವಾರ ಸಂಜೆಯಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತನಗೆ ಅನ್ಯಾಯವಾಗಿದೆ ಎಂದು ಅಲವತ್ತುಕೊಂಡಿದ್ದಾರೆ. 

 ಆಡಿಯೋದಲ್ಲೇನಿದೆ: ಪ್ರಕಾಶ್‌ ಅವರು ಪೊಲೀಸ್‌ ಸಿಬಂದಿ ಸಂಘದ ರಾಜ್ಯ ನಾಯಕ ಶಶಿಧರ್‌ ಅವರೊಂದಿಗೆ ಮಾತನಾಡಿದ್ದು ಎನ್ನಲಾದ ಆಡಿಯೋ ಹರಿದಾಡುತ್ತಿದೆ. “ನಾನು ಮತ್ತು ಗರ್ಭಿಣಿ ಪತ್ನಿ ಔಷಧಕ್ಕೆಂದು ಆಸ್ಪತ್ರೆಗೆ ಹೋಗಿ ಬರುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಪತ್ನಿಯನ್ನು ಚುಡಾಯಿಸಿದರು. ಅವರು ಮತ್ತೆ ಮತ್ತೆ ಚುಡಾಯಿಸಿದಾಗ ಆಕ್ಷೇಪಿಸಿ ಕೈಯಿಂದ ಹಲ್ಲೆ  ನಡೆಸಿದೆ. ಅನಂತರ ಪತ್ನಿಯ ಮೂಲಕ ದೂರು ನೀಡಿದೆ. ಆದರೆ ನನ್ನ ದೂರನ್ನು ಸ್ವೀಕರಿಸಲಿಲ್ಲ. 

ಚುಡಾಯಿಸಿದ ವ್ಯಕ್ತಿಗಳು ಸಚಿವರ ಫಿಶ್‌ಮೀಲ್‌ ಕಂಪೆನಿಯ ಉದ್ಯೋಗಿಗಳಂತೆ. ಅವರು ಸಚಿವರ ಮೇಲೆ ಒತ್ತಡ ತಂದು ಕೇಸು ದಾಖಲಿಸದಂತೆ ಮಾಡಿ ಅನಂತರ ನನ್ನನ್ನು ಮತ್ತು ಎಸ್‌ಐ ಅವರನ್ನು ಕಂಪೆನಿಗೆ ಕರೆಸಿಕೊಂಡು ಅಲ್ಲಿ ನೂರಾರು ಉದ್ಯೋಗಿಗಳ ಸಮ್ಮುಖದಲ್ಲಿ ರಾಜಿಯಲ್ಲಿ ಇತ್ಯರ್ಥಪಡಿಸಲು ಒತ್ತಾಯ ಮಾಡಿದರು. ಎಸ್‌ಐ ಸೂಚನೆಯಂತೆ ಅದಕ್ಕೆ ಒಪ್ಪಿದ ಬಳಿಕ ಉದ್ಯೋಗಿಗೆ ಚಿಕಿತ್ಸೆ ಕೊಡಿಸುವಂತೆಯೂ ಆಗ್ರಹಿಸಿದರು. ಎಲ್ಲವೂ ಆದ ಬಳಿಕ ಮೇಲಧಿಕಾರಿಗಳ ಸೂಚನೆಯಂತೆ ನನ್ನನ್ನು ಅಮಾನತು ಮಾಡಲಾಗಿದೆ’ ಎಂದು ಆಡಿಯೋದಲ್ಲಿ ದೂರಿಕೊಂಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.