ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ:ಸಂಚಾರ ಎಂದಿನಂತೆ
Team Udayavani, Aug 7, 2018, 9:30 AM IST
ಬೆಂಗಳೂರು: ಮೋಟಾರು ವಾಹನ (ತಿದ್ದುಪಡಿ) ಮಸೂದೆ 2017′ ಹಿಂಪಡೆಯುವಂತೆ ಆಗ್ರಹಿಸಿ ಕರೆ ನೀಡಿರುವ ಬಂದ್ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರು ನಗರದಲ್ಲಿ ಬಿಎಂಟಿಸಿ ಸಂಚಾರ, ಕೆಎಸ್ಆರ್ಟಿಸಿ, ಆಟೋಗಳು ,ಮೆಟ್ರೋ ಸಂಚಾರ ಎಂದಿನಂತೆ ಇದೆ.
ಹುಬ್ಬಳ್ಳಿ, ಮಂಗಳೂರು , ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲು ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಂಚಾರ ಎಂದಿನಂತೆ ಇದೆ.
ರಾಜ್ಯದಲ್ಲಿ ಕೆಲವು ಸಾರಿಗೆ ಸಂಘಟನೆಗಳು ಮಾತ್ರ ಬೆಂಬಲ ಸೂಚಿಸಿದ ಹಿನ್ನಲೆಯಲ್ಲಿ ಬಂದ್ ಯಶಸ್ವಿಯಾಗಿಲ್ಲ.