ಗೌರಿಶಂಕರ ಶ್ರೀ ಲಿಂಗೈಕ್ಯ: ಸಿದ್ದಗಂಗಾ ಮಠಕ್ಕೆ ಭದ್ರತೆ ನೀಡಲು ಮನವಿ
Team Udayavani, Jan 11, 2017, 11:25 AM IST
ಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳುತ್ತಿದ್ದ ತುಮಕೂರಿನ ಗೌರಿಶಂಕರ ಶ್ರೀಗಳು ಬುಧವಾರ ಕೆಂಪೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ಪ್ರಾಯವಾಗಿತ್ತು.
ಸಿದ್ಧಗಂಗಾ ಮಠದಲ್ಲಿದ್ದ ಶ್ರೀಗಳು ಉತ್ತರಾಧಿಕಾರಿಯಾಗಬೇಕಿತ್ತು, ಆದರೆ ವೈಯಕ್ತಿಕ ಕಾರಣಗಳಿಂದ 1988 ರಲ್ಲಿ ಮಠದಿಂದ ಹೋರಹಾಕಲಾಗಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲನ್ನೂ ಏರಿತ್ತು.ಬಳಿಕ ಗೌರಿಶಂಕರ ಶ್ರೀಗಳು ಮಠಕ್ಕೆ ಬಾರದಂತೆ ತಡೆಯನ್ನೂ ವಿಧಿಸಲಾಗಿತ್ತು.
6 ತಿಂಗಳ ಹಿಂದೆ ಕೋರ್ಟ್ ಅನುಮತಿ ಪಡೆತು ಮಠಕ್ಕೆ ಮರಲು ಮುಂದಾಗಿದ್ದ ಗೌರಿಶಂಕರ ಶ್ರೀಗಳ ಭೇಟಿಗೆ ಶಿವಕುಮಾರ ಶ್ರೀಗಳು ನಿರಾಕರಿಸಿದ್ದರು.
ಪಾರ್ಥೀವ ಶರೀರವನ್ನು ಹುಟ್ಟೂರಾದ ಗುಬ್ಬಿ ತಾಲೂಕಿನ ಸೀತಕಲ್ಲಿಗೆ ಕೊಂಡೊಯ್ದು ಬಳಿಕ ಕ್ಯಾತ್ಸಂದ್ರ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಗೊಲ್ಲ ಹಳ್ಳಿಯಲ್ಲಿರುವ ಜಂಗಮಮಠದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಭಕ್ತರು ತಿಳಿಸಿದ್ದಾರೆ.
ಮಠಕ್ಕೆ ಭದ್ರತೆ ನೀಡಿ
ಗೌರಿಶಂಕರ ಶ್ರೀಗಳು ಲಿಂಗೈಕ್ಯರಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಠಕ್ಕೆ ಭದ್ರತೆ ನೀಡಲು ಕೋರಿ ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಅವರು ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮಠಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತರಲು ಅವಕಾಶ ನೀಡಬಾರದು ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.
ಶಿವಕುಮಾರ ಶ್ರೀಗಳ ಸಂತಾಪ
ಗೌರಿಶಂಕರ ಶ್ರೀಗಳ ನಿಧನಕ್ಕೆ ಶಿವಕುಮಾರ ಶ್ರೀಗಳು ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ. ಗೌರಿಶಂಕರ ಶ್ರೀಗಳನ್ನು ವಿವಿಧ ಕಾರಣಗಳಿಗಾಗಿ ಮಠದಿಂದ ವಜಾ ಮಾಡಲಾಗಿತ್ತು. ಅವರಿಗೂ ಮಠಕ್ಕೆ ಯಾವುದೇ ಸಂಬಂಧವಿರಲಿಲ್ಲ ಹೀಗಾಗಿ ಪಾರ್ಥೀವ ಶರೀರವನ್ನು ಮಠಕ್ಕೆ ತರಬೇಡಿ ಎಂದು ಸಂತಾಪ ಸೂಚಕ ಪತ್ರದಲ್ಲಿ ಬರೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ