ಗೌರಿಶಂಕರ ಶ್ರೀ ಲಿಂಗೈಕ್ಯ: ಸಿದ್ದಗಂಗಾ ಮಠಕ್ಕೆ ಭದ್ರತೆ ನೀಡಲು ಮನವಿ
Team Udayavani, Jan 11, 2017, 11:25 AM IST
ಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳುತ್ತಿದ್ದ ತುಮಕೂರಿನ ಗೌರಿಶಂಕರ ಶ್ರೀಗಳು ಬುಧವಾರ ಕೆಂಪೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ಪ್ರಾಯವಾಗಿತ್ತು.
ಸಿದ್ಧಗಂಗಾ ಮಠದಲ್ಲಿದ್ದ ಶ್ರೀಗಳು ಉತ್ತರಾಧಿಕಾರಿಯಾಗಬೇಕಿತ್ತು, ಆದರೆ ವೈಯಕ್ತಿಕ ಕಾರಣಗಳಿಂದ 1988 ರಲ್ಲಿ ಮಠದಿಂದ ಹೋರಹಾಕಲಾಗಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲನ್ನೂ ಏರಿತ್ತು.ಬಳಿಕ ಗೌರಿಶಂಕರ ಶ್ರೀಗಳು ಮಠಕ್ಕೆ ಬಾರದಂತೆ ತಡೆಯನ್ನೂ ವಿಧಿಸಲಾಗಿತ್ತು.
6 ತಿಂಗಳ ಹಿಂದೆ ಕೋರ್ಟ್ ಅನುಮತಿ ಪಡೆತು ಮಠಕ್ಕೆ ಮರಲು ಮುಂದಾಗಿದ್ದ ಗೌರಿಶಂಕರ ಶ್ರೀಗಳ ಭೇಟಿಗೆ ಶಿವಕುಮಾರ ಶ್ರೀಗಳು ನಿರಾಕರಿಸಿದ್ದರು.
ಪಾರ್ಥೀವ ಶರೀರವನ್ನು ಹುಟ್ಟೂರಾದ ಗುಬ್ಬಿ ತಾಲೂಕಿನ ಸೀತಕಲ್ಲಿಗೆ ಕೊಂಡೊಯ್ದು ಬಳಿಕ ಕ್ಯಾತ್ಸಂದ್ರ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಗೊಲ್ಲ ಹಳ್ಳಿಯಲ್ಲಿರುವ ಜಂಗಮಮಠದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಭಕ್ತರು ತಿಳಿಸಿದ್ದಾರೆ.
ಮಠಕ್ಕೆ ಭದ್ರತೆ ನೀಡಿ
ಗೌರಿಶಂಕರ ಶ್ರೀಗಳು ಲಿಂಗೈಕ್ಯರಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಠಕ್ಕೆ ಭದ್ರತೆ ನೀಡಲು ಕೋರಿ ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಅವರು ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮಠಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತರಲು ಅವಕಾಶ ನೀಡಬಾರದು ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.
ಶಿವಕುಮಾರ ಶ್ರೀಗಳ ಸಂತಾಪ
ಗೌರಿಶಂಕರ ಶ್ರೀಗಳ ನಿಧನಕ್ಕೆ ಶಿವಕುಮಾರ ಶ್ರೀಗಳು ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ. ಗೌರಿಶಂಕರ ಶ್ರೀಗಳನ್ನು ವಿವಿಧ ಕಾರಣಗಳಿಗಾಗಿ ಮಠದಿಂದ ವಜಾ ಮಾಡಲಾಗಿತ್ತು. ಅವರಿಗೂ ಮಠಕ್ಕೆ ಯಾವುದೇ ಸಂಬಂಧವಿರಲಿಲ್ಲ ಹೀಗಾಗಿ ಪಾರ್ಥೀವ ಶರೀರವನ್ನು ಮಠಕ್ಕೆ ತರಬೇಡಿ ಎಂದು ಸಂತಾಪ ಸೂಚಕ ಪತ್ರದಲ್ಲಿ ಬರೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ