ಎನ್‌ಎಸ್‌ಯುಐ ಜತೆ ಗದ್ದಲ: ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ


Team Udayavani, Jan 12, 2017, 3:45 AM IST

suicide-hanging.jpg

ಶೃಂಗೇರಿ: ಯೋಧರ ನಮನ ಕಾರ್ಯಕ್ರಮ ಆಯೋಜನೆ ಸಮಯದಲ್ಲಿ ಉಂಟಾದ ವಿವಾದದಿಂದ ದಾಖಲಾದ ಪ್ರಕರಣದಲ್ಲಿ ತನ್ನ ಹೆಸರು ಇದ್ದಿದ್ದರಿಂದ ಬೇಸತ್ತು ಎಬಿವಿಪಿ ಕಾರ್ಯಕರ್ತನಾಗಿರುವ ಬಿಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಎನ್‌ಎಸ್‌ಯುಐನ ಕೆಲ ಕಾರ್ಯಕರ್ತರು, ಕಾಲೇಜಿನ ಪ್ರಾಚಾರ್ಯರು, ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಲೂಕಿನ ಮೆಣಸೆ ಗ್ರಾಪಂನ ಕಿಕ್ರೆ ಗ್ರಾಮದ ಕೊಂಡಗೆರೆಯ ಎಂ.ಕೆ. ಅಭಿಷೇಕ್‌ (21) ಎಂಬಾತನೇ ಆತ್ಮಹತ್ಯೆಗೆ ಶರಣಾದವ. ಶ್ರೀ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ಈತ ಎಬಿವಿಪಿ ಕಾರ್ಯಕರ್ತನಾಗಿದ್ದ. ಮನೆ ಸಮೀಪದ ಕಾಡಿನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ.

ಕಾಲೇಜಿನಲ್ಲಿ ಇತ್ತೀಚೆಗೆ ಯೋಧ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣ ಮಾಡಬೇಕಿತ್ತು. ಇದಕ್ಕೆ ಎನ್‌ಎಸ್‌ಯುಐ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ನಡೆಸಿತ್ತು. ಕಾರ್ಯಕ್ರಮ ನಡೆದಿದ್ದರೂ ಸೂಲಿಬೆಲೆ ಪಾಲ್ಗೊಂಡಿರಲಿಲ್ಲ. ಈ ಘಟನೆ ಬಳಿಕ 2 ಸಂಘಟನೆಗಳ ಮಧ್ಯೆ ಸಣ್ಣದಾಗಿ ಘರ್ಷಣೆಯೂ ಉಂಟಾಗಿ ಎಬಿವಿಪಿ ಕಾರ್ಯಕರ್ತರಾದ ಅಭಿಷೇಕ್‌, ಅನಿರುದ್ಧ, ಕೌಶಿಕ್‌, ಕಾರ್ತಿಕ್‌ ಅರ್ಜುನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದರಿಂದ ಮನನೊಂದು ಅಭಿಷೇಕ್‌, ಕಾಲೇಜಿನಲ್ಲಿ ನಡೆದ ಕೆಲ ಘಟನೆಗಳಿಂದ ಮನ ನೊಂದಿದ್ದೇನೆ. ತನ್ನ ಹೆಸರು ಪ್ರಕರಣದಲ್ಲಿ ಸೇರಿದೆ. ಇದರಿಂದ ಗೌರವಸ್ಥ ಕುಟುಂಬಕ್ಕೆ ನಾನು ಕೆಟ್ಟ ಹೆಸರು ತಂದಂತಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್‌ ಬರೆದು ತನ್ನ ಕೊಠಡಿಯಲ್ಲಿಟ್ಟು ಕಾಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಕರಣ ದಾಖಲು: ಅಭಿಷೇಕ್‌ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಎನ್‌ಎಸ್‌ಯುಐನ ಅಂಜನ್‌, ಅಶ್ವಥ್‌, ಕಾಲೇಜಿನ ಪ್ರಾಚಾರ್ಯರು, ಆಡಳಿತ ಮಂಡಳಿ ವಿರುದ್ಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ರಾಜ್ಯಾದ್ಯಂತ ಇಂದು ಎಬಿವಿಪಿ ಹೋರಾಟ
ಬೆಂಗಳೂರು:
ಚಿಕ್ಕಮಗಳೂರಿನ ಶೃಂಗೇರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿ ಅಭಿಷೇಕ್‌ ಆತ್ಮಹತ್ಯೆ ಖಂಡಿಸಿ ಗುರುವಾರ ರಾಜ್ಯಾದ್ಯಂತ ಹೋರಾಟಕ್ಕೆ ಎಬಿವಿಪಿ ಕರೆ ನೀಡಿದೆ. 

ಇದು ದೇಶಭಕ್ತರ ಕಾರ್ಯಕ್ರಮ ನಡೆಸುವ ವಿದ್ಯಾರ್ಥಿಗಳಿಗೆ ಸರ್ಕಾರ ಕೊಟ್ಟ ಆತ್ಮಹತ್ಯೆ ಭಾಗ್ಯ ಎಂದು ಆರೋಪಿಸಿರುವ ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ರಾಜೇಶ್‌ ಗುರಾಣಿ, ಈ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈಚೆಗೆ ಶೃಂಗೇರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹುತಾತ್ಮ ಯೋಧರ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಇದಕ್ಕೆ ಎನ್‌ಎಸ್‌ಯುಐ ವಿದ್ಯಾರ್ಥಿಗಳು ಅಡ್ಡಿಪಡಿಸಿದ್ದರು. ಸರ್ಕಾರದ ಪ್ರಭಾವವನ್ನು ಬಳಸಿಕೊಂಡು ಪೊಲೀಸ್‌ ಠಾಣೆಯಲ್ಲಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕೇಸನ್ನು ಎನ್‌ಎಸ್‌ಯುಐ ಕಾರ್ಯಕರ್ತರು ದಾಖಲಿಸಿದ್ದರು. ಇದರಿಂದ ಮಾನಸಿಕ ಖನ್ನತೆಗೊಳಗಾದ ಅಭಿಷೇಕ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.