ಬಿಜೆಪಿಯಿಂದಲೇ ಬರ ಪರಿಹಾರ: ಬಿಎಸ್ವೈ
Team Udayavani, Jan 16, 2017, 3:45 AM IST
ಚಿತ್ರದುರ್ಗ: ಬರ ಪರಿಹಾರ ಕಾರ್ಯವನ್ನು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಬಿಜೆಪಿ ವತಿಯಿಂದಲೇ ಬರ ಪರಿಹಾರ ಕಾರ್ಯ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ಅನುದಾನ ಬಳಕೆ ಮಾಡಿ ಜಾನುವಾರುಗಳಿಗೆ ಮೇವು, ಮಧ್ಯಾಹ್ನ ಮತ್ತು ರಾತ್ರಿ ರೈತರಿಗೆ ಊಟ ಮತ್ತಿತರ ಸೌಲಭ್ಯ ನೀಡಲಾಗುವುದು. ಜ.21 ಮತ್ತು 22ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಕಲಬುರಗಿಯಲ್ಲಿ ನಡೆಯಲಿದೆ. ಅಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
2009ರಲ್ಲಿ ಅತಿವೃಷ್ಟಿ ಉಂಟಾದಾಗ ರಾಜ್ಯದ ಜನತೆ ಹೆಚ್ಚಿನ ಸಹಕಾರ ನೀಡಿದ್ದರು. ಅದೇ ರೀತಿ ಸಾರ್ವಜನಿಕರು, ಮಠ ಮಂದಿರಗಳು, ಶ್ರೀಮಂತರ ಸಹಕಾರ ಕೋರಿ ರೈತರಿಗೆ ನೆರವು ನೀಡಲಾಗುವುದು. ಸರ್ಕಾರದ ವತಿಯಿಂದಲೇ ರೈತರಿಗೆ ಗೋಶಾಲೆಗಳಲ್ಲಿ ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆ ಮಾಡಿದರೆ ಸಂತೋಷ. ಸರ್ಕಾರ ಮಾಡದಿದ್ದರೆ ನಾವು ಆ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.
ಈಶ್ವರಪ್ಪ ಭಾಗಿ
ಜ.21 ಮತ್ತು 22ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಕಲಬುರಗಿಯಲ್ಲಿ ನಡೆಯಲಿದೆ. ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸೇರಿದಂತೆ ಪಕ್ಷದ ಎಲ್ಲ ಮುಖಂಡರೂ ಭಾಗವಹಿಸಲಿದ್ದಾರೆ. ಈಶ್ವರಪ್ಪ ಒಂದು ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಹೇಳಿದರು.
ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿಗೆ 2ನೇ ಸ್ಥಾನ ದೊರೆತಿದೆ. ಆಡಳಿತಾರೂಢ ಕಾಂಗ್ರೆಸ್ ಮೊದಲ ಸ್ಥಾನದಲ್ಲಿದ್ದರೆ, ಜೆಡಿಎಸ್ ಮೂರನೇ ಸ್ಥಾನದಲ್ಲಿದೆ. ಬಿಜೆಪಿಗೆ ಹಣದ ಕೊರತೆಯಾಗಿದ್ದರಿಂದ ಸೀಟು ಕಡಿಮೆ ಬಂದಿವೆ. ಆದರೂ ಎಪಿಎಂಸಿ ಫಲಿತಾಂಶ ಸಮಾಧಾನ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ