ಬಿಜೆಪಿ ಕಚೇರಿಯಲ್ಲೇ ಈಶ್ವರಪ್ಪ -ಬಿಎಸ್ವೈ ಬೆಂಬಲಿಗರ ನಡುವೆ ಮಾರಾಮಾರಿ
Team Udayavani, Jan 17, 2017, 1:16 PM IST
ಶಿವಮೊಗ್ಗ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ನಡುವೆ ಉಂಟಾಗಿರುವ ಬಿಕ್ಕಟ್ಟು ಅವರಿಬ್ಬರ ತವರೂರು ಶಿವಮೊಗ್ಗಕ್ಕೂ ವ್ಯಾಪಿಸಿ ಬೆಂಬಲಿಗರ ನಡುವೆ ಮಾರಾಮಾರಿಯಾಗುವ ಮಟ್ಟಕ್ಕೆ ಬಂದು ತಲುಪಿದೆ.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಉಭಯ ನಾಯಕರ ಬೆಂಬಲಿಗರ ನಡುವೆ ತಳ್ಳಾಟ -ನೂಕಾಟ ನಡೆದು ಭಾರೀ ವಾಗ್ವಾದ ನಡೆದಿದೆ. ಘಟನೆಯ ಬಳಿಕ ಕಚೇರಿಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿಯಲ್ಲಿ ಉಭಯ ನಾಯಕರ ಪರ ವಿರೋಧದ ಎರಡು ಬಣಗಳು ಇರುವುದು ಅಕ್ಷರಶಃ ಜಗಜ್ಜಾಹೀರಗೊಂಡಿತ್ತು. ಪಕ್ಷದ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಮತ್ತು ಮಾಜಿ ಸಂಸದ ಹಾಗೂ ಬಿಜೆಪಿ ವಿಭಾಗೀಯ ಪ್ರಭಾರಿ ಆಯನೂರು ಮಂಜುನಾಥ್ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬಿಎಸ್ವೈ ಮತ್ತು ಈಶ್ವರಪ್ಪ ಪರ ಮತ್ತು ವಿರುದ್ಧವಾಗಿ ಜಿಲ್ಲಾಮಟ್ಟದ ನಾಯಕರ ನಡುವೆಯೇ ಪರಸ್ಪರ ವಾಗ್ವಾದ ನಡೆದಿತ್ತು.
ಈಶ್ವರಪ್ಪ ಬೆಂಬಲಿಗರು ಗೂಂಡಾಗಿರಿ ನಡೆಸಿದ್ದಾರೆ ಎಂದು ಬಿಎಸ್ವೈ ಬೆಂಬಲಿಗರು ಆರೋಪಿಸಿದ್ದು ಆ ಬಳಿಕ ಪರಸ್ಪರ ಜಗಳ ತಾರಕಕ್ಕೇರಿದೆ.
ಶಿವಮೊಗ್ಗದಲ್ಲಿ ಎರಡು ಬಣಗಳ ಮುಖಂಡರು ಇದೀಗ ಪರಸ್ಪರ ಆರೋಪ -ಪ್ರತ್ಯಾರೋಪ, ವಾಕ್ಸಮರಕ್ಕಿಳಿದಿದ್ದು, ಇದರಿಂದ ಜಿಲ್ಲಾ ಬಿಜೆಪಿ ಪಾಳಯದಲ್ಲಿ ದೊಡ್ಡ ಪ್ರಮಾಣದಲ್ಲಿಯೇ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್