ದಲಿತನನ್ನು ವಿವಸ್ತ್ರಗೊಳಿಸಿದ ಥಳಿಸಿದ ಸವರ್ಣೀಯರು:
Team Udayavani, Jan 19, 2017, 3:50 AM IST
ತುಮಕೂರು: ಸವರ್ಣೀಯ ಯುವತಿಯನ್ನು ಮಾತನಾಡಿಸಿದನೆಂಬ ಕಾರಣಕ್ಕೆ ದಲಿತ ಹುಡುಗನನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿದ ಘಟನೆ ಇತ್ತೀಚೆಗೆ ಗುಬ್ಬಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಹಲ್ಲೆಗೊಳಗಾದ ಯುವಕ ಅಭಿಷೇಕ್ ಪ್ರಸ್ತುತ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೇಂಟರ್ ಆಗಿರುವ ಈತನನ್ನು ಗುಬ್ಬಿ ಸಮೀಪದ ತೋಟದ ಮನೆಗೆ ಕರೆದುಕೊಂಡು ಹೋದ ಗುಂಪು, ಅಲ್ಲಿ ಆತನನ್ನು ವಿವಸ್ತ್ರಗೊಳಿಸಿ “ಗುಬ್ಬಿಯ ಹುಡುಗಿಯರನ್ನು ಕೆಣಕಿದರೆ ಇದೇ ಗತಿ’ ಎಂದು ಬರೆದ ಸ್ಲೇಟ್ ಕೈಗೆ ನೀಡಿ ಪೋಟೋ ತೆಗೆದಿದೆ. ಬಳಿಕ ಥಳಿಸಿ ನಾನಾ ರೀತಿಯಲ್ಲಿ ಅವಮಾನ ಮಾಡಿದ್ದು ವಾಟ್ಸಾಪ್ಗ್ಳಲ್ಲಿ ಹರಿಬಿಟ್ಟಿದೆ.
10 ಮಂದಿ ವಿರುದ್ಧ ಪ್ರಕರಣ:
ಯುವಕನ ತಂದೆ ಗುಬ್ಬಿ ಠಾಣೆಯಲ್ಲಿ ದೂರು ನೀಡಿದ್ದು, ಯುವತಿಯ ತಂದೆ ಸೇರಿ 10 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಪ್ರಕಾಶ್, ಮಾರುತಿ, ರಮೇಶ್ ಅವರನ್ನು ಈಗಾಗಲೇ ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಚಿದಾನಂದ ಸ್ವಾಮಿ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ. ದಲಿತ ಪರ ಸಂಘಟನೆಗಳು ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ.
ದಲಿತ ಯುವಕನ ಮೇಲೆ ಹಲ್ಲೆ ನಡೆದಿದೆ. ಯುವತಿಯನ್ನು ಸದಾ ಮಾತನಾಡಿಸುತ್ತಿದ್ದ ಎನ್ನುವ ಕಾರಣದಿಂದ ಈ ಘಟನೆ ನಡೆದಿದ್ದು, ಈ ಸಂಬಂಧವಾಗಿ ಪ್ರಕರಣ ದಾಖಲಾಗಿದೆ. ಪ್ರಮುಖ 3 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು.
-ಜಿ.ಬಿ. ಮಂಜುನಾಥ್, ಎಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency