ನಾಳೆಯಿಂದ ಧಾರವಾಡ ಸಾಹಿತ್ಯ ಸಂಭ್ರಮ


Team Udayavani, Jan 19, 2017, 12:43 PM IST

hub2.jpg

ಧಾರವಾಡ: ಜ.20ರಿಂದ ಮೂರು ದಿನಗಳ ಕಾಲ ಧಾರವಾಡ ಸಾಹಿತ್ಯ ಸಂಭ್ರಮ-2017 ನಡೆಯಲಿದೆ ಎಂದು ಸಾಹಿತ್ಯ ಸಂಭ್ರಮ ಟ್ರಸ್ಟ್‌ ಅಧ್ಯಕ್ಷ ಡಾ| ಗಿರಡ್ಡಿ ಗೋವಿಂದರಾಜ್‌ ಹೇಳಿದರು. ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಾಹಿತ್ಯದಲ್ಲಿ ಹೊಸ ಬಗೆಯ ಚಿಂತನೆ ಮತ್ತು ಸಾಹಿತ್ಯ ಚರ್ಚೆಗೆ ವಿನೂತನ ಆಯಾಮ ಒದಗಿಸುವುದಕ್ಕೆ ಆರಂಭವಾಗಿರುವ ಧಾರವಾಡ ಸಾಹಿತ್ಯ ಸಂಭ್ರಮ ಇದೀಗ 5ನೇ ವರ್ಷಕ್ಕೆ ಕಾಲಿಟ್ಟಿದ್ದು, 5ನೇ ಆವೃತ್ತಿ ಸಾಹಿತ್ಯ ಸಂಭ್ರಮ ಕವಿವಿಯ ಸುವರ್ಣ ಮಹೋತ್ಸವ ಭವನದಲ್ಲಿ ನಡೆಯಲಿದೆ ಎಂದರು. 

ಜ.20ರಂದು ಬೆಳಗ್ಗೆ 10:15ಕ್ಕೆ ನಾಡೋಜ ಡಾ|ಕೆ.ಎಸ್‌.ನಿಸಾರ್‌ ಅಹಮದ್‌ ಸಾಹಿತ್ಯ ಸಂಭ್ರಮ ಉದ್ಘಾಟಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕವಿವಿ ಕುಲಪತಿ ಡಾ|ಪ್ರಮೋದ ಗಾಯಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಚಿಂತಕ ಡಾ|ವಿವೇಕ ರೈ ಆಶಯ ಭಾಷಣ ಮಾಡಲಿದ್ದಾರೆ ಎಂದರು. 

ಅದಕ್ಕೂ ಮುನ್ನ ಅಂದರೆ ಬೆಳಗ್ಗೆ 9:30ಕ್ಕೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರು ಪುಸ್ತಕ ಮಳಿಗೆ ಉದ್ಘಾಟಿಸಲಿದ್ದು, 9:45ಕ್ಕೆ ಕವಿ ಎಚ್‌. ಎಸ್‌.ವೆಂಕಟೇಶಮೂರ್ತಿ ಅವರು ಪತ್ರಗಳ ಪ್ರದರ್ಶನ ಉದ್ಘಾಟಿಸಲಿದ್ದಾರೆ ಎಂದರು. 

2017ರ ಸಂಭ್ರಮದಲ್ಲಿ ಏನಿದೆ: ಪ್ರತಿ ಬಾರಿಯ ಸಾಹಿತ್ಯ ಸಂಭ್ರಮದಂತೆ ಈ ಬಾರಿಯೂ ವಿಭಿನ್ನ ವಿಚಾರಗಳ ಕುರಿತು ಒಟ್ಟು 23 ಗೋಷ್ಠಿಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಗಣ್ಯರು ಗೋಷ್ಠಿಗಳ ಮೂಲಕ ತಮ್ಮ ವಿಚಾರಗಳನ್ನು ನೇರವಾಗಿ ಹಂಚಿಕೊಳ್ಳಲಿದ್ದಾರೆ.

ವಿಶೇಷ ಉಪನ್ಯಾಸ, ನನಗೆ ಬಂದ ಸಾಹಿತಿಗಳ ಪತ್ರ, ಸಾಹಿತ್ಯ ಸದಾ ಜನಪರವೇ, ಎಡ ಬಲಗಳ ನಡುವೆ, ಚಿತ್ರಕಲಾಕೃತಿಗಳು ಏನು ಹೇಳುತ್ತವೆ, ರಾಷ್ಟ್ರೀಯ ಜಲ ನೀತಿ, ಭಕ್ತಿ ಪರಂಪರೆ ಮತ್ತು ಕನ್ನಡ ಕಾವ್ಯ, ಕನ್ನಡ ಕಾವ್ಯ ಕನ್ನಡಿ, ಸಾಹಿತಿಗಳೊಂದಿಗೆ ನಾವು, ಗೊಂದಲಿಗರ ಹಾಡು, ಲೇಖಕರೊಂದಿಗೆ ಸಂವಾದ, ಅಲ್ಲಮ ಚಲನಚಿತ್ರ ಪ್ರದರ್ಶನ ಮತ್ತು ಆ ಕುರಿತು ಚರ್ಚೆ, ಸಾಹಿತ್ಯ ಮತ್ತು ತತ್ವಜ್ಞಾನ, ಮತ್ತೆ ಮತ್ತೆ ಓದಬೇಕೆನ್ನಿಸುವ ಕವಿತೆಗಳು ಎನ್ನುವ ಗೋಷ್ಠಿಗಳು ನಡೆಯಲಿವೆ ಎಂದು ಡಾ| ಗಿರಡ್ಡಿ ಹೇಳಿದರು. 

ಗೋಷ್ಠಿಗಳ ಅಡಿಯಲ್ಲೇ ನಟ ರಮೇಶ ಅರವಿಂದ ಅವರೊಂದಿಗೆ ಸಂವಾದ ನಡೆಯಲಿದೆ. ಎಂದಿನಂತೆ ನಾಡೋಜ ಚೆನ್ನವೀರ ಕಣವಿ, ಡಾ| ಗಿರಡ್ಡಿ, ಸಂಶೋಧಕ ಷ.ಶೆಟ್ಟರ್‌, ಸುಮತೀಂದ್ರ ನಾಡಿಗ್‌, ಟಿ.ಎಸ್‌.ನಾಗಾಭರಣ, ವೀಣಾ ಬನ್ನಂಜೆ, ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ| ಗುರುಲಿಂಗ ಕಾಪಸೆ, ಕಮಲಾ ಹಂಪನಾ,

ಡಾ| ವೀರಣ್ಣ ರಾಜೂರ ಸೇರಿದಂತೆ ಅನೇಕ ಹಿರಿಯ ಸಾಹಿತಿಗಳು, ವಿದ್ವಾಂಸರು ಸಂಭ್ರಮದಲ್ಲಿ ಪಾಲ್ಗೊಂಡು ಅಭಿಪ್ರಾಯಗಳನ್ನು ವಿಭಿನ್ನ ವೈಚಾರಿಕ ನೆಲೆಯಲ್ಲಿ ಹಂಚಿಕೊಳ್ಳಲಿದ್ದಾರೆ ಎಂದರು. ನಾಡೋಜ ಡಾ| ಚೆನ್ನವೀರ ಕಣವಿ, ಹಾ.ವೆಂ. ಕಾಖಂಡಿಕಿ, ಡಾ| ಲೋಹಿತ್‌ ನಾಯ್ಕರ್‌ ಸೇರಿದಂತೆ ಸಾಹಿತಿಗಳು, ಗಣ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.