ಸರಕಾರಕ್ಕೆ ಸವಾಲಾದ ಕೆರೆ ಒತ್ತುವರಿ ತೆರವು


Team Udayavani, Jan 19, 2017, 3:50 AM IST

18hub-dwd1.jpg

ಧಾರವಾಡ: ಕೆರೆಗಳ ಅತಿಕ್ರಮಣ ತೆರವು ಕಾರ್ಯ ಸರ್ಕಾರಕ್ಕೆ ಕಠಿಣವಾಗಿ ಪರಿಣಮಿಸಿದಂತಿದೆ. ಸಣ್ಣ ನೀರಾವರಿ ಇಲಾಖೆ ಅತಿಕ್ರಮಣಕಾರರ ಕಪಿಮುಷ್ಟಿಯಿಂದ ಕೆರೆಯಂಗಳಗಳನ್ನು ಮರಳಿ ಪಡೆಯಲು ಹರಸಾಹಸ ಪಡುತ್ತಿದ್ದು, 500ಕ್ಕೂ ಅಧಿಕ ಕೆರೆಗಳ ಒತ್ತುವರಿ ತೆರವುಗೊಳಿಸಿ, ಭೂಮಿಯನ್ನು ಮರಳಿ ಪಡೆಯುವುದು ಸಕಾ ìರಕ್ಕೆ ಸಾಧ್ಯವಾಗಿಲ್ಲ.

2015-16ನೇ ಸಾಲಿನಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಕೆರೆ ಒತ್ತುವರಿ ತಡೆಗಟ್ಟಲು ಪೋಷಕ ಕಾಲುವೆ ಮತ್ತು ರಾಜ ಕಾಲುವೆಗಳ ದುರಸ್ತಿ ಮಾಡಲು ಸರ್ಕಾರ 2015ರ ನವೆಂಬರ್‌ನಲ್ಲಿ ಅನುಮೋದನೆ ನೀಡಿತ್ತು. ಇದರನ್ವಯ ರಾಜ್ಯದ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿರುವ 3677 ಕೆರೆಗಳ ಪೈಕಿ ಒತ್ತುವರಿಯಾದ 3300ಕ್ಕೂ ಹೆಚ್ಚು ಕೆರೆಗಳನ್ನು ಮರಳಿ ಸ್ವಾಧೀನ ಪಡಿಸಿಕೊಂಡು ಆ ಭೂಮಿಗೆ ಟ್ರೆಂಚ್‌ ಹೊಡೆದು ಕೆರೆಯ ಅಂಚುಗಳನ್ನು ಗುರುತಿಸಬೇಕಾಗಿತ್ತು.

ಆರಂಭದ ದಿನಗಳಲ್ಲಿ ಆಯಾ ವಿಭಾಗ ಮತ್ತು ಜಿಲ್ಲಾವಾರು ಅಧಿಕಾರಿಗಳು ಸಕ್ರಿಯವಾಗಿ ಕೆರೆಯಂಗಳವನ್ನು  ಮರಳಿ ವಶಕ್ಕೆ ಪಡೆದುಕೊಂಡರು. ನಂತರ ಕೆರೆ ಒತ್ತುವರಿ ತೆರವು ನಡೆದಿದ್ದು ಕಡಿಮೆ. ಒತ್ತುವರಿ ತೆರವಾದ ಕೆರೆಗಳು ಮತ್ತೆ ಅತಿಕ್ರಮಣಕ್ಕೆ ಒಳಗಾಗುತ್ತಿದೆ.

ಎಷ್ಟು ಕೆರೆ ಒತ್ತುವರಿ ತೆರವು?:
ರಾಜ್ಯದಲ್ಲಿ ಸಣ್ಣ ನೀರಾವರಿಗೆ ಬಳಕೆಯಾಗುವ 3677 ಕೆರೆಗಳಿದ್ದು, ಈ ಪೈಕಿ ಶೇ. 67ರಷ್ಟು ಕೆರೆಗಳ ಕೆಲವಷ್ಟು ಭಾಗ ಅತಿಕ್ರಮಣಕ್ಕೆ ಒಳಗಾಗಿತ್ತು. ಕೆಲವಷ್ಟು ಕೆರೆಗಳು 3 ಗುಂಟೆಯಿಂದ 10-15 ಎಕರೆ ವರೆಗೂ ಒತ್ತುವರಿಯಾಗಿವೆ. ಬೆಂಗಳೂರು ಸಣ್ಣ ನೀರಾವರಿ ವೃತ್ತದ ವ್ಯಾಪ್ತಿಯಲ್ಲಿ ಒಟ್ಟು 1613 ಕೆರೆಗಳಿದ್ದು, ಈ ಪೈಕಿ 692 ಕೆರೆಗಳು ಅತಿಕ್ರಮಣಕ್ಕೆ ಒಳಗಾಗಿವೆ.

ಮೈಸೂರು ಸಣ್ಣ ನೀರಾವರಿ ವೃತ್ತದ ವ್ಯಾಪ್ತಿಯಲ್ಲಿ ಒಟ್ಟು 2047 ಸಣ್ಣ ನೀರಾವರಿಗೆ ಬಳಕೆಯಾಗುವ ಕೆರೆಗಳಿದ್ದು, ಈ ಪೈಕಿ ಒಟ್ಟು 975 ಕೆರೆಗಳು ಒತ್ತುವರಿಯಾಗಿವೆ. ಈ ಪೈಕಿ 912 ಕೆರೆಗಳ ಒತ್ತುವರಿ ತೆರವುಗೊಳಿಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಇನ್ನು 63 ಕೆರೆಗಳ ವ್ಯಾಪ್ತಿಯ 300 ಎಕರೆಗೂ ಹೆಚ್ಚಿನ ಭೂಮಿ ನುಂಗಣ್ಣರ ಪಾಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 111 ಕೆರೆಗಳು ಒತ್ತುವರಿಯಾಗಿದ್ದರೆ, ಹಾವೇರಿ ಜಿಲ್ಲೆಯಲ್ಲಿ 259, ಬಾಗಲಕೋಟೆ 62, ಉತ್ತರ ಕನ್ನಡ 90, ವಿಜಯಪುರ 147 ಹಾಗೂ ಬೆಳಗಾವಿ ಜಿಲ್ಲೆಯ 270 ಕೆರೆಗಳು ಒತ್ತುವರಿಯಾಗಿವೆ. ಈ ಜಿಲ್ಲೆಗಳಲ್ಲಿ 60 ಎಕರೆ ಮಾತ್ರ ಅತಿಕ್ರಮಣಕ್ಕೆ ಒಳಗಾಗಿದ್ದು, ಅದನ್ನೂ ತೆರವುಗೊಳಿಸಿದ್ದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಬೆಳಗಾವಿ ವಿಭಾಗದಲ್ಲಿ 560 ಎಕರೆಗೂ ಹೆಚ್ಚು ಸಣ್ಣ ನೀರಾವರಿ ಕೆರೆಗಳ ಭೂಮಿ ಅತಿಕ್ರಮಣಕ್ಕೆ ಒಳಗಾಗಿದೆ ಎನ್ನಲಾಗಿದೆ.

ಕಲಬುರ್ಗಿ ವಿಭಾಗದ ಸಣ್ಣ ನೀರಾವರಿ ಕೆರೆಗಳ ಸಂಖ್ಯೆ 768 ಆಗಿದ್ದು, ಈ ಪೈಕಿ 413 ಎಕರೆ ಕೆರೆಯ ಭೂಮಿ ನುಂಗಣ್ಣರ ಪಾಲಾಗಿದೆ. ಇದನ್ನು  ಕೆರೆಯಂಗಳಕ್ಕೆ ಮರಳಿ ಸೇರಿಸಿಕೊಂಡಿದ್ದಾಗಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದು, ವಾಸ್ತವವಾಗಿ ವಶಕ್ಕೆ ಪಡೆದ ಭೂಮಿಯಲ್ಲಿ ಮತ್ತೆ 200 ಎಕರೆ ಭೂಮಿ ಅತಿಕ್ರಮಣಕ್ಕೆ ಒಳಗಾಗಿದೆ.

ಸರ್ಕಾರದ ಕಾಗದ ಪತ್ರಗಳಲ್ಲಿ ಮಾತ್ರ ಕೆರೆ ಒತ್ತುವರಿ ತೆರವುಗೊಂಡಿದೆ. ಸ್ಥಳಕ್ಕೆ ತೆರಳಿ, ಕೆರೆಗಳ ಅಂಚು ಗುರುತಿಸಿ, ಗಟ್ಟಿಯಾದ ಕಲ್ಲು ಅಥವಾ ಟ್ರೆಂಚ್‌ ಹೊಡೆಸಿ, ಕೆರೆಯಂಗಳ ಅನ್ಯರ ಪಾಲಾಗದಂತೆ ನೋಡಿಕೊಳ್ಳುವ ಕೆಲಸ ಇಲಾಖೆಯಿಂದ ಇನ್ನಷ್ಟು ಚುರುಕಾಗಿ ಆಗಬೇಕಾಗಿದೆ ಎನ್ನುತ್ತಾರೆ ನೀರಾವರಿ ಮತ್ತು ಪರಿಸರ ತಜ್ಞರು.

ಕೆರೆಗಳ ಅತಿಕ್ರಮಣ ತೆರವು ಕಾರ್ಯವನ್ನು ಸರ್ಕಾರ ಮಾಡುತ್ತಿದ್ದು, 1ನೇ ಹಂತದಲ್ಲಿ ನಿಗದಿಪಡಿಸಿದ ಕೆರೆಗಳ ಅತಿಕ್ರಮಣ ತೆರವುಗೊಳಿಸಿದ್ದೇವೆ. ಮರು ಅತಿಕ್ರಮಣವಾಗಿದ್ದರೆ ಅಥವಾ ಇನ್ನೂ ತೆರವು ಮಾಡುವುದು ಉಳಿದಿದ್ದರೆ, ಅಂತಹ ಕೆರೆಗಳ ಅತಿಕ್ರಮಣಗೊಂಡ ಭೂಮಿಯನ್ನು ಮರಳಿ ಕೆರೆಯಂಗಳಕ್ಕೆ ಜೋಡಿಸುತ್ತೇವೆ.
-ಟಿ.ಬಿ.ಜಯಚಂದ್ರ, ಸಣ್ಣ ನೀರಾವರಿ ಸಚಿವ

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.