ಅರ್ಚಕರಿಗೆ 7500 ರೂ. ವೇತನ ಸಾಧ್ಯವಿಲ್ಲ


Team Udayavani, Jan 19, 2017, 3:50 AM IST

170118kpn83.jpg

ಬೆಂಗಳೂರು: ಅರ್ಚಕರಿಗೆ ಅವರ ಬೇಡಿಕೆಯಂತೆ ಮಾಸಿಕ 7,500 ರೂ.ವೇತನ ನೀಡಲು ಸಾಧ್ಯವಿಲ್ಲ. ಆದರೆ, ಅವರಿಗೆ
ವಾರ್ಷಿಕ ನೀಡುತ್ತಿರುವ ತಸ್ತಿಕ್‌ ಹೆಚ್ಚಳ, ಅರ್ಚಕರ ವರ್ಗಾವಣೆ ಸೇರಿ ಒಕ್ಕೂಟದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಲಾಗುವುದು
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ನಗರದಲ್ಲಿ ಬುಧವಾರ ಆಯೋಜಿಸಿದ್ದ ಅರ್ಚಕರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಅರ್ಚಕರಿಗೆ ಅವರ ಬೇಡಿಕೆಯಂತೆ ಮಾಸಿಕ 7,500 ರೂ. ವೇತನ ನೀಡಲು ಸಾಧ್ಯವಿಲ್ಲ. ಆದರೆ, ಅವರಿಗೆ ವಾರ್ಷಿಕ ನೀಡುತ್ತಿರುವ ತಸ್ತಿಕ್‌ ಹೆಚ್ಚಳ, ಅರ್ಚಕರ ವರ್ಗಾವಣೆ ಸೇರಿ ಒಕ್ಕೂಟದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

ಕೆಲವು ಕಡೆ ದೇವಸ್ಥಾನಗಳಿಗೆ ಕೆಳ ವರ್ಗದವರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ದೇವಾಲಯಗಳಿಗೆ ಪ್ರವೇಶ ನಿಷಿದಟಛಿ ಎಂಬಿತ್ಯಾದಿ ಅನಿಷ್ಠ ಪದಟಛಿತಿಗಳಿವೆ. ಇದನ್ನು ಹೋಗಲಾಡಿಸಲು ಅರ್ಚಕರು ಕೈ ಜೋಡಿಸಬೇಕು. ಎಲ್ಲವನ್ನೂ ಮಾನವೀಯ ನೆಲಗಟ್ಟಿನ ಮೇಲೆ ಯೋಚಿಸಬೇಕು. ಆ ಮೂಲಕ,ಸಮಾಜದಲ್ಲಿ ಮೇಲ್ವರ್ಗ, ಕೆಳವರ್ಗ ಎಂಬ ತಾರತಮ್ಯ ದೂರವಾಗಿ ಸಮಾನತೆ ಬರಬೇಕು
ಎಂದು ಅಭಿಪ್ರಾಯಪಟ್ಟರು.

ದೇವರು ಮತ್ತು ಭಕ್ತರ ನಡುವೆ ಅರ್ಚಕರು ರಾಯಭಾರಿಗಳಂತೆ ಕೆಲಸ ಮಾಡುತ್ತಾರೆ. ದೇವಸ್ಥಾನಕ್ಕೆ ಬರುವ ನೊಂದವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಅರ್ಚಕರು ಮಾಡಬೇಕು. ಅರ್ಚಕರ ಮಕ್ಕಳು ಅರ್ಚಕರೇ ಆಗಬೇಕಿಲ್ಲ. ಅವರು ಕೂಡ ವಿದ್ಯಾವಂತರಾಗಿ ಉನ್ನತ ಹುದ್ದೆ ಪಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ನಾನು ನಾಸ್ತಿಕನಲ್ಲ: “ನಾನೊಬ್ಬ ನಾಸ್ತಿಕ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಎಲ್ಲರಂತೆ, ಚಾಮುಂಡಿ ಬೆಟ್ಟಕ್ಕೂ ಹೋಗುತ್ತೇನೆ, ತಿರುಪತಿಗೂ ಹೋಗುತ್ತೇನೆ. ಆದರೂ ನನ್ನನ್ನು ನಾಸ್ತಿಕನಂತೆ ಬಿಂಬಿಸಲಾಗುತ್ತಿದೆ. ನಾಸ್ತಿಕ ಎಂದ ಮಾತ್ರಕ್ಕೆ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆಯುವುದಿಲ್ಲ ಅಥವಾ ಜಾತ್ಯತೀತ ಎಂದ ಮಾತ್ರಕ್ಕೆ ಧರ್ಮವನ್ನೇ ಬಿಟ್ಟು ಬಿಡಬೇಕು ಎಂದಲ್ಲ. ಜಾತಿ-ಧರ್ಮದ ಬಗ್ಗೆ ಸಹಿಷ್ಣುತಾಭಾವ ಇರಬೇಕು’ ಎಂದರು.

ತಸ್ತಿಕ್‌ 30 ಸಾವಿರ ರೂ.ಗೆ ಹೆಚ್ಚಳ: ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಅರ್ಚಕರಿಗೆ ವಾರ್ಷಿಕ ನೀಡುವ
24,000 ರೂ.ತಸ್ತಿಕ್‌ನ್ನು 30 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಜತೆಗೆ, ಅರ್ಚಕರಿಗೆ ಜೀವ ವಿಮೆ ಜಾರಿಗೊಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಅಲ್ಲದೆ, “ಸಿ’ ವರ್ಗದ ಅರ್ಚಕರ ಸಂಭಾವನೆ ಹೆಚ್ಚಳ ಸೇರಿ ಒಕ್ಕೂಟದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಲಾಗುವುದೆಂದು ಭರವಸೆ ನೀಡಿದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.