ಪಂಚರಾಜ್ಯ ಚುನಾವಣೆಗೆ ಮೈಸೂರಿನ ಶಾಯಿ


Team Udayavani, Jan 19, 2017, 3:50 AM IST

election-500.jpg

ಮೈಸೂರು: ದೇಶದ ಅತ್ಯಂತ ದೊಡ್ಡ ರಾಜ್ಯ ಉತ್ತರ ಪ್ರದೇಶ ಸೇರಿ ಐದು ರಾಜ್ಯಗಳ ವಿಧಾನಸಭೆಗೆ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿರುವ ಚುನಾವಣೆಗೆ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ (ಮೈಲ್ಯಾಕ್‌) 4.18 ಲಕ್ಷ ಬಾಟಲಿ
ಅಳಿಸಲಾಗದ ಶಾಯಿ ಪೂರೈಸುತ್ತಿದೆ.

ಕೇಂದ್ರ ಚುನಾವಣೆ ಆಯೋಗ 3 ತಿಂಗಳ ಹಿಂದೆಯೇ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಗೆ ಅಳಿಸಲಾಗದ ಶಾಯಿ ಪೂರೈಸಲು ಬೇಡಿಕೆ ಸಲ್ಲಿಸಿದೆ. ಆಗಿನಿಂದಲೇ ಮೈಲ್ಯಾಕ್‌ ಆಡಳಿತವರ್ಗ, ತನ್ನ 50 ಮಂದಿ ಕಾಯಂ ನೌಕರರ ಜತೆಗೆ,
ಹೊರ ಗುತ್ತಿಗೆಯಡಿ 100 ಜನ ಕಾರ್ಮಿಕರನ್ನು ನೇಮಕ ಮಾಡಿಕೊಂಡು ನಿತ್ಯ ಎರಡು ಪಾಳಿಗಳಲ್ಲಿ ಕೆಲಸ ಮಾಡಿಸುತ್ತಿದೆ. ಭಾನುವಾರದ ರಜೆ ದಿನ ಕೂಡ ಕೆಲಸ ಮಾಡಿಸಲಾಗುತ್ತಿದೆ.

ನೋಟು ಬದಲಾವಣೆ ವೇಳೆಯೂ ಪೂರೈಸಿತ್ತು: 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯದ ಘೋಷಣೆ ಮಾಡಿದ ನಂತರ ನೋಟು ಬದಲಾವಣೆಯಲ್ಲಿ ಸಾಕಷ್ಟು ಗೊಂದಲಗಳಾಗಿದ್ದವು. ಒಬ್ಬನೇ ವ್ಯಕ್ತಿ ಬೇರೆ ಬೇರೆಗುರುತಿನ ಚೀಟಿಗಳನ್ನು ಹಾಜರುಪಡಿಸಿ ನಾಲ್ಕೈದು ಬಾರಿ ಹಣ ಬದಲಾಯಿಸಿಕೊಳ್ಳುವ ಪ್ರಯತ್ನಗಳು ಕಂಡು ಬಂದಿದ್ದವು. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಅಳಿಸಲಾಗದ ಶಾಯಿ ಹಚ್ಚುವ ತೀರ್ಮಾನ ಕೈಗೊಂಡು ಮೈಲಾಕ್‌ ಕಾರ್ಖಾನೆಗೆ ಶಾಯಿ ಪೂರೈಸುವಂತೆ ತಿಳಿಸಿತ್ತು. ಆಗ ಮೈಲಾಕ್‌ ಮೊಟ್ಟ ಮೊದಲ ಬಾರಿಗೆ ಚುನಾವಣೇತರ ಉದ್ದೇಶಕ್ಕೆ 3 ಲಕ್ಷ ಬಾಟಲಿಗಳನ್ನು ಪೂರೈಸಿತು. ಇದಾಗಿ ಒಂದು ತಿಂಗಳೊಳಗೆ ಚುನಾವಣೆ ನಿಮಿತ್ತ 4.18 ಲಕ್ಷ ಬಾಟಲಿ ಶಾಯಿ ಪೂರೈಸುವ ಜವಾಬ್ದಾರಿ ಹೊತ್ತು ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ.

ಬೇಡಿಕೆ ಎಷ್ಟು?: ಪಂಚ ರಾಜ್ಯಗಳ ಚುನಾವಣೆಗೆ ಒಟ್ಟು 4,18,300 (10ಎಂ.ಎಲ್‌.ಸಾಮರ್ಥ್ಯದ) ಬಾಟಲಿ ಅಳಿಸಲಾಗದ ಶಾಯಿ ಪೂರೈಕೆಗೆ ಕೇಂದ್ರ ಚುನಾವಣಾ ಆಯೋಗದಿಂದ ಬೇಡಿಕೆ ಬಂದಿದೆ.

ಈ ಪೈಕಿ ಫೆ.4ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿರುವ ಗೋವಾ ರಾಜ್ಯಕ್ಕೆ 4 ಸಾವಿರ ಬಾಟಲಿ, ಪಂಜಾಬ್‌ಗ 52 ಸಾವಿರ ಬಾಟಲಿ ಹಾಗೂ ಮಾ.4 ಮತ್ತು 8ರಂದು 2 ಹಂತಗಳಲ್ಲಿ ಮತದಾನ ನಡೆಯಲಿರುವ ಮಣಿಪುರ ರಾಜ್ಯಕ್ಕೆ 7,300 ಬಾಟಲಿ ಶಾಯಿಯನ್ನು ಈಗಾಗಲೇ ಪೂರೈಸಲಾಗಿದೆ.

ಫೆ.11ರಿಂದ ಮಾ.8ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿರುವ ಉತ್ತರ ಪ್ರದೇಶ ರಾಜ್ಯಕ್ಕೆ 3.30 ಲಕ್ಷ ಬಾಟಲಿ ಶಾಯಿ ಪೂರೈಸಬೇಕಿದೆ. ಈ ಪೈಕಿ ಸೋಮವಾರ (ಜ.16) ಮೊದಲ ಹಂತದಲ್ಲಿ 1 ಲಕ್ಷ ಬಾಟಲಿ ಶಾಯಿ ಕಳುಹಿಸಿದೆ. ಇನ್ನುಳಿದ 2.30 ಲಕ್ಷ ಬಾಟಲಿ ಶಾಯಿಯನ್ನು ಜ.23, 24ರಂದು ಕಳುಹಿಸಲಿದ್ದು, ಫೆ.15ರಂದು ಮತದಾನ ನಡೆಯಲಿರುವ ಉತ್ತರಾಖಂಡ ರಾಜ್ಯಕ್ಕೆ 25 ಸಾವಿರ ಬಾಟಲಿ ಶಾಯಿಗೆ ಬೇಡಿಕೆ ಇದ್ದು, ಈ ಮಾಸಾಂತ್ಯದ ವೇಳೆಗೆ ಪೂರೈಸಲಾಗುವುದು.

ದರವೆಷ್ಟು?
10 ಎಂ.ಎಲ್‌. ಬಾಟಲಿ ಶಾಯಿಗೆ 142ರೂ. ದರ ನಿಗದಿಪಡಿಸಲಾಗಿದ್ದು, ಒಂದು ಬಾಟಲಿಯಿಂದ 750 ಜನರ ಬೆರಳಿಗೆ ಶಾಯಿ ಹಚ್ಚಬಹುದು ಎಂದು ಮೈಲ್ಯಾಕ್‌ನ ಪ್ರಧಾನ ವ್ಯವಸ್ಥಾಪಕ ಹರಕುಮಾರ್‌ ತಿಳಿಸಿದ್ದಾರೆ.

ಯಾವುದೇ ಚುನಾವಣೆ ಸಂದರ್ಭದಲ್ಲೂ ನಿಗದಿತ ಸಮಯದೊಳಗೆ ಬೇಡಿಕೆಗೆ ತಕ್ಕಂತೆ ಅಳಿಸಲಾಗದ ಶಾಯಿ ಪೂರೈಸುವ ಮೂಲಕ ಮೈಲ್ಯಾಕ್‌ ವಿಶ್ವಾಸಾರ್ಹತೆ ಉಳಿಸಿಕೊಂಡು ಬಂದಿದೆ.ಪಂಚ ರಾಜ್ಯಗಳ ಚುನಾವಣೆಗೂ ನಿಗದಿತ ಸಮಯಕ್ಕೆ ಶಾಯಿ ಪೂರೈಸಿ ವಿಶ್ವಾಸಾರ್ಹತೆ ಉಳಿಸಿಕೊಳ್ಳಲಾಗುವುದು.
– ಎಚ್‌.ಎ.ವೆಂಕಟೇಶ್‌,ಅಧ್ಯಕ್ಷರು, ಮೈಲ್ಯಾಕ್‌

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.