ಬಿಎಸ್‌ವೈ ಸಭೆಗೆ ಗೈರು: ಅತೃಪ್ತರ ನಿರ್ಧಾರ


Team Udayavani, Jan 19, 2017, 3:50 AM IST

170118kpn76.jpg

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಧೋರಣೆ ವಿರುದ್ಧ ರಣಕಹಳೆ ಮೊಳಗಿಸಿರುವ ಅತೃಪ್ತ ಬಿಜೆಪಿ ಮುಖಂಡರು, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಬುಧವಾರ ಮಾಜಿ ಸಚಿವ ಸೊಗಡು ಎಸ್‌. ಶಿವಣ್ಣ ಅವರ ನಿವಾಸದಲ್ಲಿ ಸಭೆ ನಡೆಸಿದ್ದು, ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಮುಖಂಡರು ಯಡಿಯೂರಪ್ಪ ಧೋರಣೆ ಖಂಡಿಸಿ, ಜ.19ರಂದು ಯಡಿಯೂರಪ್ಪ ಕರೆದಿರುವ ಸಭೆಗೆ ಭಾಗವಹಿಸದಿರಲು ನಿರ್ಧರಿಸಿದರು.

ನಗರದ ಊರುಕೆರೆಯಲ್ಲಿರುವ ಸೊಗಡು ನಿವಾಸದಲ್ಲಿ ಭಾರತ್‌ ಮಾತಾ ಪೂಜಾ ಕಾರ್ಯಕ್ರಮದ ಹೆಸರಿನಲ್ಲಿ ಅತೃಪ್ತ ಮುಖಂಡರೆಲ್ಲ ಸೇರಿದ್ದರು. ಈಶ್ವರಪ್ಪ ನೇತೃತ್ವದಲ್ಲಿ  ಮಾಜಿ ಶಾಸಕರು, ಸಂಸದರು, ಎಂಎಲ್‌ಸಿಗಳು ಸೇರಿ 24 ಬಿಜೆಪಿ ಅತೃಪ್ತ ಪ್ರಮುಖ ಮುಖಂಡರು ಸಭೆ ಸೇರಿ, ಸುಮಾರು 2 ಗಂಟೆಗಳ ಕಾಲ ಮುಂದಿನ ರಾಜಕೀಯ ನಡೆ ಕುರಿತು ಚರ್ಚೆ ನಡೆಸಿದರು. ಜತೆಗೆ ರಾಜ್ಯ, ಜಿಲ್ಲಾ ಮಟ್ಟದ ನೂರಾರು ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದರು.

2 ತಾಸು ಚರ್ಚೆ:
ಸೊಗಡು ನಿವಾಸದಲ್ಲಿ ಸೇರಿದ ಮುಖಂಡರ ಮೂಲ ಉದ್ದೇಶ ಬಿಎಸ್‌ವೈ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದೇ ಆಗಿತ್ತು. ಹೀಗಾಗಿ ಸುದೀರ್ಘ‌ ಚರ್ಚೆ ನಡೆಸಿದ ಮುಖಂಡರು ಯಡಿಯೂರಪ್ಪವಿರುದ್ಧ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದ್ದು, ರಾಜ್ಯಾಧ್ಯಕ್ಷರಾದ ಮೇಲೆ ಮೂಲ ಬಿಜೆಪಿಗರನ್ನು ದೂರವಿಟ್ಟಿರುವುದಕ್ಕೆ ಪಕ್ಷದ ಮುಖಂಡರು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

ಪಕ್ಷಕ್ಕಾಗಿ 20-30 ವರ್ಷಗಳಿಂದ ಶ್ರಮಿಸಿದ್ದೇವೆ. ಆದರೆ ಈಗ ನಮ್ಮನ್ನು ಕಡೆಗಣಿಸಿಲಾಗುತ್ತಿದೆ ಒಂದು ಕೋಟಿಗೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ ಕಾರ್ಯಕರ್ತರನ್ನು ಮೂಲೆಗುಂಪು ಮಾಡಿದ್ದಾರೆ. ಪಕ್ಷದಲ್ಲಿ ಕೆಲವರ ಮಾತೇ ವೇದ ವಾಕ್ಯವಾಗಿದೆ. ಹೀಗಿರುವಾಗ ಪಕ್ಷ ಸಂಘಟನೆ ಮಾಡುವುದು ಹೇಗೆ ಎಂದು ಹಲವರು ಈಶ್ವರಪ್ಪ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿದರು ಎಂದು ತಿಳಿದು ಬಂದಿದೆ.

ಹೈಕಮಾಂಡ್‌ ವಿರೋಧವಿಲ್ಲ:
ಸಭೆಯಲ್ಲಿ ಮಾತನಾಡಿದ ಕೆ.ಎಸ್‌.ಈಶ್ವರಪ್ಪ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಮ್ಮ ಸಂಘಟಿತ ಹೋರಾಟವನ್ನು ಹೀಗೆ ಮುಂದುವರಿಸೋಣ. ರಾಯಣ್ಣ ಬಿಗ್ರೇಡ್‌ ಸಂಘಟನೆ ಮಾಡೋಣ. ಇದಕ್ಕೆ ಹೈಕಮಾಂಡ್‌ ಯಾವುದೇ ವಿರೋಧವಿಲ್ಲ ಎಂದು ಸಭೆಯಲ್ಲಿದ್ದವರಿಗೆ ಧೈರ್ಯ ತುಂಬುವ ಮಾತನಾಡಿದರು ಎಂಬುದಾಗಿ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ತಿಳಿಸಿದ್ದಾರೆ.

ಸಭೆ ಪ್ರಮುಖ ನಿರ್ಣಯಗಳು:
ಜ.19ರಂದು ಯಡಿಯೂರಪ್ಪ ಕರೆದ ಸಭೆಯಲ್ಲಿ ಭಾಗಿಯಾಗದೆ ಇರುವುದು ಜ.26ರಂದು ಕೂಡಲಸಂಗಮದಲ್ಲಿ ಸಂಗೊಳ್ಳಿ ರಾಯಣ್ಣ ಬಿಗ್ರೇಡ್‌ನಿಂದ ವ್ಯವಸ್ಥಿತ ಸಮಾವೇಶ ಬಿಎಸ್‌ವೈ ವಿರುದ್ಧ ಸಂಘಟಿತ ಹೋರಾಟ ಮುಂದುವರಿಸುವಿಕೆ

ಯಾರೆಲ್ಲ ಇದ್ದರು?:
ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲಕುಮಾರ್‌ ಸುರಾನ, ಮಾಜಿ ಶಾಸಕರಾದ ಎಂ. ನಾರಾಯಣಸ್ವಾಮಿ, ಗುರುಸ್ವಾಮಿ, ನಂಜುಂಡಸ್ವಾಮಿ, ಕೆ.ಜಿ. ಕುಮಾರಸ್ವಾಮಿ, ಶ್ರೀಕಾಂತ್‌ ಕುಲಕರ್ಣಿ, ಬಸವರಾಜ ನಾಯಕ, ನೇಮಿರಾಜನಾಯಕ, ಸೋಮಲಿಂಗ, ರಾಯಚೂರು ಮಾಜಿ ಸಂಸದ ವಿರೂಪಾಕ್ಷಪ್ಪ, ಮಾಜಿ ಎಂಎಲ್‌ಸಿಗಳಾದ ಸಿದ್ದರಾಜು, ರಮೇಶ್‌, ಸೋಮಣ್ಣಬೇವಿನಮರದ, ಭೋಜರಾಜ್‌ ಖರೋಟಿ, ನಾರಾಯಣ. ಸಾ.ಬಾಂಡೆY, ಶಿವಮೊಗ್ಗ ಎಂಎಲ್‌ಸಿ ಭಾನುಪ್ರಕಾಶ್‌, ಬೆಂಗಳೂರಿನ ಮಾಜಿ ಮೇಯರ್‌ ವೆಂಕಟೇಶಮೂರ್ತಿ ಮೊದಲಾದ ಪ್ರಮುಖ ಮುಖಂಡರು ಸಭೆಯಲ್ಲಿದ್ದರು. ಇದಲ್ಲದೇ ಜಿಲ್ಲಾವಾರು ಬಿಜೆಪಿ ಅನೇಕ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಬಿಎಸ್‌ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.