ಕೃಷ್ಣೆಯ ಹಣ ಕಾವೇರಿಗೆ ಹಸ್ತಾಂತರಿಸಲು ಹುನ್ನಾರ!


Team Udayavani, Jan 19, 2017, 3:50 AM IST

ukp.jpg

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಪುನರ್ವಸತಿ ಕೇಂದ್ರಗಳಿಗೆ ಮೂಲಸೌಲಭ್ಯ ಕಲ್ಪಿಸಲು ನೀಡಿರುವ 191.5 ಕೋಟಿ ರೂ. ಅನುದಾನವನ್ನು ಕಾವೇರಿ ನೀರಾವರಿ ನಿಗಮಕ್ಕೆ ಹಸ್ತಾಂತರಿಸಲು ಹುನ್ನಾರ ನಡೆದಿದೆ. ಈ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಯುಕೆಪಿ ವ್ಯಾಪ್ತಿಯ ಸಂತ್ರಸ್ತರು, ಸಂಘಟನೆಗಳು ಆಕ್ರೋಶಗೊಂಡಿದ್ದು, ಜನಪ್ರತಿನಿಧಿಗಳು ಮಾತ್ರ ಗಾಢನಿದ್ರೆಗೆ ಜಾರಿದಂತಿದೆ.

ಪುನರ್ವಸತಿಗೆ ಅನುದಾನ:
ಯುಕೆಪಿ 1 ಮತ್ತು 2ನೇ ಹಂತದಲ್ಲಿ ಒಟ್ಟು 198 ಗ್ರಾಮಗಳು ಮುಳುಗಡೆಯಾಗಿದ್ದು, ಅವುಗಳಿಗಾಗಿ 136 ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ. ಅದರಲ್ಲಿ 31 ಕೇಂದ್ರಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ 105 ಯುಕೆಪಿ ಪುನರ್ವಸತಿ ಕೇಂದ್ರಗಳು ಹಾಗೂ 1 ಕಲಬುರಗಿಯ ಸನ್ನತಿ ಸೇತುವೆ ಸಹಿತ ಬ್ಯಾರೇಜ್‌ ನಿರ್ಮಾಣದಿಂದ ಮುಳುಗಡೆಗೊಂಡ ಜನವಸತಿಗೆ ಕಲ್ಪಿಸಿದ ಪುನರ್ವಸತಿ ಸೇರಿ ಒಟ್ಟು 106 ಪುನರ್ವಸತಿ ಕೇಂದ್ರಗಳು 69 ಗ್ರಾಪಂಗಳಿಗೆ ಹಸ್ತಾಂತರಿಸಬೇಕಿದೆ. ಇವುಗಳಿಗೆ ಮೂಲ ಸೌಲಭ್ಯ ಕಲ್ಪಿಸಲು 2016ರ ಅಕ್ಟೋಬರ್‌ನಲ್ಲಿ 191.05 ಕೋಟಿ ರೂ.ಅನುದಾನಕ್ಕೆ ಸರ್ಕಾರ ಮಂಜೂರಾತಿ ನೀಡಿದೆ.

ನಿರ್ಧಾರಕ್ಕೆ ಕಾರಣವೇನು?:
ಪುನರ್ವಸತಿ ಕೇಂದ್ರಗಳ ಮೂಲಸೌಲಭ್ಯಕ್ಕೆ ನೀಡಿರುವ ಅನುದಾನ ಬಳಕೆಗೆ ಮಾರ್ಚ್‌ 31 ಕೊನೇ ದಿನ. ಅಷ್ಟರೊಳಗೆ  ಅನುದಾನ ಬಳಕೆ ಮಾಡುತ್ತೀರಾ? ಕ್ರಿಯಾ ಯೋಜನೆ ಸಿದ್ಧಗೊಂಡಿವೆಯೇ? ಅನುಮೋದನೆ ಸಿಕ್ಕಿದೆಯೇ?  5 ತಿಂಗಳು ಕಳೆದರೂ ಬಳಕೆ ಕುರಿತು ಯಾವುದೇ ಪ್ರಕ್ರಿಯೆ ಬಂದಿಲ್ಲ. ಹೀಗಾಗಿ ಅನುದಾನ ಬಳಕೆ ಸಾಧ್ಯವಿಲ್ಲದಿದ್ದರೆ  ಕಾವೇರಿ ನೀರಾವರಿ ನಿಗಮಕ್ಕೆ ಹಸ್ತಾಂತರಿಸಿ ಎಂದು ಹಣಕಾಸು ಇಲಾಖೆಯಿಂದ ಯುಕೆಪಿ ಆಯುಕ್ತರಿಗೆ  ಪತ್ರ ಬಂದಿದೆ.

ವಿಳಂಬ ಏಕೆ?:
ಅನುದಾನ ಬಳಕೆ ವಿಳಂಬಕ್ಕೆ ಮುಖ್ಯ ಕಾರಣ ಈ ಭಾಗದ ಜನಪ್ರತಿನಿಧಿಗಳು ಎಂಬ ಆರೋಪವಿದೆ. 106 ಪುನರ್ವಸತಿ ಕೇಂದ್ರಗಳನ್ನು ಆಯಾ ಗ್ರಾಪಂಗೆ ಹಸ್ತಾಂತರಿಸಿ, ಜಿಪಂನಿಂದ ಮೂಲಸೌಲಭ್ಯ ಕಲ್ಪಿಸಬೇಕು. ಅದಕ್ಕಾಗಿ 450 ಪ್ರತ್ಯೇಕ ಕಾಮಗಾರಿಗಳಿಗೆ ಜಿಪಂನಿಂದಲೇ ಟೆಂಡರ್‌ ಕರೆದು ಕಾಮಗಾರಿ ಕೈಗೊಳ್ಳಬೇಕು. ಆಮೇಲೆ ಗ್ರಾಪಂಗೆ ಪುನರ್ವಸತಿ ಕೇಂದ್ರ ಹಸ್ತಾಂತರಿಸಿದರೆ ಜನಸಂಖ್ಯೆವಾರು ಹೆಚ್ಚಿನ ಅನುದಾನ ಲಭ್ಯವಾಗುತ್ತದೆ. ಎಲ್ಲ ಕಾಮಗಾರಿ ಕೈಗೊಳ್ಳಲು ಸಾಧ್ಯ ಎಂಬುದು ಕೆಬಿಜೆಎನ್‌ಎಲ್‌ ಮತ್ತು ಯುಕೆಪಿ ನಿಲುವು.

ಆದರೆ, ಪುನರ್ವಸತಿ ಕೇಂದ್ರಗಳಿಗೆ ಮೂಲ ಸೌಲಭ್ಯ ಕಲ್ಪಿಸಿದ ಬಳಿಕವೇ ಗ್ರಾಪಂಗೆ ಹಸ್ತಾಂತರಿಸಿ ಎಂಬುದು ಜನಪ್ರತಿನಿಧಿಗಳ ಒತ್ತಾಯ. ಹಸ್ತಾಂತರಿಸಿದ ಬಳಿಕ ಅಭಿವೃದ್ಧಿ ಮಾಡುತ್ತೇವೆ ಎಂಬುದು ಕೆಬಿಜೆಎನ್‌ಎಲ್‌-ಯುಕೆಪಿ ನಿಲುವು. ಇದರಿಂದ ಅನುದಾನ ಬಳಕೆ ವಿಳಂಬವಾಗಿದೆ.

ಬಳಕೆಗೆ ತರಾತುರಿ:
191.5 ಕೋಟಿ ರೂ. ಕಾವೇರಿ ನೀರಾವರಿ ನಿಗಮದ ಪಾಲಾಗುವ ಆತಂಕ ಸೃಷ್ಟಿಯಾಗಿದ್ದೇ ತಡ, ಇದೀಗ ಅನುದಾನ ಮಾರ್ಚ್‌ ವೇಳೆಗೆ ಬಳಕೆಗೆ ತರಾತುರಿ ತಯಾರಿ ನಡೆದಿದೆ. 106 ಪುನರ್ವಸತಿ ಕೇಂದ್ರಗಳನ್ನು 3 ಜಿಲ್ಲೆಗಳ 69 ಗ್ರಾಪಂಗೆ ಹಸ್ತಾಂತರಿಸಲು ಪ್ರಕ್ರಿಯೆ ನಡೆದಿದ್ದು, 43 ಕೇಂದ್ರಗಳ ಹಸ್ತಾಂತರ ಪೂರ್ಣಗೊಂಡಿದೆ. ಅಲ್ಲದೆ, 106 ಪುನರ್ವಸತಿ ಕೇಂದ್ರಗಳಲ್ಲಿ ಕಟ್ಟಡ-79, ರಸ್ತೆ-178, ನೀರು-86 ಹಾಗೂ ವಿದ್ಯುತ್‌ ಸರಬರಾಜು ಸಂಬಂಧಿತ-107 ಸೇರಿ ಒಟ್ಟು 450 ಕಾಮಗಾರಿಯ ಕ್ರಿಯಾಯೋಜನೆ ಜಿಪಂನಿಂದ ಸಿದ್ಧಗೊಂಡಿದೆ. ವಾರದಲ್ಲಿ ಟೆಂಡರ್‌ ಕರೆಯಲು ಸಿದ್ಧತೆ ಮಾಡಿಕೊಂಡಿದ್ದು,  ಮಾರ್ಚ್‌ 31ರೊಳಗೆ ಅನುದಾನವನ್ನು ಜಿಪಂಗೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಹಣಕಾಸು ಇಲಾಖೆ ವಿವರಣೆ ಕೇಳಿತ್ತು
191.5 ಕೋಟಿ ರೂ. ಬಳಕೆ ಕುರಿತು ವಿವರಣೆ ಕೇಳಲಾಗಿತ್ತು. ಮಾರ್ಚ್‌ ಅಂತ್ಯದೊಳಗೆ ಬಳಕೆ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ಕಾವೇರಿ ನೀರಾವರಿ ನಿಗಮಕ್ಕೆ ಹಸ್ತಾಂತರಿಸಿ ಎಂದು ನಿರ್ದೇಶನ ನೀಡಿತ್ತು. ಆದರೆ, ಟೆಂಡರ್‌ ಕರೆದು ಅನುದಾನ ಬಳಕೆಗೆ ಮುಂದಾಗಿದ್ದೇವೆ.

-ಶಿವಯೋಗಿ ಕಳಸದ, ಯುಕೆಪಿ ಆಯುಕ್ತರು

ಅನುದಾನ ಹಸ್ತಾಂತರ ಸಾಧ್ಯವಿಲ್ಲ
191.5 ಕೋಟಿ ರೂ. ಅನುದಾನವನ್ನು  ಕಾವೇರಿ ನೀರಾವರಿ ನಿಗಮಕ್ಕೆ ಕೊಡಲು ಹೇಗೆ ಸಾಧ್ಯ? ಇಲ್ಲಿನ ಪುನರ್ವಸತಿ ಕೇಂದ್ರಗಳ ಪರಿಸ್ಥಿತಿ ಗಂಭೀರವಾಗಿದೆ. ಮೂಲಸೌಲಭ್ಯ ಕಲ್ಪಿಸಲು ಬಳಕೆ ಮಾಡಲಾಗುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. ಆದಕ್ಕಾಗಿ ಒತ್ತಡ ಹಾಕುತ್ತೇವೆ.
-ಎಚ್‌.ವೈ. ಮೇಟಿ, ಬಾಗಲಕೋಟೆ ಶಾಸಕ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.