ಹಲ್ಲೆ ಪ್ರಕರಣ:ಕೊನೆಗೂ ಬಿಜೆಪಿ ಶಾಸಕ ಕಾಗೆ ಸೇರಿ 6 ಮಂದಿ ಬಂಧನ
Team Udayavani, Jan 19, 2017, 8:42 AM IST
ಬೆಳಗಾವಿ: ಜಿಲ್ಲೆಯ ಕಾಗವಾಡದಲ್ಲಿ ಜನವರಿ 1 ರಂದು ಕಾಂಗ್ರೆಸ್ ಕಾರ್ಯಕರ್ತ ,ಉದ್ಯಮಿ ವಿವೇಕ್ ಶೆಟ್ಟಿ ಮೇಲೆ ನಡೆದಿದ್ದ ಮಾರಣಾಂತಿಕ ಗುಂಪು ದಾಳಿಗೆ ಸಂಬಂಧಿಸಿ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ರಾಜು ಕಾಗೆ ಸೇರಿ 6 ಮಂದಿ ಆರೋಪಿಗಳನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ರಾಜು ಕಾಗೆ ಮತ್ತು 6 ಮಂದಿ ಆರೋಪಿಗಳು ಇದೀಗ ಪೊಲೀಸರ ವಶದಲ್ಲಿದ್ದು ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಇನ್ನೂ ಕೆಲ ಆರೋಪಿಗಳು ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಮುಂದುವರೆದಿದಿದೆ.
ಈಗಾಗಲೇ ಕಾಗೆ ಅವರು ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಕಾಗೆ ಕುಟುಂಬಸ್ಥರ ಬಗ್ಗೆ ಫೇಸ್ಬುಕ್ನಲ್ಲಿ ಅಶ್ಲೀಲ ಪ್ರತಿಕ್ರಿಯೆ ಹಾಕಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತ ವಿವೇಕ ಶೆಟ್ಟಿ ಮೇಲೆ ಬೆಳಗಾವಿಯ ಕಾಗೆ ಕುಟುಂಬದ ಸದಸ್ಯರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಬಗ್ಗೆ ಶಾಸಕ ಸೇರಿದಂತೆ 12 ಜನರ ವಿರುದ್ಧ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಉಗಾರ ಖುರ್ದದ ವಿವೇಕ ಶೆಟ್ಟಿ ಮನೆಯಲ್ಲಿ ಜ.1ರಂದೇ ಹಲ್ಲೆ ನಡೆದಿದ್ದು, ತಡವಾಗಿ ಘಟನೆ ಬೆಳಕಿಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ