ಮತ್ತೆ  ಹಾರಾಟಕ್ಕೆ ಸಾರಸ್‌; ಎನ್‌ಎಎಲ್‌ ಕನಸು


Team Udayavani, Feb 17, 2017, 3:45 AM IST

saras.jpg

ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ಎಂಟು ವರ್ಷಗಳ ಹಿಂದೆ ಅಪಘಾತಕ್ಕೀಡಾಗಿ ಸೇವೆ ಸ್ಥಗಿತಗೊಳಿಸಿದ “ಸಾರಸ್‌’ ಯುದ್ಧ ವಿಮಾನ ಒಂದೂವರೆ ತಿಂಗಳಲ್ಲಿ ಮತ್ತೆ ಹಾರಾಟ ಆರಂಭಿಸಲಿದೆ.

ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್‌ ಮತ್ತು ನ್ಯಾಷನಲ್‌ ಏರೋಸ್ಪೇಸ್‌ ಲಿಮಿಟೆಡ್‌
(ಎನ್‌ಎಎಲ್‌) ನಿರ್ದೇಶಕ ಜಿತೇಂದ್ರ ಯಾದವ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಏರೋ ಇಂಡಿಯಾ ಪ್ರದರ್ಶನದಲ್ಲಿ ಗುರುವಾರ ಮಾತನಾಡಿದ ಅವರು, 2009ರಲ್ಲಿ ನಗರದ ಬಿಡದಿ ಬಳಿ ಅಪಘಾತಕ್ಕೊಳಗಾಗಿ ಮೂವರನ್ನು ಬಲಿ ತೆಗೆದುಕೊಂಡ ಬಳಿಕ ಸಾರಸ್‌ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕ ಹಾಗೂ ವಿಮಾನ ರೆಕ್ಕೆಗೆ ಸಂಬಂಧಪಟ್ಟ ಲೋಪಗಳನ್ನು ಸರಿಪಡಿಸಿಕೊಂಡು
ಅಭಿವೃದ್ಧಿಯಾದ “ಸಾರಸ್‌’ ಎರಡನೇ ಮಾದರಿಯ ಒಟ್ಟಾರೆ ತೂಕ ಮೊದಲ ಮಾದರಿಗಿಂತ 400 ಕೆ.ಜಿ. ಇಳಿಕೆಯಾಗಿತ್ತು. ಬಳಿಕ ಈ ವಿಮಾನವನ್ನು ರಕ್ಷಣಾ ಕಾರ್ಯದಲ್ಲೂ ಬಳಸುವ ಬಗ್ಗೆ ಚಿಂತನೆ ಆರಂಭವಾಯಿತು.

ಅಪಘಾತಕ್ಕೆ ಕಾರಣಗಳೇನು ಎಂಬುದರ ಬಗ್ಗೆ ವಿಸ್ತೃತವಾದ ವರದಿಯನ್ನು ಪಡೆದು ವಿಮರ್ಶೆ ಮಾಡಲಾಗಿದೆ. ಅಪಘಾತಕ್ಕೆ ಕಾರಣವಾಗಿರುವ ದೋಷಗಳನ್ನು ಸರಿಪಡಿಸಿ ನವೀಕರಣ ಮಾಡಲಾಗಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಸಾರಸ್‌ ವಿಮಾನ ಹಾರಾಟ ಆರಂಭವಾಗಲಿದೆ. ಸದ್ಯಕ್ಕೆ 14 ಸೀಟುಗಳೊಂದಿಗೆ ಹಾರಾಟ ನಡೆಸಲಾಗುವುದು. ಒಂದು ವರ್ಷದ ಬಳಿಕ 14 ಸೀಟುಗಳನ್ನು 19 ಸೀಟಿಗೆ ಏರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

 ಸಿಎಸ್‌ಐಆರ್‌ ರಾಷ್ಟ್ರೀಯ ಏರೋಸ್ಪೇಸ್‌ ಪ್ರಯೋಗಾಲಯ ಸಿದ್ಧಪಡಿಸಿರುವ ನೂತನ ಸಾರಸ್‌ನ ಇಂಜಿನ್‌ ಸಾಮರ್ಥ್ಯ
ಹಿಂದಿಗಿಂತಲೂ ಉತ್ತಮಪಡಿಸಲಾಗಿದೆ.ಎಂಜಿನ್‌ ಸಾಮರ್ಥಯ ಹೆಚ್ಚಿಸಲಾಗಿದೆ. ವಿಮಾನದ ರೆಕ್ಕೆ ಸೇರಿದಂತೆ ವಿನ್ಯಾಸ ಬದಲಿಸಲಾಗಿದೆ. ಪೈಲಟ್‌ ಮತ್ತು ವಿನ್ಯಾಸದ ನಡುವೆ ಸಮನ್ವಯ ಕಾಯ್ದುಕೊಳ್ಳುವಂತೆ ರೂಪಿಸಲಾಗಿದೆ. ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಯಶಸ್ವಿಯಾಗಿದೆ. ಸಾರಸ್‌ ವಿಮಾನವನ್ನು ಭವಿಷ್ಯದಲ್ಲಿ ಮತ್ತೆ ನಾಗರಿಕ ವಿಮಾನವನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು. 

ಎನ್‌ಎಎಲ್‌ ಕನಸು
ಎಂಬತ್ತರ ದಶಕದ ಮಧ್ಯಭಾಗದಲ್ಲಿ ಮೂಡಿದ ಚಿಂತನೆಯಂತೆ ಎನ್‌ಎಎಲ್‌ 1991ರಿಂದ ಬಹುಪಯೋಗಿ ನಾಗರಿಕ ಬಳಕೆ ವಿಮಾನದ ಮಾದರಿ ಸಿದ್ಧಪಡಿಸುವ ಕಾರ್ಯ ಆರಂಭಿಸಿತ್ತು. ಇ¨ಕ್ಕೆ ರಷ್ಯಾ ಸಹಭಾಗಿತ್ವ ನೀಡಿತ್ತು. ಬಳಿಕ ರಷ್ಯಾ ಯೋಜನೆಯಿಂದ ಹಿಂದೆ ಸರಿದಿತ್ತು. 1999ರಲ್ಲಿ ಯೋಜನೆಗೆ ಮತ್ತೆ ಚಾಲನೆ ದೊರಕಿತ್ತು. ಅದರಂತೆ ರೂಪುಗೊಂಡ “ಸಾರಸ್‌’ ಎಚ್‌ಎಎಲ್‌ ವಿಮಾನನಿಲ್ದಾಣದಲ್ಲಿ 2004ರ ಮೇ 29ರಂದು ಮೊಟ್ಟ ಮೊದಲ ಹಾರಾಟ ನಡೆಸಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.