ಮತ್ತೆ  ಹಾರಾಟಕ್ಕೆ ಸಾರಸ್‌; ಎನ್‌ಎಎಲ್‌ ಕನಸು


Team Udayavani, Feb 17, 2017, 3:45 AM IST

saras.jpg

ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ಎಂಟು ವರ್ಷಗಳ ಹಿಂದೆ ಅಪಘಾತಕ್ಕೀಡಾಗಿ ಸೇವೆ ಸ್ಥಗಿತಗೊಳಿಸಿದ “ಸಾರಸ್‌’ ಯುದ್ಧ ವಿಮಾನ ಒಂದೂವರೆ ತಿಂಗಳಲ್ಲಿ ಮತ್ತೆ ಹಾರಾಟ ಆರಂಭಿಸಲಿದೆ.

ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್‌ ಮತ್ತು ನ್ಯಾಷನಲ್‌ ಏರೋಸ್ಪೇಸ್‌ ಲಿಮಿಟೆಡ್‌
(ಎನ್‌ಎಎಲ್‌) ನಿರ್ದೇಶಕ ಜಿತೇಂದ್ರ ಯಾದವ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಏರೋ ಇಂಡಿಯಾ ಪ್ರದರ್ಶನದಲ್ಲಿ ಗುರುವಾರ ಮಾತನಾಡಿದ ಅವರು, 2009ರಲ್ಲಿ ನಗರದ ಬಿಡದಿ ಬಳಿ ಅಪಘಾತಕ್ಕೊಳಗಾಗಿ ಮೂವರನ್ನು ಬಲಿ ತೆಗೆದುಕೊಂಡ ಬಳಿಕ ಸಾರಸ್‌ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕ ಹಾಗೂ ವಿಮಾನ ರೆಕ್ಕೆಗೆ ಸಂಬಂಧಪಟ್ಟ ಲೋಪಗಳನ್ನು ಸರಿಪಡಿಸಿಕೊಂಡು
ಅಭಿವೃದ್ಧಿಯಾದ “ಸಾರಸ್‌’ ಎರಡನೇ ಮಾದರಿಯ ಒಟ್ಟಾರೆ ತೂಕ ಮೊದಲ ಮಾದರಿಗಿಂತ 400 ಕೆ.ಜಿ. ಇಳಿಕೆಯಾಗಿತ್ತು. ಬಳಿಕ ಈ ವಿಮಾನವನ್ನು ರಕ್ಷಣಾ ಕಾರ್ಯದಲ್ಲೂ ಬಳಸುವ ಬಗ್ಗೆ ಚಿಂತನೆ ಆರಂಭವಾಯಿತು.

ಅಪಘಾತಕ್ಕೆ ಕಾರಣಗಳೇನು ಎಂಬುದರ ಬಗ್ಗೆ ವಿಸ್ತೃತವಾದ ವರದಿಯನ್ನು ಪಡೆದು ವಿಮರ್ಶೆ ಮಾಡಲಾಗಿದೆ. ಅಪಘಾತಕ್ಕೆ ಕಾರಣವಾಗಿರುವ ದೋಷಗಳನ್ನು ಸರಿಪಡಿಸಿ ನವೀಕರಣ ಮಾಡಲಾಗಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಸಾರಸ್‌ ವಿಮಾನ ಹಾರಾಟ ಆರಂಭವಾಗಲಿದೆ. ಸದ್ಯಕ್ಕೆ 14 ಸೀಟುಗಳೊಂದಿಗೆ ಹಾರಾಟ ನಡೆಸಲಾಗುವುದು. ಒಂದು ವರ್ಷದ ಬಳಿಕ 14 ಸೀಟುಗಳನ್ನು 19 ಸೀಟಿಗೆ ಏರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

 ಸಿಎಸ್‌ಐಆರ್‌ ರಾಷ್ಟ್ರೀಯ ಏರೋಸ್ಪೇಸ್‌ ಪ್ರಯೋಗಾಲಯ ಸಿದ್ಧಪಡಿಸಿರುವ ನೂತನ ಸಾರಸ್‌ನ ಇಂಜಿನ್‌ ಸಾಮರ್ಥ್ಯ
ಹಿಂದಿಗಿಂತಲೂ ಉತ್ತಮಪಡಿಸಲಾಗಿದೆ.ಎಂಜಿನ್‌ ಸಾಮರ್ಥಯ ಹೆಚ್ಚಿಸಲಾಗಿದೆ. ವಿಮಾನದ ರೆಕ್ಕೆ ಸೇರಿದಂತೆ ವಿನ್ಯಾಸ ಬದಲಿಸಲಾಗಿದೆ. ಪೈಲಟ್‌ ಮತ್ತು ವಿನ್ಯಾಸದ ನಡುವೆ ಸಮನ್ವಯ ಕಾಯ್ದುಕೊಳ್ಳುವಂತೆ ರೂಪಿಸಲಾಗಿದೆ. ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಯಶಸ್ವಿಯಾಗಿದೆ. ಸಾರಸ್‌ ವಿಮಾನವನ್ನು ಭವಿಷ್ಯದಲ್ಲಿ ಮತ್ತೆ ನಾಗರಿಕ ವಿಮಾನವನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು. 

ಎನ್‌ಎಎಲ್‌ ಕನಸು
ಎಂಬತ್ತರ ದಶಕದ ಮಧ್ಯಭಾಗದಲ್ಲಿ ಮೂಡಿದ ಚಿಂತನೆಯಂತೆ ಎನ್‌ಎಎಲ್‌ 1991ರಿಂದ ಬಹುಪಯೋಗಿ ನಾಗರಿಕ ಬಳಕೆ ವಿಮಾನದ ಮಾದರಿ ಸಿದ್ಧಪಡಿಸುವ ಕಾರ್ಯ ಆರಂಭಿಸಿತ್ತು. ಇ¨ಕ್ಕೆ ರಷ್ಯಾ ಸಹಭಾಗಿತ್ವ ನೀಡಿತ್ತು. ಬಳಿಕ ರಷ್ಯಾ ಯೋಜನೆಯಿಂದ ಹಿಂದೆ ಸರಿದಿತ್ತು. 1999ರಲ್ಲಿ ಯೋಜನೆಗೆ ಮತ್ತೆ ಚಾಲನೆ ದೊರಕಿತ್ತು. ಅದರಂತೆ ರೂಪುಗೊಂಡ “ಸಾರಸ್‌’ ಎಚ್‌ಎಎಲ್‌ ವಿಮಾನನಿಲ್ದಾಣದಲ್ಲಿ 2004ರ ಮೇ 29ರಂದು ಮೊಟ್ಟ ಮೊದಲ ಹಾರಾಟ ನಡೆಸಿತ್ತು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.