ಇಂದು ಚಿನ್ನಮ್ಮ ಭೇಟಿಗಾಗಿ ಪರಪ್ಪನ ಅಗ್ರಹಾರಕ್ಕೆ ಸಿಎಂ ಪಳನಿ ಸ್ವಾಮಿ
Team Udayavani, Feb 17, 2017, 8:59 AM IST
ಬೆಂಗಳೂರು : ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಡಪ್ಪಾಡಿ.ಕೆ .ಪಳನಿಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆ ಮನೆ ವಾಸ ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಮುಂದಿನ ನಿರ್ಧಾರಗಳು ಮತ್ತು ಪಕ್ಷ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಶಶಿಕಲಾ ಮತ್ತು ಸಿಎಂ ಪಳನಿಸ್ವಾಮಿ ನಡುವೆ ಮಹತ್ವದ ಮಾತುಕತೆ ನಡೆಯಲಿದೆ. ಪಳನಿಸ್ವಾಮಿ ಅವರೊಂದಿಗೆ ಕೆಲ ಸಚಿವರು ಮತ್ತು ಶಾಸಕರು ಆಗಮಿಸುವ ಸಾಧ್ಯತೆಗಳಿವೆ .
ಬೆಳಗ್ಗೆ 11 ಗಂಟೆಯ ವೇಳೆಗೆ ಮಾತುಕತೆಗೆ ಸಮಯ ನಿಗದಿಯಾಗಿದ್ದು, ಜೈಲಿನ ಸುತ್ತ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 2ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಗುರುವಾರ ಪಳನಿಸ್ವಾಮಿ ಅವರು 31 ಮಂದಿ ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ