ಷಡ್ಯಂತ್ರ ಮಾಡಿದವರನ್ನು ಬೆತ್ತಲೆಗೊಳಿಸುವೆ


Team Udayavani, Feb 20, 2017, 3:45 AM IST

cm.jpg

ಹಾವೇರಿ: “ಕೆಲವರು ರಾಜಕೀಯವಾಗಿ ನನ್ನನ್ನು ತುಳಿಯಲು ಷಡ್ಯಂತ್ರ ಮಾಡುತ್ತಿದ್ದಾರೆ. ಅವರನ್ನೆಲ್ಲ ಮುಂದಿನ ದಿನಗಳಲ್ಲಿ ಬೆತ್ತಲೆಗೊಳಿಸುವ ಕೆಲಸ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳ ವಿರುದ್ಧ ಗುಡುಗಿದರು. ರಾಣಿಬೆನ್ನೂರು ನಗರದ ಮುನ್ಸಿಪಲ್‌ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಉಣ್ಣೆ ನೂಲು ಮತ್ತು ಬ್ಲಾಂಕೆಟ್‌ ತಯಾರಿಕಾ ಘಟಕ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಉದ್ಘಾಟನೆ, ಕುರಿ ಉಣ್ಣೆಯ ಔದ್ಯೋಗಿಕ ಬೆಳವಣಿಗೆಯ ಸಹಕಾರಿ ಸಂಘದ ವಜ್ರ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

“ನನ್ನ ಬಗ್ಗೆ ಆರೋಪ ಮಾಡುವ ಹಿಂದಿನ ಸಿಎಂ ಮೇಲೆ 25 ಕ್ರಿಮಿನಲ್‌ ಪ್ರಕರಣ ದಾಖಲಾಗಿದ್ದವು. ನನ್ನ ಮೇಲೆ ಒಂದೇ ಒಂದು ಖಾಸಗಿ ಪ್ರಕರಣವೂ ದಾಖಲಾಗಿಲ್ಲ. ನಾನು ಈ ವರ್ಷ 12ನೇ ಬಜೆಟ್‌ ಮಂಡಿಸುತ್ತಿದ್ದು, ಒಂದೇ ಒಂದು ಕಪ್ಪುಚುಕ್ಕೆ ನನ್ನ ಮೇಲಿಲ್ಲ. ಕಪ್ಪುಚುಕ್ಕೆ ತರುವಂಥ ಕೆಲಸ ಮಾಡಿ ಅಧಿಕಾರ ನೀಡಿದ ಜನರಿಗೆ ಅಗೌರವ ತೋರುವುದಿಲ್ಲ’ ಎಂದರು.

ಅಹಿಂದ-ಬಡವರ ಪರ: “ನಾನು ಅಹಿಂದ ಪರ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಎಲ್ಲ ವರ್ಗದ ಬಡವರ ಪರವಾಗಿಯೂ ಇದ್ದೇನೆ. ನನ್ನನ್ನು ನೋಡಿ ಹೊಟ್ಟೆ ಉರಿ ಪಡುವವರಿಗೆ ನಾನು ಹೆದರಲ್ಲ. ಹೊಟ್ಟೆ ಉರಿ ಪಡುವವರೇ ಉರಿಯ ನೋವು ಅನುಭವಿಸುತ್ತಾರೆ. ಅಧಿಕಾರ, ಸಂಪತ್ತು ಎಲ್ಲರಿಗೂ ಹಂಚಿಕೆ ಆಗಬೇಕು, ಸಾಮಾಜಿಕ ಸಾಮರಸ್ಯ ಇರಬೇಕು ಎಂಬುದು ನನ್ನ ಬದ್ಧತೆ ಎಂದರು.

15 ಪೈಸೆಯೂ ಹಾಕಿಲ್ಲ: 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯ ಮಾಡಿ ಭ್ರಷ್ಟರ, ಕಪ್ಪು ಹಣ ದಂಧೆಕೋರರ ನಿದ್ದೆಗೆಡಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದರೆ ನಿಜವಾಗಿ ನಿದ್ದೆಗೆಟ್ಟಿದ್ದು ಬಡವರೇ ಹೊರತು ಶ್ರೀಮಂತರಲ್ಲ. ಎಟಿಎಂ, ಬ್ಯಾಂಕ್‌ಗಳ ಮುಂದೆ ನಿಂತವರ್ಯಾರೂ ಶ್ರೀಮಂತರಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಬಡ ಜನರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿ ಮೂರು ವರ್ಷವಾದರೂ ಬಡವರ ಖಾತೆಗೆ
15 ಪೈಸೆಯನ್ನೂ ಹಾಕಿಲ್ಲ ಎಂದರು.

ಕೇಂದ್ರ ಸರ್ಕಾರ ರೈತರ ಅರ್ಧದಷ್ಟು ಸಾಲಮನ್ನಾ ಮಾಡಿದರೆ ಉಳಿದ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರವೂ ಸಿದ್ಧ ಎಂಬ ಮಾತಿಗೆ ಈಗಲೂ ಬದ್ಧನಿದ್ದೇನೆ. ಈ ಬಗ್ಗೆ ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ, ಪತ್ರ ಬರೆದಿದ್ದೇನೆ. ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಆರೋಪಿಸಿದರು.

ಡೈರಿ ವಿಚಾರ ಪ್ರಸ್ತಾಪಕ್ಕೆ ಸಿಎಂ ಕೆಂಡಾಮಂಡಲ
ಹುಬ್ಬಳ್ಳಿ: ಪಕ್ಷದ ಹೈಕಮಾಂಡ್‌ಗೆ ಕಪ್ಪ ಕಾಣಿಕೆ ನೀಡಲಾಗಿದೆ ಎಂದು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ
ಬಿಜೆಪಿಯವರ ಬಳಿ ಯಾವುದೇ ಆಧಾರ ಹಾಗೂ ಡೈರಿಯೂ ಇಲ್ಲ. ಇದ್ದಿದ್ದರೆ ಇಷ್ಟೊತ್ತಿಗಾಗಲೇ ಅದನ್ನು ಬಹಿರಂಗ
ಪಡಿಸುತ್ತಿದ್ದರು. ಸುಳ್ಳು ಹೇಳುವುದೇ ಅವರಿಗೆ ರಕ್ತಗತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಕಾಂಗ್ರೆಸ್‌ನ ಹೈಕಮಾಂಡ್‌ಗೆ ಕಪ್ಪುಹಣ ನೀಡಿದ ಬಗ್ಗೆ ಡೈರಿಯಲ್ಲಿ ಉಲ್ಲೇಖವಿದೆಯಂತಲ್ಲ ಎಂಬ ಸುದ್ದಿಗಾರರ
ಪ್ರಶ್ನೆಯಿಂದ ಕೆರಳಿದ ಅವರು, ಅವರ ಆರೋಪ ಬಿಡಿ. ನಿಮಗೇನಾದರೂ (ಮಾಧ್ಯಮ) ಆ ಡೈರಿ ತೋರಿಸಿದ್ದಾರೆಯೇ
ಹೇಳಿ ಎಂದು ಮರುಪ್ರಶ್ನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು 1 ಲಕ್ಷ ಕೋಟಿ ರೂ. ಹೊಡೆದಿದ್ದಾರೆಂದು ನಾನೇನಾದರೂ ಆರೋಪಿಸಿದರೆ ಅದನ್ನೂ ಬರೆಯುತ್ತೀರಾ ಎಂದರು ಪ್ರಶ್ನಿಸಿದರು.

ಸಂಶಯದಿಂದ ನೋಡುತ್ತಾರೆ: ಬಿಜೆಪಿಯವರು ರಾಜ್ಯ ಸರಕಾರದ ಎಲ್ಲ ನಡೆಗಳನ್ನು ಸಂಶಯದಿಂದ ನೋಡುತ್ತಿದ್ದಾರೆ.
ವಾಸ್ತವಾಂಶ ಇಲ್ಲದಿದ್ದರೂ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಾಡುವುದಾದರೆ ಮಾಡಲಿ. ಕಾಂಗ್ರೆಸ್‌ಗೂ ಅವರ ವಿರುದ್ಧ ಹೋರಾಟ ಮಾಡಲು ಬರುತ್ತದೆ. ಅವರಿಗಿಂತ ಹತ್ತು ಪಟ್ಟು ಕಾರ್ಯಕರ್ತರು ಪಕ್ಷದಲ್ಲಿದ್ದಾರೆ ಎಂದರು. ರಾಜ್ಯ ಒಲಿಂಪಿಕ್ಸ್‌ ಸಂಘದ ಅಧ್ಯಕ್ಷರು ಕ್ರೀಡಾಕೂಟದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಆದರೆ ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.