ಅಧಿವೇಶನದಲ್ಲಿ ಒಂಟಿಗಾಲಲ್ಲಿ ನಿಲ್ಲುವಂತೆ ಮಾಡ್ತೇನೆ: ಬಿಎಸ್ವೈ
Team Udayavani, Mar 4, 2017, 3:50 AM IST
ಹಾವೇರಿ/ ಹುಬ್ಬಳ್ಳಿ: “ಇನ್ನು 15-20 ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಸಚಿವರ ಜಾತಕವನ್ನು ಜಾಲಾಡಿ ಅವರ ಮಾನ ಹರಾಜು ಹಾಕುತ್ತೇನೆ. ಮುಂದಿನ ಅಧಿವೇಶನಲ್ಲಿ ಎಲ್ಲರೂ ಒಂಟಿಗಾಲಲ್ಲಿ ನಿಲ್ಲುವಂತೆ ಮಾಡುತ್ತೇನೆ. ನಾನು ಯಾವುದೇ ಬೆದರಿಕೆಗೆ ಜಗ್ಗಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗುಡುಗಿದರು.
ಹಾವೇರಿಯಲ್ಲಿ ಶುಕ್ರವಾರ ಬಿಜೆಪಿ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿ, “ಡೈರಿಯಂತೆ ಸದ್ಯದಲ್ಲಿಯೇ ಇನ್ನೊಂದು ದೊಡ್ಡ ಬಾಂಬ್ ಸಿಡಿಸುತ್ತೇನೆ. ಬಿಬಿಎಂಪಿಯಲ್ಲಿ ಎಲ್ಲ ಖದೀಮರು ಸೇರಿ 3000 ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ. ಅದನ್ನು ದಾಖಲೆ ಸಹಿತ ಬಿಡುಗಡೆ ಮಾಡುತ್ತೇನೆ’ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಉಕ್ಕಿನ ಸೇತುವೆ ನಿರ್ಮಾಣವನ್ನು ಹಿಂಪಡೆದು ಕಾಂಗ್ರೆಸ್ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಡೈರಿ ಪ್ರಕರಣ ಸುಳ್ಳಾದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಇಲ್ಲವಾದರೆ ಸಿಎಂ ರಾಜೀನಾಮೆ ನೀಡುತ್ತಾರೆಯೇ?’ ಎಂದು ಸವಾಲು ಹಾಕಿದರು.
ಅಲ್ಲದೆ ಚೆಕ್ ಮುಖಾಂತರ ನಾನು ಪಕ್ಷದ ಹೈಕಮಾಂಡ್ಗೆ ಕಪ್ಪ ಸಲ್ಲಿಸಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬಳಿ ದಾಖಲೆಗಳಿವೆ ಎಂದಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ತಕ್ಷಣ ಅವುಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.
ನಾಲ್ಕೈದು ತಿಂಗಳಲ್ಲಿ ಚುನಾವಣೆ
ರಾಜ್ಯದ ಮುಖ್ಯಮಂತ್ರಿ, ಸಚಿವರು ಪಕ್ಷದ ರಾಷ್ಟ್ರೀಯ ನಾಯಕರಿಗೆ ರಾಜ್ಯದ ಜನರ 600-700 ಕೋಟಿ ರೂ. ಕೊಟ್ಟಿದ್ದಾರೆ. ಇವೆಲ್ಲವೂ ಡೈರಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ತನಿಖೆ ನಡೆದು ಈ ಕಳ್ಳರು ಸಿಕ್ಕಿಬಿದ್ದರೆ ನಾಲ್ಕೈದು ತಿಂಗಳಲ್ಲಿಯೇ ಚುನಾವಣೆ.
– ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು