600 ದಿನ ಪೂರೈಸಿದರೂ ಆರಲಿಲ್ಲ ಮಹದಾಯಿ ಕಿಚ್ಚು
Team Udayavani, Mar 6, 2017, 3:45 AM IST
ನರಗುಂದ: ಮಹದಾಯಿ ಹಾಗೂ ಕಳಸಾ- ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ತಾಲೂಕಿನ ರೈತರು ನಡೆಸುತ್ತಿರುವ ಅನಿರ್ದಿಷ್ಟ ಹೋರಾಟ ಮಾ. 6ರಂದು 600ನೇ ದಿನ ಪೂರೈಸಲಿದೆ.
ಈ ದಿನವನ್ನು ಸಂಕಲ್ಪ ದಿನವನ್ನಾಗಿ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆ. ಜತೆಗೆ ಸಾಂಕೇತಿಕವಾಗಿ ಬಂದ್ ಆಚರಿಸಿ, ನೀರು ಸಿಗುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ಸಾಬೀತು ಪಡಿಸಲಿದ್ದಾರೆ.ಸಂಕಲ್ಪ ದಿನಾಚರಣೆ ಹಿನ್ನೆಲೆ ನರಗುಂದ ಬಂದ್ ಆಚರಣೆ ಶಾಂತಿಯುತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮನೋಜ್ ಜೈನ್ ಅವರು ಸ್ಥಳಕ್ಕೆ ಆಗಮಿಸಿ ಹೋರಾಟಗಾರರಿಗೆ ಸೂಚನೆ ನೀಡಿದರು.
ಕುತಂತ್ರಕ್ಕೆ ಬಗ್ಗುವುದಿಲ್ಲ:
ಭಾನುವಾರ 599ನೇ ದಿನದ ಮಹದಾಯಿ, ಕಳಸಾ-ಬಂಡೂರಿ ಹೋರಾಟದ ನಿರಂತರ ಸತ್ಯಾಗ್ರಹದಲ್ಲಿ ಭಾಗಿಯಾದ ರೈತ ಸೇನಾ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಶಂಕರಪ್ಪ ಅಂಬಲಿ ಮಾತನಾಡಿ, ಸರ್ಕಾರಗಳು ಮಹದಾಯಿ ಯೋಜನೆಗೆ ಎಷ್ಟೇ ಅಡ್ಡಿಪಡಿಸಿ, ಕಲ್ಲು ಹಾಕುವ ಕುತಂತ್ರ ನಡೆಸಿದರೂ ನಾವು ಬಗ್ಗುವುದಿಲ್ಲ. ಮಾ.6ರ 600ನೇ ದಿನದಂದು ನೀರು ಪಡೆಯಲು ಹೋರಾಟವನ್ನು ಸಂಕಲ್ಪ ದಿನವಾಗಿ ಆಚರಿಸುತ್ತೇವೆ. ಅಂದು ವೇದಿಕೆಯಲ್ಲಿ ಎಲ್ಲ ಹೋರಾಟಗಾರರು ಹೋರಾಟ ಮುನ್ನಡೆಸುವ ಸಂಕಲ್ಪದ ಪ್ರಮಾಣ ವಚನ ಸ್ವೀಕರಿಸಲಿದ್ದೇವೆ ಎಂದರು.
ಕೇಂದ್ರದ ಷಡ್ಯಂತ್ರ:
ರಾಜ್ಯ ಸರ್ಕಾರ ಸಲ್ಲಿಸಿರುವ ಕಸ್ತೂರಿ ರಂಗನ್ ಪರಿಷ್ಕೃತ ವರದಿಯನ್ನು ಕಡೆಗಣಿಸಿರುವ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟ ಪ್ರದೇಶ ಸಂರಕ್ಷಿತ ಪ್ರದೇಶವೆಂದು ಪರಿಗಣಿಸಿದ್ದು, ಮಹದಾಯಿ ಯೋಜನೆಗೆ ಅಡ್ಡಿಪಡಿಸುವ ಹುನ್ನಾರ ಮಾಡುತ್ತಿದೆ. ಇದು ಕೃಷಿ ಚಟುವಟಿಕೆಯನ್ನು ನಿರ್ಬಂಧಿಧಿಸುವ ಷಡ್ಯಂತ್ರವಾಗಿದೆ ಎಂದು ದೂರಿದರು. ಕಸ್ತೂರಿ ರಂಗನ್ ವರದಿಯನ್ವಯ ಮಹದಾಯಿ ಯೋಜನೆ ಅನುಷ್ಠಾನಗೊಂಡರೆ ಆ ಭಾಗಕ್ಕೆ ಯಾವುದೇ ಧಕ್ಕೆಯಾಗಲಾರದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರದ ಘೋಷಣೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಹದಾಯಿ ಹೋರಾಟಗಾರರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ