‘ಕನ್ನಡ ಶಾಯರಿ ಜನಕ’ ಇಟಗಿ ಈರಣ್ಣ ಇನ್ನಿಲ್ಲ
Team Udayavani, Mar 14, 2017, 10:06 AM IST
ಶಿವಮೊಗ್ಗ: ‘ಕನ್ನಡ ಶಾಯರಿಗಳ ಜನಕ’ ಎಂದೇ ಖ್ಯಾತರಾಗಿದ್ದ ಸಾಹಿತಿ ಪ್ರೊ| ಇಟಗಿ ಈರಣ್ಣ (67) ಭಾನುವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಅವರು, ಹಳೆಗನ್ನಡ ಸಾಹಿತ್ಯದಲ್ಲಿ ಅಪಾರ ಅನುಭವ ಹೊಂದಿದ್ದ ಅಪರೂಪದ ಸಾಹಿತಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ತಮ್ಮ ನಿವೃತ್ತ ಜೀವನವನ್ನು ಶಿವಮೊಗ್ಗದಲ್ಲಿ ಕಳೆಯಲು ನಿರ್ಧರಿಸಿದ್ದ ಈರಣ್ಣ, ನಗರದ ಕಲ್ಲಹಳ್ಳಿಯ ಪ್ರಿಯದರ್ಶಿನಿ ಲೇಔಟ್ನಲ್ಲಿ ಮನೆ ಕಟ್ಟಿಕೊಂಡು ವಿಶ್ರಾಂತ ಜೀವನ ನಡೆಸುತ್ತಿದ್ದರು.
ಕನ್ನಡ ಸಾಹಿತ್ಯಕ್ಕೆ ವಚನಾಚಲ, ಕನ್ನಡ ಶಾಯರಿ, ಕಬೀರನ ದೋಹೆಗಳು, ಯಹೂದಿ ನಾಟಕ, ರಾವಿನದಿಯದಂಡೆಯಲ್ಲಿ ಸೇರಿ ಹಲವು ಕೃತಿಗಳನ್ನು ಬರೆದಿದ್ದರು. ಅಲ್ಲದೆ ಅನೇಕ ನಾಟಕಗಳನ್ನೂ ನಿರ್ದೇಶಿಸಿದ್ದರು. ಇದಲ್ಲದೆ ಚಲನಚಿತ್ರಗಳಿಗೆ ಶಾಯರಿ ಬರೆದ ಈರಣ್ಣ ಮತ್ತಷ್ಟು ಜನಪ್ರಿಯರಾಗಿದ್ದರು. ‘ಸ್ಪರ್ಶ’ ಚಿತ್ರದಲ್ಲಿ ಬರುವ ಎಲ್ಲ ಶಾಯರಿಗಳನ್ನು ಅವರು ರಚಿಸಿದ್ದಾರೆ. ಜತೆಗೆ ಅದೇ ಚಿತ್ರದಲ್ಲಿ ‘ಚಂದಕ್ಕಿಂತ ಚೆಂದ’ ಎಂಬ ಹಾಡು ಕೂಡ ಬರೆದಿದ್ದು, ಆ ಹಾಡು ಅತ್ಯಂತ ಜನಪ್ರಿಯವಾಗಿತ್ತು. ಅನೇಕ ಕೃತಿಗಳನ್ನು ರಚಿಸಿರುವ ಇಟಗಿ ಈರಣ್ಣ ಅನುವಾದಕರಾಗಿಯೂ ಕೆಲಸಮಾಡಿದ್ದರು. ಉರ್ದು ಮತ್ತು ಪರ್ಶಿಯನ್ ಭಾಷೆಯ ಜ್ಞಾನವನ್ನು ಅಪಾರವಾಗಿ ಹೊಂದಿದ್ದ ಇವರು ಅಲ್ಲಿದ್ದ ಶಾಯರಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ