ಐಐಎಸ್‌ಸಿ ದಾಳಿಯ ಆರೋಪಿ ಸಿಸಿಬಿ ವಶಕ್ಕೆ


Team Udayavani, Mar 20, 2017, 10:42 AM IST

Arrest-Symbolic-New-600.jpg

ಬೆಂಗಳೂರು: ಹನ್ನೆರಡು ವರ್ಷಗಳ ಹಿಂದೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಡೆದ ದಾಳಿ ಪ್ರಕರಣದ ಆರೋಪಿ ಲಷ್ಕರ್‌-ಎ-ತಯ್ಯಬಾ ಸಂಘಟನೆಯ ಶಂಕಿತ ಉಗ್ರ ಹಬೀಬ್‌ ಮಿಯಾ (37)ನನ್ನು ನಗರದ ಅಪರಾಧ ವಿಭಾಗ ಪೊಲೀಸರು ಶನಿವಾರ ತಡರಾತ್ರಿ ನಗರಕ್ಕೆ ಕರೆತಂದಿದ್ದು, ಹೆಚ್ಚಿನ ವಿಚಾರಣೆಗೆ ಮಾ. 27ರ ವರೆಗೆ ವಶಕ್ಕೆ ಪಡೆದಿದ್ದಾರೆ. ಐಐಎಸ್‌ಸಿ ದಾಳಿಕೋರ ಉಗ್ರ ಸಬಾವುದ್ದಿನ್‌ ಮತ್ತು ಸೈಯದ್‌ ಅನ್ಸಾರಿಯನ್ನು ಗಡಿ ದಾಟಿಸಿ ಬಾಂಗ್ಲಾದೇಶಕ್ಕೆ ನುಸುಳಲು ನೆರವಾಗಿದ್ದ ಜೋಗೇಂದ್ರನಗರದ ಹಬೀಬ್‌ ಮಿಯಾನನ್ನು ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಗುಜರಾತ್‌ನ ಭಯೋತ್ಪಾದನ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ತ್ರಿಪುರಾದ ಅಗರ್ತಲ ಬಳಿ ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಾಡಿವಾರಂಟ್‌ ಮೂಲಕ ನಗರಕ್ಕೆ ಕರೆತರಲಾಗಿದೆ. ಮಿಯಾ ಉಗ್ರ ಸಂಘಟನೆಗಳಾದ ಲಷ್ಕರ್‌-ಎ-ತಯ್ಯಬಾ, ಹರ್ಕತ್‌-ಉಲ್‌-ಜಿಹಾದುಲ್‌-ಇಸ್ಲಾಮ್‌ ಸಹಿತ ಇತರ ಉಗ್ರ ಸಂಘಟನೆಗಳ ಜತೆ ನಂಟು ಹೊಂದಿದ್ದ. ಅಲ್ಲದೇ ಭಾರತದಲ್ಲಿ ಸ್ಲೀಪರ್‌ಸೆಲ್‌ ಆಗಿಯೂ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

2005ರ ಡಿ. 28ರಂದು ರಾತ್ರಿ 7 ಗಂಟೆ ಸುಮಾರಿಗೆ ಕಾರೊಂದರಲ್ಲಿ ಸೇನಾ ಸಮವಸ್ತ್ರದಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಭಾರತೀಯ ವಿಜ್ಞಾನ ಸಂಸ್ಥೆ ಆವರಣದ ಜೆ.ಎನ್‌. ಟಾಟಾ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಷಯ ವಿಜ್ಞಾನಿಗಳ ಮೇಲೆ ದಾಳಿ ನಡೆಸಿದ್ದರು. ಗ್ರೇನೆಡ್‌ ದಾಳಿ ನಡೆಸಿ ಬಳಿಕ ಎ.ಕೆ. 47 ಮೂಲಕ  ಗುಂಡಿನ ಮಳೆಗೈದಿದ್ದರು.  ಈ ವೇಳೆ ದಿಲ್ಲಿಯ ಭಾರತೀಯ ವಿಜ್ಞಾನ ಸಂಸ್ಥೆಯ ಗಣಿಶಾಸ್ತ್ರ ವಿಭಾಗದ ಪ್ರೊ| ಮನೀಷ್‌ ಚಂದ್ರ ಪುರಿ ಅವರಿಗೆ ಗುಂಡು ತಗಲಿ ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದರು. ಇದೇ ಸಂದರ್ಭದಲ್ಲಿ ಗರ್ಭಿಣಿ  ಸಹಿತ 6 ಮಂದಿ ಗಾಯಗೊಂಡಿದ್ದರು. ಕೃತ್ಯವೆಸಗಿದ ಅನಂತರ ದಾಳಿಕೋರರು ಸೇನಾ ಸಮವಸ್ತ್ರದಲ್ಲೇ ಐಐಎಸ್‌ಸಿ ಕಾಂಪೌಂಡ್‌ ಹಾರಿ ಪರಾರಿಯಾಗಿದ್ದರು. ಈ ದಾಳಿಕೋರರಿಗೆ ಬಂಧಿತ ಹಬೀಬ್‌ ಮಿಯಾ ವಾಹನ, ಸೇನಾ ಸಮವಸ್ತ್ರ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಿ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನು ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಐಐಎಸ್‌ಸಿ ದಾಳಿ ನಡೆದ ಬಳಿಕ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಗಳು ಶಂಕಿತ ಹಬೀಬ್‌ ಮಿಯಾ ಸಹಿತ ಎಂಟು ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.ಅದರಲ್ಲಿ ಆರೋಪಿಗಳೆಲ್ಲರೂ ನಾಪ್ತತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಂಕಿತ ಉಗ್ರ ಹಬೀಬ್‌ ಮಿಯಾನ ಚಲನವಲನಗಳ ಬಗ್ಗೆ ಹಲವು ತಿಂಗಳುಗಳಿಂದ ನಿಗಾವಹಿಸಲಾಗಿತ್ತು. ಮೊದಲಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನೆಲೆಸಿರುವ ಮಾಹಿತಿ ಬಂದಿದ್ದು, ಕೂಡಲೇ ಗುಜರಾತ್‌ನ ಎಟಿಎಸ್‌ಗೆ ಮಾಹಿತಿ ರವಾನಿಸಲಾಗಿತ್ತು. ಬಳಿಕ ತ್ರಿಪುರ ಮೂಲಕ ಬಾಂಗ್ಲಾದೇಶ ಪ್ರವೇಶಿಸಲು ಯತ್ನಿಸುತ್ತಿದ್ದ. ಈ ಮಾಹಿತಿ ಪಡೆದ ಉಗ್ರ ನಿಗ್ರಹ ಪಡೆಯ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಮಾ. 27ರ ವರೆಗೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ.     
-ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.