ಉಷ್ಣಾಂಶ ಏರಿಕೆ: ಈ ಬಾರಿ ಮಾವು ಇಳುವರಿ ಇಳಿಕೆ?


Team Udayavani, Mar 20, 2017, 12:47 PM IST

Mango-Crop-600.jpg

ಚಿತ್ರದುರ್ಗ: ರೈತರನ್ನು ಎಡೆಬಿಡದೆ ಕಾಡುತ್ತಿರುವ ಬರ, ಮಳೆ ಕೊರತೆ ಹಾಗೂ ರೋಗ ಬಾಧೆಯಿಂದಾಗಿ ‘ಹಣ್ಣುಗಳ ರಾಜ’ ಮಾವಿನ ಫಸಲು ಈ ಬಾರಿ ಕಡಿಮೆಯಾಗುವ ಲಕ್ಷಣ ಗೋಚರಿಸುತ್ತಿದೆ. ಅಂತರ್ಜಲ ಕಡಿಮೆಯಾಗಿದ್ದರಿಂದ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ. ಉಷ್ಣಾಂಶದಲ್ಲಿ ತೀವ್ರ ಏರಿಕೆಯಾಗುತ್ತಿರುವುದು ಮಾವಿನ ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮಾವಿನ ಇಳುವರಿ ಕುಸಿತದಿಂದ ಬೇಸತ್ತ ಬೆಳೆಗಾರರು ಫಸಲಿಗೆ ಬಂದಿರುವ ಮಾವಿನಮರಗಳಿಗೆ ಕೊಡಲಿಪೆಟ್ಟು ಹಾಕುತ್ತಿದ್ದಾರೆ. ಅಲ್ಲದೆ ಹವಾಮಾನ ವೈಪರೀತ್ಯದಿಂದ ಮಾವಿನ ಇಳುವರಿ ಶೇ.30ರಿಂದ 50ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತೋಟಗಾರಿಕಾ ತಜ್ಞರು.

ಮಾವಿನ ಫಸಲು ಅರ್ಧಕ್ಕರ್ಧ ಕಡಿಮೆಯಾದರೆ ಸಹಜವಾಗಿ ಮಾವಿನಹಣ್ಣಿನ ಬೆಲೆ ಗಗನಕ್ಕೇರಲಿದೆ. ಇದರಿಂದ ಗ್ರಾಹಕರ ಜೇಬಿಗೂ ಕತ್ತರಿ ಬೀಳಲಿದೆ. ಹೀಗಾಗಿ ಬೆಳೆಗಾರರು ಹಾಗೂ ಗ್ರಾಹಕರಿಗೆ ಈ ಬಾರಿ ಮಾವು ಕಹಿಯಾದರೆ, ಮಧ್ಯವರ್ತಿಗಳು ಹಾಗೂ ವ್ಯಾಪಾರಿಗಳಿಗೆ ಭರಪೂರ ಲಾಭವಾಗುವ ಸಾಧ್ಯತೆ ಇದೆ. ‘ಹಣ್ಣುಗಳ ರಾಜ’ ಮಾವು ಕಡಿಮೆ ನೀರು ಬೇಡುವ ಬೆಳೆ. ಬಯಲುಸೀಮೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯನ್ನಾಗಿ ಮಾವು ಬೆಳೆಯಲಾಗುತ್ತಿದೆ. ಪ್ರಪಂಚದ ಒಟ್ಟು ಮಾವು ಬೆಳೆ ಕ್ಷೇತ್ರದ ಶೇ.63ರಷ್ಟನ್ನು ಭಾರತೀಯ ರೈತರೇ ಬೆಳೆಯುತ್ತಿದ್ದಾರೆ.

ಕರ್ನಾಟಕದ ಸುಮಾರು 1,73,080 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದ್ದು, ವಾರ್ಷಿಕ ಸುಮಾರು 16,41,165 ಟನ್‌ ಹಣ್ಣು ಉತ್ಪಾದನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಮುಖವಾಗಿ ಕೋಲಾರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಾವು ಬೆಳೆಯಲಾಗುತ್ತಿದೆ. ಅತ್ಯುತ್ತಮ ತಳಿಗಳಾದ ಆಪೂಸ್‌ (ಬಾದಾಮಿ), ಪೈರಿ (ರಸಪೂರಿ), ತೋತಾಪುರಿ, ನೀಲಂ, ಮಲಗೋವಾ, ಮಲ್ಲಿಕಾ, ಬಂಗನಪಲ್ಲಿ, ಅಮರಪಲ್ಲಿ, ಅರ್ಕಾಪುನೀತ್‌, ಅರ್ಕಾನೀಲ್‌ ಕಿರಣ್‌, ಸಿಂಧೂ, ರತ್ನ ತಳಿಗಳನ್ನು ರೈತರು ಬೆಳೆಯುತ್ತಿದ್ದಾರೆ.

ಮಾವಿನ ಹೂವು ಕಾಯಿ ಕಟ್ಟಲಿಲ್ಲ: ರಾಜ್ಯವನ್ನು ಕಾಡುತ್ತಿರುವ ಬರ, ಮುಂಗಾರು- ಹಿಂಗಾರು ಮಳೆ ಕೊರತೆ, ವಾತಾವರಣದಲ್ಲಿ ತೇವಾಂಶ ಇಲ್ಲದಿರುವುದು ಮಾವಿನ ಫಸಲು ಕಡಿಮೆಯಾಗಲು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಭೂಮಿಯಲ್ಲಿ ತೇವಾಂಶ ಕೊರತೆಯಿಂದಾಗಿ ಮಾವಿನ ಹೂವು ಬಿಡುವ ಸಂದರ್ಭದಲ್ಲಿ ಹೆಚ್ಚು ಬಿಡಲಿಲ್ಲ. ನಿಂತ ಹೂವುಗಳು ಕೂಡ ಕಾಯಿ ಕಟ್ಟಲಿಲ್ಲ. ಮಾವಿನ ಬೆಳೆಗೆ ಕೀಟ, ರೋಗಗಳ ಬಾಧೆ ಮತ್ತು ಪೋಷಕಾಂಶಗಳ ಕೊರತೆಯಿಂದಲೂ ಸಹ ಇಳುವರಿ ಕಡಿಮೆಯಾಗಿದೆ. ಜೊತೆಗೆ ಕಾಂಡಕೊರಕ ರೋಗವೂ ಕಾಣಿಸಿಕೊಂಡು ಬೆಳೆಗಾರರ ನಿದ್ದೆಗೆಡಿಸಿದೆ. ಬರ, ತೇವಾಂಶ ಕೊರತೆ,ವಾತಾವರಣದಲ್ಲಿ ಉಷ್ಣಾಂಶ ಏರಿಕೆ, ಮಾವಿನ ಮರಗಳಿಗೆ ಕಾಡಿದ ರೋಗ, ಕೀಟ ಬಾಧೆಯಿಂದಾಗಿ ಮಾವಿನ ಇಳುವರಿ ಶೇ.50ರಷ್ಟು ಕಡಿಮೆಯಾಗಿದೆ. ಮರವನ್ನು ಕಾಡುತ್ತಿರುವ ಕಾಂಡ ಕೊರಕ ರೋಗದಿಂದ ಮಾವಿನ ಮರಗಳನ್ನು ಕಡಿದು ಹಾಕಲಾಗುತ್ತಿದೆ.
ವಿಜಯಕುಮಾರ್‌, ಮಾವು ಬೆಳೆಗಾರ, ಹಿರೇಎಮ್ಮಿಗನೂರು

ಕಾಂಡಕೊರಕ ರೋಗದಿಂದ ಬೆಳೆಗಾರರು ಮಾವಿನ ಮರಗಳನ್ನು ಕಡಿದು ಹಾಕುತ್ತಿದ್ದಾರೆ. ಮಾವಿನ ಮರಗಳ ಪುನಶ್ಚೇತನಕ್ಕೆ ಪ್ರತ್ಯೇಕ ಯೋಜನೆ ಇದೆ. ಯಾವುದೇ ಕಾರಣಕ್ಕೂ ಮರವನ್ನು ಕಡಿಯದೆ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಮಾವು ಇಳುವರಿ ಹೆಚ್ಚಿಸಲು ಮುಂದಾಗಬೇಕು.
– ಡಾ| ಬಾಲಕೃಷ್ಣ, ತೋಟಗಾರಿಕೆ ಇಲಾಖೆ ಉಪನಿರ್ದೇಶ

– ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.