ರಣತಂತ್ರ ಬದಲಿಸಿದ ‘ಪಂಚ ಫ‌ಲಿತಾಂಶ’


Team Udayavani, Mar 20, 2017, 12:52 PM IST

Kumaraswamy-H-D-4-600.jpg

ಬೆಂಗಳೂರು: ಪಂಚರಾಜ್ಯ ಅದರಲ್ಲೂ ವಿಶೇಷವಾಗಿ ಉತ್ತರಪ್ರದೇಶ ಚುನಾವಣಾ ಫ‌ಲಿತಾಂಶದ ನಂತರ ರಾಜ್ಯದಲ್ಲಿ ಜೆಡಿಎಸ್‌ ಚುನಾವಣಾ ರಣತಂತ್ರ ಬದಲಾಯಿಸಿಕೊಳ್ಳಲು ಮುಂದಾಗಿದ್ದು ‘ನಾಲ್ಕು ಸೂತ್ರ’ಕ್ಕೆ ಶರಣಾಗಿದೆ. ಒಂದು ವರ್ಷ ನಿರಂತರ ಸಮಾವೇಶ, ಜನಸಂಪರ್ಕ ಸಭೆ ಮತ್ತು ಗ್ರಾಮವಾಸ್ತವ್ಯ, ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆ, ಸ್ಥಳೀಯ ಸಮಸ್ಯೆ ಹಾಗೂ ಯುವ ನಾಯಕತ್ವಕ್ಕೆ ಆದ್ಯತೆ. ಈ ನಾಲ್ಕು ಸೂತ್ರದ ಆಧಾರದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದ್ದು. ಇದಕ್ಕಾಗಿಯೇ ಜೆಡಿಎಸ್‌ ಕೋರ್‌ ಕಮಿಟಿ ಸದಸ್ಯರನ್ನೂ ಒಳಗೊಂಡ ನಾನಾ ಕ್ಷೇತ್ರದ ಯುವ ತಜ್ಞರ ‘ಥಿಂಕ್‌ ಟ್ಯಾಂಕ್‌’ ತಂಡವೂ ರಚನೆಯಾಗಿದೆ.

ಈ ತಂಡ ಈಗಾಗಲೇ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲೂ ಸಮೀಕ್ಷೆ ನಡೆಸಿ ಸ್ಥಳೀಯ ಸಮಸ್ಯೆ, ವರ್ಚಸ್ವಿ ಹಾಗೂ ಪ್ರಭಾವಿ ಯುವ ನಾಯಕತ್ವ, ಗ್ರಾಮವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಳ್ಳಬಹುದಾದ ಪ್ರದೇಶಗಳ ಬಗ್ಗೆ ಪಟ್ಟಿ ಸಿದ್ಧಪಡಿಸಿದೆ. ಜನತೆ ಜತೆ ನಿರಂತರವಾಗಿ ಸಂಪರ್ಕ ಸಾಧಿಸುವ ‘ನಮ್ಮ ಎಚ್‌ಡಿಕೆ’ ಸಾಮಾಜಿಕ ಜಾಲತಾಣ ಹಾಗೂ ಬೆಂಗಳೂರಿನಲ್ಲಿ ಓಲಾ -ಉಬರ್‌ ಮಾದರಿಯಲ್ಲೇ ಟ್ಯಾಕ್ಸಿ ಚಾಲಕರಿಗಾಗಿ ಸಿದ್ಧಗೊಳ್ಳುತ್ತಿರುವ ‘ಎಚ್‌ಡಿಕೆ ಆ್ಯಪ್‌’ ಹಿಂದಿರುವುದು ಇದೇ ‘ಥಿಂಕ್‌ ಟ್ಯಾಂಕ್‌’ ಟೀಂ. ಜೆಡಿಎಸ್‌, ಮುಂದಿನ ಮೂರು ವರ್ಷದ ಯೋಜನೆ ಸಿದ್ಧಪಡಿಸಿದ್ದು 2018ರ ವಿಧಾನಸಭೆ, 2019ರ ಲೋಕಸಭೆ ಹಾಗೂ 2020ರಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ರಣತಂತ್ರ ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಕರ್ನಾಟಕ ಭಾಗದಲ್ಲಿ ಗ್ರಾಮವಾಸ್ತವ್ಯ, ಹಳೇ ಮೈಸೂರು ಭಾಗದಲ್ಲಿ ಜನಸಂಪರ್ಕ ಸಭೆ, ಉಳಿದ ಕಡೆ ಸಮಾವೇಶಗಳ ಮೂಲಕ ಪಕ್ಷದ ವರ್ಚಸ್ಸು ವೃದ್ಧಿಸುವುದು. ಸ್ಥಳೀಯವಾಗಿ ಪ್ರಭಾವ ಇರುವ ಯುವಸಮೂಹವನ್ನು ಪಕ್ಷದತ್ತ ಸೆಳೆಯಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಪ್ರಭಾವಿ ಮಾಧ್ಯಮವಾದ ಸಾಮಾಜಿಕ ಜಾಲತಾಣದ ಮೂಲಕ ನಿರಂತರವಾಗಿ ಜನಸಮೂಹದ ಜತೆ ಸಂಪರ್ಕ ಸಾಧಿಸಲು ಹಾಗೂ ಜಿಲ್ಲಾ ಮತ್ತು ವಿಭಾಗಾವಾರು ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಡುವ ಸಲುವಾಗಿಯೇ 30 ಯುವಕರ ತಂಡ ರಚಿಸಲಾಗಿದೆ ಎಂದು ಹೇಳಲಾಗಿದೆ.

‘ಶ್ರಮಜೀವಿ’ ಸಮಾವೇಶ: ಒಂದು ವರ್ಷ ನಿರಂತರ ಸಮಾವೇಶ ನಡೆಸಲು ತೀರ್ಮಾನಿಸಿರುವ ಜೆಡಿಎಸ್‌, ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬವಾದ ಮೇ 18ರಂದು ‘ಶ್ರಮಜೀವಿ’ ಹೆಸರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ತೀರ್ಮಾನಿಸಿದೆ. ಆ ಸಮಾವೇಶಕ್ಕೆ ಜನತಾಪರಿವಾರದ ಎಲ್ಲ ನಾಯಕರಿಗೂ ಆಹ್ವಾನ ನೀಡಲು ನಿರ್ಧರಿಸಲಾಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಪ್ರಾದೇಶಿಕ ಪಕ್ಷ ಅಗತ್ಯವೆಂಬ ಪ್ರತಿಪಾದನೆ ಜತೆಗೆ ಅದೇ ಕಾರಣಕ್ಕೆ ಈ ವಯಸ್ಸಿನಲ್ಲಿಯೂ ದೇಶ ಹಾಗೂ ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ ದೇವೇಗೌಡರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂಬುದನ್ನು ಬಿಂಬಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ನಿರಂತರ ಸಮಾವೇಶಗಳಿಗೆ ಮಾ.23 ರಂದು ಚಾಲನೆ ನೀಡಿ, ಆ ನಂತರ ಚಿತ್ರದುರ್ಗ, ಹುಬ್ಬಳ್ಳಿ, ಮೈಸೂರು, ಕಲಬುರಗಿ, ಬಳ್ಳಾರಿ ಭಾಗದಲ್ಲಿ ಹಿಂದುಳಿದ, ಅಲ್ಪಸಂಖ್ಯಾತ, ಮಹಿಳಾ ಸಮಾವೇಶ ನಡೆಸಲು ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಲನೆಯಾಗದ ಎಚ್‌ಡಿಕೆ ಹತ್ತು ದಿನ ಹುಬ್ಬಳ್ಳಿ ವಾಸ್ತವ್ಯ
ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಹಾಗೂ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಲು ತಿಂಗಳಲ್ಲಿ ಹತ್ತು ದಿನ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುತ್ತೇನೆಂದು ಹೇಳಿದ್ದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಅಲ್ಲಿ ಮನೆ ಮಾಡಿ ಗೃಹಪ್ರವೇಶ ಮಾಡಿದರೂ ತಿಂಗಳಲ್ಲಿ ಹತ್ತು ದಿನ ವಾಸ್ತವ್ಯ ಮಾಡುತ್ತಿಲ್ಲ. ಪ್ರಾರಂಭದಲ್ಲಿ ಕೆಲ ದಿನ, ಆ ನಂತರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಇದ್ದದ್ದು, ಇತ್ತೀಚೆಗೆ ಪ್ರವಾಸ ಕೈಗೊಂಡಾಗ ಹೋಗಿ ಬಂದದ್ದು ಬಿಟ್ಟರೆ ಹುಬ್ಬಳ್ಳಿ ಮನೆ ‘ಖಾಲಿ’ಯಾಗಿಯೇ ಇರುತ್ತದೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಅನಾರೋಗ್ಯ, ವಿಧಾನಸಭೆ ಅಧಿವೇಶದಿಂದಾಗಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲು ಸಾಧ್ಯವಾಗುತ್ತಿಲ್ಲ. ಏ.1 ರ ನಂತರ 15 ದಿನ ಹುಬ್ಬಳ್ಳಿಯಲ್ಲೇ ಕುಮಾರಸ್ವಾಮಿ ಇರಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸುತ್ತವೆ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.