ಬಿಎಸ್ ವೈ ಡೈರಿ ಠುಸ್ ಬಾಂಬ್? ಐಟಿ ಇಲಾಖೆ ಐಜಿ ಹೇಳಿದ್ದೇನು
Team Udayavani, Mar 20, 2017, 7:21 PM IST
ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಡೈರಿ ವಿವಾದಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಡಿಜಿ ಬಾಲಕೃಷ್ಣನ್ ಅವರು, ಐಟಿ ಇಲಾಖೆಯಿಂದ ಡೈರಿ ಮಾಹಿತಿ ಸೋರಿಕೆ ಆಗಿಲ್ಲ ಎಂದು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಸಿಕ್ಕ ಮಾಹಿತಿ ಬಹಿರಂಗಗೊಳಿಸುವಂತಿಲ್ಲ. ಹಾಗಾಗಿ ಐಟಿ ಇಲಾಖೆ ಯಾವುದೇ ಡೈರಿ ಮಾಹಿತಿ ಲೀಕ್ ಮಾಡಿಲ್ಲ ಎಂದು ಹೇಳಿದರು.
ಹಾಗಾದರೆ ಐಟಿ ಇಲಾಖೆ ದಾಳಿ ವೇಳೆ ಗೋವಿಂದರಾಜು ಅವರ ಮನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪಕಾಣಿಕೆ ಸಲ್ಲಿಸಿರುವ ವಿವರ ಇದ್ದ ಡೈರಿ ಸಿಕ್ಕಿದ್ದು ನಿಜವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಯಾವುದೇ ಉತ್ತರ ನೀಡಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕಾಂಗ್ರೆಸ್ ಎಂಎಲ್ ಸಿ ಗೋವಿಂದರಾಜು ಅವರ ಮನೆ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ್ದ ವೇಳೆ ಡೈರಿಯೊಂದು ಸಿಕ್ಕಿತ್ತು ಎನ್ನಲಾಗಿತ್ತು. ಬಳಿಕ ಡೈರಿ ಕುರಿತಂತೆ, ಸಿಎಂಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆಯಲ್ಲಿ 65 ಕೋಟಿ ಕಿಕ್ ಬ್ಯಾಕ್ ಪಾವತಿಯಾಗಿರುವ ಅಂಶ ಡೈರಿಯಲ್ಲಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬಾಂಬ್ ಸಿಡಿಸಿದ್ದರು.
ಈ ಆರೋಪ, ಪ್ರತ್ಯಾರೋಪದ ನಡುವೆ ಡೈರಿ ಮಾಹಿತಿ ರಾಷ್ಟ್ರೀಯ ಆಂಗ್ಲ ಮಾಧ್ಯಮವೊಂದರಲ್ಲಿ ಬಹಿರಂಗಗೊಂಡಿತ್ತು. ಆದರೆ ಡೈರಿ ವಿಚಾರ ಸತ್ಯಕ್ಕೆ ದೂರ ಎಂದು ಕಾಂಗ್ರೆಸ್ ಮುಖಂಡರು ವಾದಿಸಿದ್ದರು.
ಡೈರಿ ಯುದ್ಧದಲ್ಲಿ ಕಾಂಗ್ರೆಸ್ ನಾಯಕರು ತಿರುಗೇಟು ನೀಡುವ ನಿಟ್ಟಿನಲ್ಲಿ ಬಿಜೆಪಿ ವಿರುದ್ಧ ಸೀಡಿ ಬಿಡುಗಡೆ ಮಾಡಿದ್ದರು. ಇದರ ಪರಿಣಾಮ ಎಂಬಂತೆ ಬೆಂಗಳೂರಿನ ಸ್ಟೀಲ್ ಫ್ಲೈ ಓವರ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು