ವಿಧಾನಸಭೆ ಕಲಾಪ; ರಕ್ಷಣೆ ಕೊಡಿಸಿ, ಟಿವಿ ಮಾಧ್ಯಮದ ಮೇಲೆ ಶಾಸಕರ ಆಕ್ರೋಶ
Team Udayavani, Mar 22, 2017, 4:00 PM IST
ಬೆಂಗಳೂರು:ನಮ್ಮ ತಪ್ಪಿಲ್ಲದಿದ್ದರೂ ಮಾಧ್ಯಮಗಳು ತಪ್ಪು ತೋರಿಸುತ್ತಿವೆ. ಬಾಯಿಗೆ ಬಂದಂತೆ ಸ್ಟುಡಿಯೋದಲ್ಲಿ ಕುಳಿತು ಮಾತನಾಡುತ್ತಾರೆ. ಏನು ಬೇಕಾದ್ರೂ ಹೇಳುತ್ತಾರೆ. ಟಿವಿ ಮಾಧ್ಯಮದವರು ಮಾತನಾಡೋ ಬದಲು, ಗ್ರಾ ಪಂ ಪಂಚಾಯ್ತಿಗೆ ಸ್ಪರ್ಧಿಸಲಿ. ಆಗ ಗೊತ್ತಾಗುತ್ತೆ ಜನರ ಸಮಸ್ಯೆ ಏನು ಅಂತ…ಇದು ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಿಗೆ ಮಾಧ್ಯಮಗಳ ವಿರುದ್ಧ ಹೊರಹಾಕಿದ ಅಸಮಾಧಾನದ ಮಾತುಗಳು.
ಬುಧವಾರ ವಿಧಾಸಭಾ ಕಲಾಪದಲ್ಲಿ ನಿಯಮ 69ರ ಅಡಿ ನಡೆದ ಚರ್ಚೆಯಲ್ಲಿ ಮಾತನಾಡಿದ, ಶಾಸಕರಾದ ತಂಗಡಗಿ, ಬಿಆರ್ ಪಾಟೀಲ್, ರಾಜು ಕಾಗೆ, ಸುರೇಶ್ ಗೌಡ ಟಿವಿ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮಾಧ್ಯಮದವರಿಂದ ರಕ್ಷಣೆ ಕೊಡಿಸಿ ಎಂದು ಮನವಿ ಮಾಡಿದ ಪ್ರಸಂಗ ನಡೆಯಿತು.
ಯಾರು ಎಲ್ಲಿ ಕುಳಿತು ಏನು ಬೇಕಾದರು ಮಾತನಾಡಬಹುದು. ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರು ಮಾಡಬಹುದು? ಸದನದಲ್ಲಿ ತೂಕಡಿಸಿದ್ರು ಅದು ಸುದ್ದಿ. ನಾವೇನು ಮನುಷ್ಯರಲ್ಲವಾ? ಎಂದು ಅಳಂದದ ಕೆಜೆಪಿ ಶಾಸಕ ಬಿಆರ್ ಪಾಟೀಲ್ ಕಿಡಿಕಾರಿದರು.
ನಮ್ಮನ್ನು ಗೂಂಡಾಗಳು, ರೌಡಿಗಳು ಎಂದೆಲ್ಲಾ ಸಂಬೋಧಿಸಿ ಸುದ್ದಿ ಪ್ರಸಾರ ಮಾಡ್ತಾರೆ ಎಂದು ಶಾಸಕ ಸುರೇಶ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದರೆ, ಜೆಡಿಎಸ್ ಶಾಸಕ ಸಾರಾ ಮಹೇಶ್ ಮಾತನಾಡಿ, ಮಾಧ್ಯಮದವರ ಮೇಲೂ ಸಾಕಷ್ಟು ಆರೋಪಗಳಿವೆ. ಇವರೆಲ್ಲಾ ಸಾಚಾಗಳಾ? ಮಾಧ್ಯಮದಲ್ಲಿ ಇರೋರೆಲ್ಲಾ ಸತ್ಯಹರಿಶ್ಚಂದ್ರರಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು