ಶಿಕ್ಷಣ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ
Team Udayavani, Mar 24, 2017, 3:45 AM IST
ವಿಧಾನಸಭೆ: ಶಿಕ್ಷಕ ವರ್ಗ ಪರೀಕ್ಷಾ ಮೌಲ್ಯಧಿಮಾಪನ ಬಹಿಷ್ಕರಿಸಿ ಪ್ರತಿಭಟಿಸಿದರೆ ಆರು ತಿಂಗಳು ಜೈಲು ಅಥವಾ ಒಂದು ಲಕ್ಷದ ರೂಪಾಯಿವರೆಗೆ ದಂಡ ತೆರುವುದು ಸೇರಿದಂತೆ ಪರೀಕ್ಷಾ ಅಕ್ರಮ ಮತ್ತು ಮೌಲ್ಯಮಾಪನ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿಯೊಂದಿಗೆ ಅಂಗೀಕೃತವಾಗಿದ್ದ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕ-2017ಕ್ಕೆ ವಿಧಾನಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ.
ವಿಧಾನಸಭೆಯಲ್ಲಿ ಈ ಹಿಂದೆ ಅಂಗೀಕೃತವಾಗಿದ್ದ ಈ ವಿಧೇಯಕ ತೀವ್ರ ವಿವಾದಕ್ಕೆ ಒಳಗಾಗಿತ್ತು. ಅಲ್ಲದೆ, ಉಪನ್ಯಾಸಕರು ಮತ್ತು ಶಿಕ್ಷಕರ ವಿರೋಧಕ್ಕೂ ಕಾರಣವಾಗಿತ್ತು. ಹೀಗಾಗಿ ವಿಧಾನಪರಿಷತ್ತಿನಲ್ಲಿ ವಿಧೇಯಕ ತಡೆಹಿಡಿದು ತಿದ್ದುಪಡಿಗಾಗಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ನೀಡಿದ ವರದಿ ಆಧರಿಸಿ ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ ವಿಧೇಯಕಕ್ಕೆ ಮತ್ತಷ್ಟು ತಿದ್ದುಪಡಿಗಳನ್ನು ಮಾಡಿ ಅಂಗೀಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಮಾಡಿದ ತಿದ್ದುಪಡಿಗಳೊಂದಿಗೆ ವಿಧಾನಸಭೆಯಲ್ಲಿ ಮತ್ತೂಮ್ಮೆ ವಿಧೇಯಕವನ್ನು ಅಂಗೀಕರಿಸಲಾಯಿತು.
ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸುವ ಅಂಶವೂ ಈ ವಿಧೇಯಕದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ