ಸಿಎಂ ವಿರುದ್ಧ ಹಕ್ಕು ಚ್ಯುತಿ : ಆದೇಶ ಕಾಯ್ದಿರಿಸಿದ ಸ್ಪೀಕರ್‌


Team Udayavani, Mar 24, 2017, 3:45 AM IST

170323kpn69.jpg

ವಿಧಾನಸಭೆ:ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸದನಕ್ಕೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌ ಹಕ್ಕು ಚ್ಯುತಿ ಮಂಡಿಸಿದ ಪ್ರಸಂಗ ಗುರುವಾರ ನಡೆಯಿತು.

ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಜೆಪಿ ಸರ್ಕಾರದಲ್ಲಿ ಒಂದು ಪೈಸೆಯೂ ಪ್ರೋತ್ಸಾಹಧನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಪ್ಪು ಮಾಹಿತಿ ನೀಡಿದ ಸದನ ಹಾಗೂ ರಾಜ್ಯದ ಜನರ ದಾರಿ ತಪ್ಪಿಸಿದ್ದಾರೆ. ಇದರಿಂದ ನಮ್ಮ ಹಕ್ಕಿಗೆ ಚ್ಯುತಿಯಾಗಿದೆ. ಮುಖ್ಯಮಂತ್ರಿ ಉದ್ದೇಶ ಪೂರ್ವಕವಾಗಿಯೇ ಈ ರೀತಿಯ ಹೇಳಿಕೆ ನೀಡಿ, ಬಿಜೆಪಿ ವಿರುದ್ಧ ರಾಜಕೀಯ ಲಾಭ ಪಡೆಯುವ ದೃಷ್ಠಿಯಿಂದ ಈ ಹೇಳಿಕೆ ನೀಡಿದ್ದಾರೆ. ಇದು ಸದನ ಮತ್ತು ರಾಜ್ಯದ  ಜನತೆಗೆ ತಪ್ಪು ಸಂದೇಶ ರವಾನೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ವಿರುದ್ಧ ಹಕ್ಕು ಚ್ಯುತಿ ಮಂಡಿಸುವುದಾಗಿ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಹಕ್ಕು ಚ್ಯುತಿ ಮಂಡಿಸಿದರು.

ಅಲ್ಲದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೂ ಮತ್ತು ಸಹಾಯಕಿಯರಿಗೆ ಪ್ರತಿ ವರ್ಷವೂ ಒಂದಿಲ್ಲೊಂದು ರೀತಿಯಲ್ಲಿ ಹೆಚ್ಚಳ ಮಾಡಿದ್ದೇವೆ. 2006-07 ರಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 550 ರೂ. ಇತ್ತು. 2008-09 ರಲ್ಲಿ 750 ರೂ.ಗೆ ಹೆಚ್ಚಳ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಪ್ರತಿ ವರ್ಷ ಹೆಚ್ಚಳ ಮಾಡಲಾಗಿದ್ದು, 2013-14 ರ ವರೆಗೆ 2300 ರೂ.ಗೆ ಹೆಚ್ಚಳ ಮಾಡಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರ ಮಾತಿಗೂ ಬೆಲೆ ಕೊಡದೇ ನೀವು ಸುಳ್ಳುಗಾರರು, ಭಂಡರು, ಒಂದು ಪೈಸೆಯನ್ನೂ ಹೆಚ್ಚಿಸಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಒತ್ತಿ ಒತ್ತಿ ಹೇಳಿ ಸದನದ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಸಚಿವೆ ಉಮಾಶ್ರೀ ಹಾಗೂ ಕಾಂಗ್ರೆಸ್‌ ಸಿದ್ದುನ್ಯಾಮಗೌಡ, ಮುಖ್ಯಮಂತ್ರಿಯವರು ಮೊದಲಿಗೆ ಬಿಜೆಪಿ ಗೌರವ ಧನ ಹೆಚ್ಚಿಸಿಲ್ಲ ಎಂದು ಹೇಳಿದರಾದರೂ ನಂತರ ಒಮ್ಮೆ 200 ರೂ. ಹಾಗೂ ಮತ್ತೂಮ್ಮೆ 500 ರೂ. ಹೆಚ್ಚಿಸಿದ್ದಾರೆ. ಸಬೆjಕ್ಟ್ ಟು ಕರೆಕ್ಷನ್‌ ಅಂತಲೂ ಹೇಳಿದ್ದಾರೆ ಎಂದು ಸಮರ್ಥನೆ ನೀಡಿದರು. ಆದರೆ, ಬಿಜೆಪಿ ಸದಸ್ಯರು ಇದನ್ನು ಒಪ್ಪಿಕೊಳ್ಳಲಿಲ್ಲ.

ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಆರೋಗ್ಯ ಸಚಿವ ರಮೇಶ್‌ ಕುಮಾರ್‌, ಬಿಜೆಪಿಯ ಹಕ್ಕು ಚ್ಯುತಿ ಮಂಡನೆ ಸ್ವಾಗತ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ನಾನು ಸಮರ್ಥಿಸುತ್ತಿಲ್ಲ. ಅವರೂ ಕೂಡ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ತಪ್ಪು ತಿದ್ದಿಕೊಳ್ಳಲು ಮನುಷ್ಯನಿಗೆ ಅವಕಾಶವೇ ಇಲ್ಲವೇ ? ಕೋರ್ಟ್‌ಗಳಲ್ಲಿ ನ್ಯಾಯಾಧೀಶರಾದವರೆಲ್ಲ ನ್ಯಾಯ ಕೊಡುವುದಿಲ್ಲ. ನ್ಯಾಯ ಮತ್ತು ತೀರ್ಪಿಗೆ ಸಾಕಷ್ಟು ವ್ಯತ್ಯಾಸವಿದೆ. ಮುಖ್ಯಮಂತ್ರಿ ಬಾವೋದ್ವೇಗಕ್ಕೆ ಒಳಗಾಗಿ ಆ ರೀತಿಯ ಹೇಳಿಕೆ ನೀಡಿರುವುದರಿಂದ ಅವರು ತಮ್ಮ ತಪ್ಪನ್ನು ಸರಿ ಮಾಡಿಕೊಂಡಿದ್ದಾರೆ ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಂತೆ ಸ್ಪೀಕರ್‌ಗೆ ಮನವಿ ಮಾಡಿಕೊಂಡರು.

ರಮೇಶ್‌ ಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ಲಕ್ಷ್ಮಣ ಸವದಿ, ಉತ್ತಮ್‌ ಚಂದ್‌ ಗಾಂಧಿ ಎಂಬ ಗುಮಾಸ್ತನ ಕಥೆ ಹೇಳಿ, ಇತಿಹಾಸಕ್ಕೂ ವರ್ತಮಾನಕ್ಕೂ ವ್ಯತ್ಯಾಸ ಇದೆ ಎಂದರು. ಬಿಜೆಪಿಯ ಸಿಟಿ ರವಿ ಮಾತನಾಡಿ, ಮುಖ್ಯಮಂತ್ರಿಗಳು ಹಿರಿಯರು, ಮೂವತ್ತು ವರ್ಷ ಶಾಸಕರಾಗಿ ಅನುಭವ ಇರುವವರು, ನಮ್ಮಂಥ ಸಣ್ಣವರು ಮಾತು ತಪ್ಪಿ ಹೇಳಿದ್ದರೆ ಒಪ್ಪ ಬಹುದಿತ್ತು ಎಂದರು.

ಕಾನೂನು ಸಚಿವ ಟಿ.ಬಿ. ಜಯಚಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿಲ್ಲ. ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ಅಲ್ಲದೇ ತಮ್ಮ ಹೇಳಿಕೆಯನ್ನು ಆವಾಗಲೇ ಸರಿಪಡಿಸಿಕೊಂಡು ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಹಣ ನೀಡಿರುವ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಹಕ್ಕುಚ್ಯುತಿಗೆ ವ್ಯಾಪ್ತಿಗೆ ಬರುವುದಿಲ್ಲ. ಈ ಪ್ರಕರಣವನ್ನು ಕೈ ಬಿಡಬೇಕೆಂದು ಮನವಿ ಮಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌, ಮುಖ್ಯಮಂತ್ರಿಯಾದವರಿಗೆ ತಾಳ್ಮೆ, ಸಂಯಮ ಮುಖ್ಯ, ಸಾಕಷ್ಟು ಕೆಲಸದ ಒತ್ತಡ ಇರುತ್ತದೆ. ಹಾಗಂತ ಪ್ರತಿಪಕ್ಷಗಳ ಕಾರ್ಯವನ್ನು ನಿರ್ಲಕ್ಷಿಸುವುದು ಸರಿಯಲ್ಲ. ಇನ್ನು ಮುಂದಾದರೂ ಅವರು ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು. ಹಾಗೂ ಸ್ಪೀಕರ ಕೊಡುವ ತೀರ್ಮಾನಕ್ಕೆ ಬದ್ದನಾಗುವುದಾಗಿ ತಿಳಿಸಿದರು. ಆಡಳಿತ ಮತ್ತು ಪ್ರತಿಪಕ್ಷದ ವಾದ ಆಲಿಸಿದ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ ತೀರ್ಪು ಕಾಯ್ದಿರಿಸಿದರು.

ಹಕ್ಕು ಚ್ಯುತಿ ಮಂಡನೆ ಸಂದರ್ಭದಲ್ಲಿ ಬಿಜೆಪಿ ಸದಸ್ಯ ಲಕ್ಷ್ಮಣ ಸವದಿ ಉತ್ತಮ್‌ ಚಂದ್‌ ಗಾಂಧಿ ಎಂಬ ಗುಮಾಸ್ತನ ಕಥೆ ಹೇಳಿ, ಆತ ತನಗೆ ಬಂದಿರುವ ಉಡುಗೊರೆಯನ್ನು ರಾಜನಿಗೆ ನೀಡಲು ಹೋಗಿದ್ದಾ, ಆದರೆ, ರಾಜ ಗುಮಾಸ್ತನಿಗೆ ಬಂದಿರೋದು ನೀನೇ ಇಟ್ಟುಕೊ ಎಂದು ವಾಪಸ್‌ ಕಳುಹಿಸಿದಾ. ಆದರೆ, ನಮ್ಮ ರಾಜಕಾರಣಿಗಳು ಯಾರು ಹಾಗೆ ಮಾಡುತ್ತಾರೆ ಎಂದು ಪ್ರಶ್ನಿಸಿದ ಅವರು, ವಾಚ್‌ ಪ್ರಕರಣವಾದ ಮೇಲೆ ಮುಖ್ಯಮಂತ್ರಿಗೆ ಸಚಿವ ರಾಯರೆಡ್ಡಿ ಬೆಲೆ ಬಾಳುವ ಗಿಫ್ಟ್ ಕೊಟ್ಟಿದ್ದನ್ನು ಬಿಸಾಕಿದ್ದಾರೆ ಎಂದು ರಾಯರೆಡ್ಡಿ ಕಾಲೆಳೆದರು. ಅದಕ್ಕೆ ಪ್ರತಿಕ್ರಿಯಿಸಿದ ರಾಯರೆಡ್ಡಿ, ಬಿಸಾಕಿಲ್ಲಾ ವಾಪಸ್‌ ನೀಡಿದ್ದಾರೆ. ಅದು ನನ್ನ ಸ್ವಂತ ಹಣದಲ್ಲಿ ಖರೀದಿಸಿದ್ದೇನೆ. ಅದಕ್ಕೆ ರಸೀದಿ ಇದೆ ಎಂದು ಹೇಳಿದರು. ಆಗ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ರಸೀದಿ ಇದ್ದರೆ ಸದನಕ್ಕೆ ತಂದು ಒಪ್ಪಿಸಿ, ಇಲ್ಲದಿದ್ದರೆ ಕಷ್ಟವಾಗುತ್ತೆ ಎಂದಾಗ ಸದನದಲ್ಲಿ ನಗೆಯ ಅಲೆ ಮೂಡಿತು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.