ರಾಜ್ಯದಲ್ಲಿ 40 ಡಿಗ್ರಿ ಸೆ. ದಾಟಿದ ಉಷ್ಣತೆ


Team Udayavani, Mar 27, 2017, 2:30 AM IST

Temperature-Symbolic-650.jpg

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಾಪಮಾನ 40 ಡಿ.ಸೆ. ದಾಟಿದೆ. ರವಿವಾರ ಕಲಬುರಗಿಯಲ್ಲಿ 40.7 ಡಿ.ಸೆ. ಉಷ್ಣತೆ ದಾಖಲಾಗಿದ್ದು, ಇದು ರಾಜ್ಯದಲ್ಲಿಯೇ ಗರಿಷ್ಠವಾಗಿದೆ. ಶನಿವಾರ ಇಲ್ಲಿ 40.3 ಡಿ.ಸೆ. ದಾಖಲಾಗಿತ್ತು. ತಾಪಮಾನ ಇನ್ನೂ ಕೆಲವು ದಿನ ಏರುಗತಿಯಲ್ಲಿಯೇ ಇರಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಬೆಂಗಳೂರು ಹಾಗೂ ಹಾಸನದಲ್ಲಿ ಕ್ರಮವಾಗಿ 37.2 ಡಿಗ್ರಿ ಸೆಲ್ಸಿಯಸ್‌ ಹಾಗೂ 36.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು, ಇದು ಕಳೆದೆರಡು ದಶಕಗಳಲ್ಲಿ ಮಾರ್ಚ್‌ನಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ. ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್‌ ಮತ್ತು ಹಾಸನದಲ್ಲಿ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ಉಷ್ಣಾಂಶ ದಾಖಲಾಗಿದೆ. 1996ರ ಮಾ. 29 ಹಾಗೂ 30ರಂದು ಬೆಂಗಳೂರಿನಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಹಾಸನದಲ್ಲಿ 37.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇತ್ತು. ಇದು ಮಾರ್ಚ್‌ ತಿಂಗಳ ಸಾರ್ವಕಾಲಿಕ ದಾಖಲೆಯಾಗಿದೆ. ತಿಂಗಳಾಂತ್ಯಕ್ಕೆ ಇನ್ನೂ ಐದು ದಿನಗಳು ಬಾಕಿ ಇದ್ದು, ಬಿಸಿಲೂ ಏರುಗತಿಯಲ್ಲಿ ಸಾಗಿದ್ದರಿಂದ ಈ ದಾಖಲೆ ಸರಿಗಟ್ಟುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಹನಗಳ ದಟ್ಟಣೆ, ಕಾರ್ಖಾನೆಗಳು ಉಗುಳುವ ಹೊಗೆ, ಕಾಂಕ್ರೀಟ್‌ ಕಾಡು ಮತ್ತಿತರ ಕಾರಣಗಳು ಹಾಗೂ ಮಳೆ ಬಿದ್ದ ಅವಧಿಯಲ್ಲಿ ಸಾಕಷ್ಟು ಅಂತರ ಇವೆಲ್ಲದರಿಂದ ವರ್ಷದಿಂದ ವರ್ಷಕ್ಕೆ ದಾಖಲೆ ಪ್ರಮಾಣದ ಉಷ್ಣಾಂಶ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮುದ್ರದ ಕಡೆಯಿಂದ ಗಾಳಿ ಬೀಸಬೇಕಿತ್ತು. ಆದರೆ, ಗಾಳಿ ಬರುತ್ತಿಲ್ಲ. ಬಂದರೂ ನಗರದ ಒಳಗೆ ಬರಲು ಕಟ್ಟಡಗಳು, ಹೊಗೆ ತಡೆಯೊಡ್ಡುತ್ತಿವೆ. ಈ ಮಧ್ಯೆ ಬೇಸಗೆ ಕಾಲವಾಗಿದ್ದರಿಂದ ಬಿಸಿಲಿನ ಧಗೆ ಹೆಚ್ಚುತ್ತಿದೆ. ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚು – ಕಡಿಮೆ ಇದ್ದರೆ ಅಷ್ಟೇನೂ ಸಮಸ್ಯಾತ್ಮಕವಲ್ಲ. ಆದರೆ, ಬೆಂಗಳೂರು ಸಹಿತ ರಾಜ್ಯದಲ್ಲಿ ಉಷ್ಣಾಂಶ ವಿಪರೀತಕ್ಕೆ ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್‌.ಎಂ. ಮೆಟ್ರಿ ಹೇಳುತ್ತಾರೆ. ಉಷ್ಣಾಂಶ ಹೆಚ್ಚು ದಾಖಲಾಗುವುದಕ್ಕೆ ಬರೀ ಬಿಸಿಲು ಮಾತ್ರ ಪರಿಗಣನೆಗೆ ಬರುವುದಿಲ್ಲ. ಯಾವ ಭಾಗದಲ್ಲಿ ಮೋಡಗಳಿವೆ? ಗಾಳಿ ಯಾವ ದಿಕ್ಕಿನಿಂದ ಬೀಸುತ್ತಿದೆ? ವಾತಾವರಣದಲ್ಲಿ ತೇವಾಂಶ ಇಲ್ಲದಿರುವುದೂ ಮುಖ್ಯವಾಗುತ್ತದೆ. ಸಮುದ್ರದ ಕಡೆಯಿಂದ ಗಾಳಿ ಬೀಸಿದರೆ, ವಾತಾವರಣದಲ್ಲಿ ತೇವಾಂಶ ಇರುತ್ತದೆ. ಆದರೆ, ಆ ಸೂಚನೆಗಳು ಕಾಣಿಸುತ್ತಿಲ್ಲ ಎಂದು ಹವಾಮಾನ ಇಲಾಖೆಯ ನಿವೃತ್ತ ನಿರ್ದೇಶಕ ಪುಟ್ಟಣ್ಣ ಅಭಿಪ್ರಾಯಪಡುತ್ತಾರೆ.

ಕರಾವಳಿಯಲ್ಲಿಯೂ ಏರುತ್ತಿದೆ ತಾಪಮಾನ
ರಾಜ್ಯದ ಇತರೆಡೆಯಂತೆ ಕರಾವಳಿಯಲ್ಲಿಯೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಗಾಳಿ ಕಡಿಮೆ ಇರುವುದರಿಂದ ವಿಪರೀತ ಸೆಕೆ ಇದೆ. ರಾತ್ರಿ ವೇಳೆ ಮೋಡ ಕಾಣಿಸಿಕೊಂಡರೂ ಉಷ್ಣತೆಯಲ್ಲಿ ಹೆಚ್ಚು ಇಳಿಕೆಯಾಗುತ್ತಿಲ್ಲ. ರವಿವಾರ ಮಂಗಳೂರಿನಲ್ಲಿ 35.9 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 3 ಡಿ.ಸೆ. ಹೆಚ್ಚಾಗಿದೆ. ಕನಿಷ್ಠ ತಾಪಮಾನ 25.2 ಡಿ.ಸೆ. ದಾಖಲಾಗಿದ್ದು, ಇದೂ ಸಾಮಾನ್ಯಕ್ಕಿಂತ 2 ಡಿ.ಸೆ. ಹೆಚ್ಚಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.