ಮುಸ್ಲಿಮರು ಕಸ ಗುಡಿಸಿದ್ರೆ BJP ಟಿಕೆಟ್ ಕೊಡ್ತೇವೆ: ಕೆಎಸ್ ಈಶ್ವರಪ್ಪ
Team Udayavani, Mar 28, 2017, 5:57 PM IST
ಬೆಂಗಳೂರು: ಮುಸ್ಲಿಮರು ನಮ್ಮ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಿದ್ರೆ ಟಿಕೆಟ್ ಕೊಡ್ತೇವೆ..ಇದು ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಹರ್ಷದ್ ರಿಜ್ವಾನ್ ಅವರು ಮುಸ್ಲಿಮರಿಗೆ ನಿಮ್ಮ ಪಕ್ಷದಲ್ಲಿ ಎಷ್ಟು ಟಿಕೆಟ್ ಕೊಟ್ಟಿದ್ದೀರಿ ಎಂಬ ಪ್ರಶ್ನೆಗೆ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಕೊಟ್ಟ ಉತ್ತರ ಇದು!
ನಮ್ಮ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಿದ್ರೆ ಟಿಕೆಟ್ ಕೊಡುತ್ತೇವೆ ಎಂದು ಕೆಎಸ್ ಈಶ್ವರಪ್ಪ ಹೇಳಿದಾಗ, ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆಗ ಅಲ್ಪಸಂಖ್ಯಾತರಾದ ಡಾ.ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು ಯಾರು, ಜಾರ್ಜ್ ಫೆರ್ನಾಂಡಿಸ್ ರನ್ನು ಮಂತ್ರಿ ಮಾಡಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಬಿಜೆಪಿಯವರು ಮೊದಲಿನಿಂದಲೂ ಅಲ್ಪಸಂಖ್ಯಾತ ವಿರೋಧಿಗಳು ಎಂದು ಸಿಎಂ ಆರೋಪಿಸಿ, ಈಶ್ವರಪ್ಪ ಈ ರೀತಿ ಹೇಳಿಕೆ ನೀಡಬಾರದಿತ್ತು. ಈ ಪದವನ್ನು ಕಡತದಿಂದ ತೆಗೆದು ಹಾಕಿ ಎಂದಾಗ, ಕಸ ಗುಡಿಸುವುದು ಅಂದ್ರೆ ಪಕ್ಷಕ್ಕಾಗಿ ದುಡಿಯುವುದು, ಪೋಸ್ಟರ್ ಅಂಟಿಸುವುದು ಅಂತ ಅರ್ಥ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ