ಶಂಭುಲಿಂಗೇಶ್ವರ ಮಡಿತೇರು ಎಳೆದ ಮಹಿಳೆಯರು
Team Udayavani, Apr 12, 2017, 11:16 AM IST
ಸಿರುಗುಪ್ಪ: ನಗರದಲ್ಲಿ ಮಂಗಳವಾರ ಶ್ರೀಶಂಭುಲಿಂಗೇಶ್ವರಸ್ವಾಮಿ ಮಡಿತೇರು ಎಳೆದು ಮಹಿಳೆಯರು ಸಂಭ್ರಮಿಸಿದರು.ರಥೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗಿನ ಜಾವ ಬ್ರಾಹ್ಮಿ ಮುಹೂìತದಲ್ಲಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಅಗ್ನಿ ಕುಂಡದಲ್ಲಿ ಅಗ್ನಿ ಪುಟರಾಧನೆ ನಡೆಯಿತು.
ಶಂಭುಲಿಂಗೇಶ್ವರನ ಉದ್ಭವ ಲಿಂಗಕ್ಕೆ ಮಹಾ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಶತನಾಮಾವಳಿ ಪಠಣ ಕಾರ್ಯಕ್ರಮಗಳು ನಡೆದವು.
ಶಂಭುಲಿಂಗೇಶ್ವರನಿಗೆ ಆಭರಣ, ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಕಾಶಿ ವೇಷ ಧರಿಸಿದ ಬಸವಯ್ಯ ವೀರಭದ್ರ ದೇವರ ಒಡಪುಗಳನ್ನು ಹೇಳುತ್ತಾ ಸಮೇಳ, ಮಂಗಳವಾದ್ಯಗಳೊಂದಿಗೆ ದೇವರ ಉತ್ಸವ ಮೂರ್ತಿಗಳನ್ನು ತುಂಗಭದ್ರಾ ನದಿ ತೀರದಲ್ಲಿ ಗಂಗೆಪೂಜೆ ನೆರವೇರಿಸಿದರು. ಬಳಿಕ, ದೇವರ ಉತ್ಸವ ಮೂರ್ತಿ ಹೊತ್ತ ಅರ್ಚಕರು ಸೇರಿದಂತೆ ಭಕ್ತರು ಅಗ್ನಿ ಕುಂಡದಲ್ಲಿ ನಡೆದು ಹರಕೆ ತೀರಿಸಿದರು. ಬಳಿಕ, ದೇವಸ್ಥಾನದ ಆವರಣದಲ್ಲಿ ಎದುರು ಬಸವ ಮಂಟಪದವರೆಗೆ ದೇವರ ಉತ್ಸವ ಮೂರ್ತಿಯನ್ನು ಮಡಿತೇರಿನಲ್ಲಿ ಪ್ರತಿಷ್ಠಾಪಿಸಿ ಮಹಿಳೆಯರು ಮಡಿತೇರು ಎಳೆದರು.
ಐತಿಹಾಸಿಕ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷ ಚೈತ್ರಮಾಸದ ದವನ ಹುಣ್ಣಿಮೆಯಂದು ಶಂಭುಲಿಂಗೇಶ್ವರಸ್ವಾಮಿ
ರಥೋತ್ಸವ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ