ಬೆಟದೂರು ತಾಂಡಾಕ್ಕೆ ಆರೋಗ್ಯ ಇಲಾಖೆ ಭೇಟಿ
Team Udayavani, Apr 12, 2017, 12:40 PM IST
ರಾಯಚೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾನ್ವಿ ತಾಲೂಕು ಬೆಟ್ಟದೂರು ತಾಂಡಾ ನಿವಾಸಿಗಳ ಆರೋಗ್ಯ ವಿಚಾರಣೆಗೆ ಆರೋಗ್ಯ ಇಲಾಖೆ ದೌಡಾಯಿಸಿದೆ.
ತಾಂಡಾದಲ್ಲಿ ಅಶುದ್ಧ ಕುಡಿಯುವ ನೀರಿನಿಂದಾಗಿ ಬಹುತೇಕ ನಿವಾಸಿಗಳು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕುರಿತು ಉದಯವಾಣಿ ಏ.8ರ ಸಂಚಿಕೆಯಲ್ಲಿ “ಬೆಟ್ಟದೂರು ತಾಂಡಾದಲ್ಲಿ ಶೇ.90 ಜನರಿಗೆ ಕಿಡ್ನಿ ಸ್ಟೋನ್’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಇಲಾಖೆ, ತಾಂಡಾಕ್ಕೆ ಭೇಟಿ ನೀಡಿ ಜನರ ಆರೋಗ್ಯ ಪರೀಕ್ಷಿಸಿದೆ.ಮೂರು ತಂಡಗಳಿಂದ ತಾಂಡಾದ 300ಕ್ಕೂ ಅಧಿಕ ನಿವಾಸಿಗಳ ಆರೋಗ್ಯ ಪರೀಕ್ಷಿಸಲಾಗಿದೆ. ಕಿಡ್ನಿ, ಕೀಲುನೋವು ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವವರಿಂದ ಮಾಹಿತಿ ಪಡೆಯಲಾಗಿದೆ.
ಇದು ಮೇಲ್ನೋಟಕ್ಕೆ ನೀರಿನಿಂದಾದ ಸಮಸ್ಯೆ ಎಂಬುದು ಖಚಿತವಾಗುತ್ತಿದೆ. ಹೀಗಾಗಿ ಶುದಟಛಿ ಕುಡಿವ ನೀರಿನ ಘಟಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು. ಅಲ್ಲಿವರೆಗೆ ಬೇರೆ ಕಡೆಯಿಂದ ನೀರು ಪಡೆದು ಸೇವಿಸುವಂತೆ ಗ್ರಾಮಸ್ಥರಿಗೆ ಸೂಚಿಸಿದ್ದಾರೆ.
ಬೆಟ್ಟದೂರು ತಾಂಡಾದ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತೆರಳಿ ನಿವಾಸಿಗಳ ತಪಾಸಣೆ ನಡೆಸಲಾಗಿದೆ. ನೀರಿನಲ್ಲಿ ಫ್ಲೋರೈಡ್, ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುವ ಸಾಧ್ಯತೆಗಳಿವೆ. ಕೊಳವೆ ಬಾವಿಗಳ ನೀರಿನ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. 48 ಗಂಟೆಗಳಲ್ಲಿ ವರದಿ ಬರಲಿದ್ದು, ಸಮಸ್ಯೆಗೆ ನಿಖರ ಕಾರಣ ಗೊತ್ತಾಗಲಿದೆ. ತಾಂಡಾಕ್ಕೆ ಶುದಟಛಿ ನೀರು ಪೂರೈಕೆ ಅಗತ್ಯವಾಗಿದೆ.
– ನಾರಾಯಣಪ್ಪ, ಜಿಲ್ಲಾ ಆರೋಗ್ಯಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ