12 ವರ್ಷಗಳ ಬಳಿಕ 45 ಡಿಗ್ರಿ ಸೆ. ಸಂಭವ


Team Udayavani, Apr 16, 2017, 12:24 PM IST

Sun.jpg

ರಾಯಚೂರು: ಹನ್ನೆರಡು ವರ್ಷಗಳ ಬಳಿಕ ಮತ್ತೆ 45 ಡಿಗ್ರಿ ಸೆಲ್ಸಿಯಸ್‌ ಬಿಸಿಲಿನತ್ತ ದಾಪುಗಾಲು ಹಾಕಿರುವ ಹೈದರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳಲ್ಲೀಗ 43 ಡಿಗ್ರಿ ಬಿಸಿಲು.ಸೂರ್ಯನ ಉಷ್ಣಾಂಶದ ಜತೆಗೆ ಬಿಸಿಗಾಳಿ ಹೆಚ್ಚುತ್ತಿದ್ದು, ಎರಡು ತಿಂಗಳು ಕಳೆಯುವುದು ಈ ಭಾಗದ ಜನರಿಗೆ ಅಕ್ಷರಶಃ ಅಗ್ನಿಪರೀಕ್ಷೆಯಾಗಿದೆ.

ಬೆಳಗ್ಗೆ 10 ಗಂಟೆಗೆಲ್ಲ ಬಿಸಿಲಿನ ಪ್ರಖರತೆ ಹೆಚ್ಚುತ್ತಿದ್ದು, ಸಂಜೆ ಆರು ಗಂಟೆಯಾದರೂ ಕಡಿಮೆಯಾಗುತ್ತಿಲ್ಲ. ಏಪ್ರಿಲ್‌ನಲ್ಲೇ ಈ ಪ್ರಮಾಣದಲ್ಲಿರುವ ಬಿಸಿಲು ಮೇ ವೇಳೆಗೆ ಮತ್ತಷ್ಟು ಭಯಂಕರವಾಗುವ ಸಾಧ್ಯತೆಯಿದೆ. ಹವಾಮಾನ ಕೇಂದ್ರದ ಸೂಚನೆಯಂತೆ ಕಳೆದ ಬಾರಿಗಿಂತ ಒಂದು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಹೆಚ್ಚಲಿದೆ. ಕಳೆದ ವರ್ಷ ಮೇ ತಿಂಗಳಲ್ಲಿ 44 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಈ ಬಾರಿ 45 ಡಿಗ್ರಿ ತಲುಪುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. 

ಹಿಂದೆಯೂ ದಾಖಲಾಗಿತ್ತು: 2000 ಹಾಗೂ 2003ರ ಮೇ ತಿಂಗಳಲ್ಲಿ 45 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿತ್ತು. ಉಳಿದ ವರ್ಷಗಳಲ್ಲಿ 42ರ ಗಡಿ ಮೀರಿದ ಬಿಸಿಲು ದಾಖಲಾಗಿದ್ದರೂ 45 ಡಿಗ್ರಿ ತಲುಪಿರಲಿಲ್ಲ. ಆದರೆ, ಉತ್ತರ ಭಾರತದಿಂದ ಬರುತ್ತಿರುವ ಉಷ್ಣ ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ
ವಾತಾವರಣ ಕಾವೇರುತ್ತಿದೆ. ಈಗಾಗಲೇ ತೆಲಂಗಾಣ, ಆಂಧ್ರದ ವಿವಿಧೆಡೆ 43ರ ಗಡಿ ದಾಟಿದೆ. ಇನ್ನು ಕರ್ನಾಟಕದ ಸರದಿ ಎನ್ನುತ್ತಾರೆ ಹವಾಮಾನ ತಜ್ಞರು. ಕೊಪ್ಪಳ, ಗದಗ ಜಿಲ್ಲೆಯಲ್ಲಿ ಶನಿವಾರ ಉಷ್ಣಾಂಶದಿಂದ ಬಾಲಕ ಮತ್ತು ರೈತ ಮೃತಪಟ್ಟಿದ್ದಾರೆ. ದೇಹದಲ್ಲಿ ನಿರ್ಜಲೀಕರಣದಿಂದ ತಲೆ ಸುತ್ತು
ಬರುವುದು, ವಾಂತಿ, ಭೇದಿಯಂಥ ಸಮಸ್ಯೆಗಳು ಕಾಡುತ್ತಿವೆ. ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಹೆಚ್ಚು ಮಂದಿ ಇದೇ ಸಮಸ್ಯೆಗೆ ತುತ್ತಾದವರಿದ್ದಾರೆ. ಮಕ್ಕಳಲ್ಲಿ ಹೆಚ್ಚು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಧ್ಯಾಹ್ನ 12ರಿಂದ ಸಂಜೆ ನಾಲ್ಕು ಗಂಟೆವರೆಗೆ ಸೂರ್ಯನ ಅತಿ ನೇರಳೆ ಕಿರಣಗಳು
ಹೆಚ್ಚಾಗಿರುವುದರಿಂದ ಆ ಹೊತ್ತಲ್ಲಿ ಕೆಲಸ ಮಾಡುವುದು, ಓಡಾಡುವುದು ಅಪಾಯ ಕಾರಿ. ಅದು ಜೀವಕ್ಕೆ ಅಪಾಯ ತರುವ ಸಾಧ್ಯತೆ ಉಂಟು ಎನ್ನುತ್ತಾರೆ ವೈದ್ಯರು.

ಸರ್ಕಾರ ಕೂಡ ಉದ್ಯೋಗ ಖಾತ್ರಿ ಕೂಲಿ ಕೆಲಸದ ಅವಧಿಧಿಯನ್ನು ಶೇ.25ರಷ್ಟು ಕಡಿತಗೊಳಿಸಿದೆ. ಕಡಿಮೆ ಕೆಲಸ ಮಾಡಿದರೂ ಪೂರ್ತಿ ಕೂಲಿ ಹಣ ಪಾವತಿಸಲಾಗುತ್ತಿದೆ. ಇನ್ನು ಬಿಸಿಲಿಗೆ ಬಸವಳಿದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ವಿವಿಧ ಸಂಘ-ಸಂಸ್ಥೆಗಳು ಸಕ್ರಿಯವಾಗಿವೆ. ನಗರದ ಬಹುತೇಕ ಕಡೆ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪಿಸಲಾಗಿದೆ. ರಾಜಸ್ತಾನಿ ಕನ್ನಡಿಗರ ಬಳಗ ನಿತ್ಯ ಮಧ್ಯಾಹ್ನ ಒಂದು ಗಂಟೆ ಕಾಲ ತಂಪು ಪಾನೀಯ ವಿತರಿಸುತ್ತಿದೆ. ಆದರೆ ನದಿ, ಹಳ್ಳ ಕೊಳ್ಳಗಳು ಬತ್ತಿ ಹೋಗಿದ್ದು, ಜಾನುವಾರುಗಳಿಗೆ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಒಟ್ಟಿನಲ್ಲಿ ಈ ಎರಡು ತಿಂಗಳು ಕಳೆದರೆ ಸಾಕು ಎನ್ನುವಂತಾಗಿದೆ ಜನರ ಮನಸ್ಥಿತಿ.

ಕಳೆದ ವರ್ಷಕ್ಕೆ ಹೋಲಿಸಿದರೆ ಒಂದು ಡಿಗ್ರಿ ಸೆಲ್ಸಿಯಸ್‌ ಬಿಸಿಲು ಹೆಚ್ಚಾಗಿದೆ. ಭಾರತ ಹವಾಮಾನ ಕೇಂದ್ರ ಸೂಚನೆಯನ್ವಯ ಈ ಬಾರಿ ಮೇನಲ್ಲಿ 45 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾದರೂ ಅಚ್ಚರಿಯಿಲ್ಲ. ಬಿಸಿಲಿನಿಂದಾಗುವ ಸಮಸ್ಯೆಗಳ ಬಗ್ಗೆ ಜನ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.
– ವಿಶ್ವನಾಥ ಬಿರಾದಾರ, ಹವಾಮಾನ ತಜ್ಞ 

ನಿರ್ಜಲೀಕರಣದಿಂದ ರಿಮ್ಸ್‌ಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ 2ರಿಂದ 3 ಮಕ್ಕಳನ್ನು ದಾಖಲಿಸಲಾಗುತ್ತಿದೆ. ಅದಕ್ಕೆ ಬೇಕಾದ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ಮಕ್ಕಳನ್ನು ಹೆಚ್ಚು ಬಿಸಿಲಲ್ಲಿ ಬಿಡದಂತೆ ಎಚ್ಚರ ವಹಿಸಬೇಕು. ಉಳಿದಂತೆ ವಾಂತಿ,
ಭೇದಿ, ತಲೆಸುತ್ತು ಸಮಸ್ಯೆಯಿಂದ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

-ಡಾ| ಕವಿತಾ ಪಾಟೀಲ,ರಿಮ್ಸ್‌ ಪ್ರಭಾರ ನಿರ್ದೇಶಕರು

ಬಿಸಿಲಿನ ಪ್ರಮಾಣ ಹೆಚ್ಚಿರುವ ಕಾರಣ ಸರ್ಕಾರ ಉದ್ಯೋಗ ಖಾತ್ರಿ ಕೆಲಸದ ಅವಧಿಧಿಯನ್ನು ಶೇ.25ರಷ್ಟು ಕಡಿತಗೊಳಿಸಿದೆ. ಕುಡಿವ ನೀರಿನ ಸಮಸ್ಯೆ ಆಗದಂತೆ ಎಚ್ಚೆತ್ತುಕೊಂಡಿದ್ದು, ಅಗತ್ಯ ಬಿದ್ದರೆ ಟ್ಯಾಂಕರ್‌ ಮೂಲಕ ಪೂರೈಸಲಾಗುವುದು. ಬಿಸಿಲಿನಿಂದಾಗುವ ಸಮಸ್ಯೆಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಎಲ್ಲ ಆಸ್ಪತ್ರೆಗಳಿಗೆ ತಿಳಿಸಲಾಗಿದೆ.
– ಡಾ| ಬಗಾದಿ ಗೌತಮ, ಜಿಲ್ಲಾಧಿಧಿಕಾರಿ

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.