ಕಟ್ಟಪ್ಪನ ಮೇಲಿನ ಸಿಟ್ಟು “ಬಾಹುಬಲಿ 2′ ಮೇಲೆ ಬೇಡ್ರಪ್ಪ


Team Udayavani, Apr 21, 2017, 3:45 AM IST

raJAMOULI.jpg

ಬೆಂಗಳೂರು: ಸತ್ಯರಾಜ್‌ ಅವರ ಅಭಿಪ್ರಾಯ ಏನೇ ಇದ್ದರೂ ಅದು ವೈಯಕ್ತಿಕ. ಅದಕ್ಕೂ ಚಿತ್ರಕ್ಕೂ ಸಂಬಂಧವಿಲ್ಲವಾದ್ದರಿಂದ, ಚಿತ್ರ ಬಿಡುಗಡೆ ಮಾಡುವುದಕ್ಕೆ ಅನುವು ಮಾಡಿಕೊಡಬೇಕೆಂದು ನಿರ್ದೇಶಕ ರಾಜಮೌಳಿ ಮನವಿ ಮಾಡಿದ್ದಾರೆ.

ಕಾವೇರಿ ನದಿಯ ವಿಷಯವಾಗಿ ಕನ್ನಡ ಮತ್ತು ಕರ್ನಾಟಕದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ತಮಿಳು ನಟ ಸತ್ಯರಾಜ್‌ ಅವರು ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರು ಅಭಿನಯಿಸಿರುವ “ಬಾಹುಬಲಿ 2′ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬುಧವಾರವಷ್ಟೇ ತಿಳಿಸಿದ್ದರು. 

ಜೊತೆಗೆ, ಚಿತ್ರ ಬಿಡುಗಡೆಯಾಗುತ್ತಿರುವ ಏಪ್ರಿಲ್‌ 28ರಂದು ಬೆಂಗಳೂರು ಬಂದ್‌ ಮಾಡುವುದಾಗಿ ಹೇಳಿದ್ದರು. ಈ ವಿಷಯವಾಗಿ “ಬಾಹುಬಲಿ 2′ ಚಿತ್ರದ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಅವರು ಗುರುವಾರ ಬೆಳಗ್ಗೆ ಒಂದು ವೀಡಿಯೋ ಬಿಡುಗಡೆ ಮಾಡಿದ್ದಾರೆ. ಈ ವೀಡಿಯೋದಲ್ಲಿ, ಚಿತ್ರವನ್ನು ಕರ್ನಾಟಕದಾದ್ಯಂತ ಬಿಡುಗಡೆ ಮಾಡುವುದಕ್ಕೆ ಅನುವು ಮಾಡಿಕೊಡಬೇಕೆಂದು ಕನ್ನಡಿಗರನ್ನು ಕೇಳಿಕೊಂಡಿದ್ದಾರೆ.

ನಮಗೂ ಬೇಸರವಿದೆ:
“ಸತ್ಯರಾಜ್‌ ಅವರ ಕೆಲವು ಮಾತುಗಳಿಂದ ಕನ್ನಡಿಗರಿಗೆ ನೋವಾಗಿದೆ ಎಂಬ ಬೇಸರ ನಮಗೂ ಇದೆ. “ಬಾಹುಬಲಿ’ ಚಿತ್ರಕ್ಕೂ ಸತ್ಯರಾಜ್‌ ಮಾತುಗಳಿಗೂ ಯಾವ ಸಂಬಂಧವೂ ಇಲ್ಲ. ಈ ಚಿತ್ರವನ್ನು ನಿರ್ಮಾಣ ಮಾಡಿದವರು ಅವರಲ್ಲ. ಈ ಚಿತ್ರಕ್ಕಾಗಿ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮುಂತಾದ ಯಾವ ವಿಭಾಗದಲ್ಲೂ ಅವರು ಕೆಲಸ ಮಾಡಿರಲಿಲ್ಲ. ಅವರು ಒಂದು ಪಾತ್ರದಲ್ಲಿ ನಟಿಸಿದ್ದಾರಷ್ಟೇ. ಅದಕ್ಕೆ ಸಂಭಾವನೆಯನ್ನು ಪಡೆದಿದ್ದಾರೆ. ಸತ್ಯರಾಜ್‌ ಅಭಿಪ್ರಾಯ ಏನೇ ಇದ್ದರೂ ಅದು ವೈಯಕ್ತಿಕವೇ ಹೊರತು ಚಿತ್ರತಂಡದಲ್ಲ. ಓರ್ವ ನಟನ ವೈಯಕ್ತಿಕ ಅಭಿಪ್ರಾಯದಿಂದಾಗಿ ಆತ ನಟಿಸಿರುವ ಒಂದು ಚಿತ್ರಕ್ಕೆ ಅಡ್ಡಿ ಉಂಟಾಗುವುದು ಸರಿಯಲ್ಲ’ ಎಂದು ರಾಜಮೌಳಿ ಹೇಳಿದ್ದಾರೆ.

ಸತ್ಯರಾಜುಗೇನು ನಷ್ಟವಿಲ್ಲ:
ಈ ವಿಚಾರದ ಕುರಿತು ಸತ್ಯರಾಜ್‌ ಅವರಿಗೆ ಫೋನ್‌ ಮಾಡಿ ಪರಿಸ್ಥಿತಿಯನ್ನು ತಿಳಿಸಿದ್ದಾಗಿ ಹೇಳುವ ರಾಜಮೌಳಿ , “ಅದಕ್ಕೂ ಮೀರಿದ ಶಕ್ತಿ ನಮಗಿಲ್ಲ. ಒಂಭತ್ತು ವರ್ಷಗಳ ಹಿಂದೆ ಸತ್ಯರಾಜ್‌ ಅವರು ಈ ರೀತಿ ಮಾತನಾಡಿದ್ದಾರೆ. ಆ ನಂತರ ಅವರು ನಟಿಸಿರುವ, ನಿರ್ಮಾಣ ಮಾಡಿರುವ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆ ಆಗಿವೆ. “ಬಾಹುಬಲಿ’ ಸಹ ಬಿಡುಗಡೆ ಆಗಿದೆ. ಅವುಗಳನ್ನು ಪ್ರೋತ್ಸಾಹಿಸಿದ್ದ ಹಾಗೆಯೇ “ಬಾಹುಬಲಿ – 2′ ಚಿತ್ರವನ್ನು ಸಹ ಪ್ರೀತಿಯಿಂದ ನೋಡಬೇಕಾಗಿ ನಮ್ಮ ವಿನಂತಿ. ಈ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದರಿಂದ  ಸತ್ಯರಾಜ್‌ ಅವರಿಗೆ ಆಗುವ ಕಷ್ಟ ನಷ್ಟ ಏನೂ ಇಲ್ಲ. ಐದು ವರ್ಷಗಳ ಕಾಲ ಕಷ್ಟಪಟ್ಟು ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರು, ಹಂಚಿಕೆದಾರರು ಮತ್ತು ಪ್ರೇಕ್ಷಕರ ಕುತೂಹಲಕ್ಕೆ ತಣ್ಣೀರೆರಚಿದಂತಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಸತ್ಯರಾಜ್‌ ಅವರ ಮೇಲಿನ ಕೋಪವನ್ನು “ಬಾಹುಬಲಿ 2′ ಮೇಲೆ ತೋರಿಸಬಾರದೆಂದು ಎಂದು ವಿನಂತಿಸಿಕೊಳ್ಳುವ ಅವರು, ಕನ್ನಡಿಗರು “ಬಾಹುಬಲಿ – 2′ ಚಿತ್ರವನ್ನು ಪ್ರೋತ್ಸಾಹಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.